AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಹೆಚ್.​ಡಿ. ಕುಮಾರಸ್ವಾಮಿಯದ್ದು ಬಾಲಿಶ ಹೇಳಿಕೆ ಎಂದ ಪ್ರಲ್ಹಾದ್ ಜೋಶಿ

ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ​ಡಿ. ಕುಮಾರಸ್ವಾಮಿ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Pralhad Joshi: ಹೆಚ್.​ಡಿ. ಕುಮಾರಸ್ವಾಮಿಯದ್ದು ಬಾಲಿಶ ಹೇಳಿಕೆ ಎಂದ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 18, 2023 | 2:46 PM

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ​ಡಿ. ಕುಮಾರಸ್ವಾಮಿ (HD Kumaraswamy) ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಶತಮಾನಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಂತಹ ನಾಯಕರು ಸಿಗುತ್ತಾರೆ. ಅವರ ಕೈಕೆಳಗೆ ಕೆಲಸ ಮಾಡುವುದು ನನ್ನ ಸೌಭಾಗ್ಯ ಎಂದು ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಜಿಮಖಾನಾ ಮೈದಾನದಲ್ಲಿ ನಿರ್ಮಿಸಲಾಗಿರುವ ಕೇದಾರನಾಥ ಮಾದರಿಯ ಶಿವಲಿಂಗ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶಿವರಾತ್ರಿ ಹಬ್ಬದ ಶುಭಾಶಯ ತಿಳಿಸಿದರು. ಬಳಿಕ ಪ್ರಧಾನಿ ಮೋದಿ ಕೈಕೆಳಗೆ ಕೆಲಸ ಮಾಡೋದು ನನ್ನ ಸೌಭಾಗ್ಯ. ಶತಮಾನಕ್ಕೊಮ್ಮೆ ಮೋದಿ ಅಂತ ನಾಯಕರು ಸಿಗ್ತಾರೆ. ಅವರ ಕೈ ಕೆಳಗೆ ಕೆಲಸ ಮಾಡೋದು ನನ್ನ ಸೌಭಾಗ್ಯ. ಜಗತ್ತು ಮೋದಿ ಸ್ವೀಕಾರ ಮಾಡಿದೆ, ಅವರ ಕೈ ಕೆಳಗೆ ಕೆಲಸ ಮಾಡೋದು ನನ್ನ ಸೌಭಾಗ್ಯ.ಇಂತಹ ಬಾಲಿಶ, ಅಪ್ರಬುದ್ಧ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ:  ಶಾಸಕ ಎಸ್ ಆರ್ ಶ್ರೀನಿವಾಸ್​​ ಸಂಬಂಧಿಯಿಂದ ಕುಕ್ಕರ್​ ಗಿಫ್ಟ್​​: ಮತದಾರ ಘೆರಾವ್​

ಕಿವಿಯಲ್ಲಿ ಹೂವು ಇಟ್ಟುಕೊಂಡು ಕಾಂಗ್ರೆಸ್ಸಿಗರು ಲೇವಡಿ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಡವರ ಸ್ನೇಹಿ, ರೈತ ಸ್ನೇಹಿ ಬಜೆಟ್ ಮಂಡಿಸಿದ್ದಾರೆ. ಚುನಾವಣೆ ವೇಳೆ ಕಾಲೆಳೆಯೋದು ಹಕ್ಕು ಎಂದು ಭಾವಿಸುತ್ತಾರೆ. ಆದರೆ ದೌರ್ಭಾಗ್ಯದಿಂದ ವೈಯಕ್ತಿಕ ಟೀಕೆ ಮಾಡ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಮೇಲೆ ಜನ ಹೂವು ಇಟ್ಟಿದ್ದಾರೆ. ಜನ ಹೂವು ಇಟ್ಟಿದ್ದು ನೋಡಿದರೆ ಕಾಂಗ್ರೆಸ್ ಎದ್ದು ಬರಲು ಆಗಲ್ಲ. ಸ್ವಾತಂತ್ರ್ಯ ತಂದುಕೊಟ್ಟಿದ್ದು ನಾವೇ ಅಂತ ಜನರ ಮೇಲೆ ಹೂ ಇಟ್ಟಿದ್ದರು. ಈಗ ಕಾಂಗ್ರೆಸ್​ನವರೇ ಹೂವು ಇಟ್ಟುಕೊಂಡಿರುವುದು ಸಂತೋಷ ಎಂದು ಹೇಳಿದರು.

ಜೋಶಿ ಕಚೇರಿಯಲ್ಲಿ ಬ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು ನಾನು ಈ ಬಗ್ಗೆ ಈಗಲೇ ಸ್ಪಷ್ಟಪಡಿಸಿದ್ದೇನೆ‌‌. ನಾನು ಈ ಕುರಿತು ಲೀಗಲ್ ನೋಟಿಸ್ ಕೊಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 18 February 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ