AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿಯಿಂದ ಸೆ. 26ಕ್ಕೆ ಧಾರವಾಡ ಐಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ

ಧಾರವಾಡ ಹೊರವಲಯದ ತಡಸಿನಕೊಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಐಐಟಿ ಕ್ಯಾಂಪಸ್​ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸೆ. 26ರಂದು ಉದ್ಘಾಟಿಸಲಿದ್ದಾರೆ.

ರಾಷ್ಟ್ರಪತಿಯಿಂದ ಸೆ. 26ಕ್ಕೆ ಧಾರವಾಡ ಐಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ
ರಾಷ್ಟ್ರಪತಿ ದ್ರೌಪದಿ‌ ಮುರ್ಮು
TV9 Web
| Edited By: |

Updated on:Sep 24, 2022 | 5:45 PM

Share

ಧಾರವಾಡ: ಧಾರವಾಡ ಹೊರವಲಯದ ತಡಸಿನಕೊಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಐಐಟಿ (IIIT) ಕ್ಯಾಂಪಸ್​ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi murmu) ಸೆ. 26ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಸಿದ್ದತೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್ (Arvind Bellad) ಈಗಾಗಲೇ ಎಸ್​​ಪಿಜಿ ತಂಡ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದೆ. ರಾಷ್ಟ್ರಪತಿಗಳ ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಜಾಗ ಕೊಟ್ಟ ರೈತರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸೆ. 26ರಂದು ಮಧ್ಯಾಹ್ನ 3ರಿಂದ 4ರವರೆಗೆ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರಪತಿಗಳು ಮಧ್ಯಾಹ್ನ ಐಐಐಟಿಗೆ ಆಗಮಿಸಿ ಅಲ್ಲಿಯೇ ಊಟ ಮಾಡುತ್ತಾರೆ. ಬಳಿಕ ಐಐಐಟಿಯನ್ನು ಉದ್ಘಾಟಿಸುತ್ತಾರೆ. ವೇದಿಕೆಯಲ್ಲಿ ರಾಷ್ಟ್ರಪತಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ಸಚಿವರು ಇರಲಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳ ಕಚೇರಿಯಿಂದ ನಿಗದಿತ ಮೆನು ಬಂದಿದೆ. ಆದರೂ ಉತ್ತರ ಕರ್ನಾಟಕದ ಒಂದಿಷ್ಟು ತಿನಿಸು ಮಾಡಿಸಲಾಗುವುದು. ರಾಷ್ಟ್ರಪತಿಗಳು ಇಷ್ಟಪಟ್ಟರೆ ಕೊಡುತ್ತೇವೆ ಎಂದು ತಿಳಿಸಿದರು.

ರಾಷ್ಟ್ರಪತಿಗಳ ಕಾರ್ಯಕ್ರಮದ ದಿನ ನಾನು ಗೌನ್ ಹಾಕಲ್ಲ

ರಾಷ್ಟ್ರಪತಿಗಳ ಕಾರ್ಯಕ್ರಮದ ದಿನ ನಾನು ಮಹಾಪೌರರ ಗೌನ್ ಹಾಕಲ್ಲ ಎಂದು ಹುಬ್ಬಳ್ಳಿ-ಧಾರವಾಡ ಮಹಾಪೌರ ಈರೇಶ್ ಅಂಚಟಗೇರಿ ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಅನೇಕ ಬದಲಾವಣೆಯಾಗಿವೆ. ಸ್ವಾತಂತ್ರ್ಯ ಹೋರಾಟ ವೇಳೆ ಮೇಯರ್ ಅಂತಾ ಕರೆಯುತ್ತಿದ್ದರು. ಆದರೆ ವಿ.ಡಿ.ಸಾವರ್ಕರ್ ಹೊಸ ಪದವನ್ನು ಬಳಕೆಗೆ ತಂದರು. ಮೇಯರ್ ಬದಲಾಗಿ ಮಹಾಪೌರ ಅನ್ನೋ ಶಬ್ದ ಕೊಟ್ಟಿದ್ದಾರೆ ಎಂದು ತಿಳಿಸಿದರು.

ದೇಶದ ಅನೇಕ ಮಹಾನಗರ ಪಾಲಿಕೆಗಳಲ್ಲಿ ಗೌನ್ ಹಾಕಲ್ಲ. ಗೌನ್ ಧರಿಸುವುದು ಬ್ರಿಟಿಷ್ ಸಂಸ್ಕೃತಿ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಗೌನ್ ಹಾಕಬೇಕು ಅಂತಾ ಹೇಳಿದರೆ ಮಾತ್ರ ಹಾಕುತ್ತೇನೆ. ಇಲ್ಲದಿದ್ದರೆ ನಾನು ಜಾಕೆಟ್ ಧರಿಸಿಯೇ ಭಾಗಿಯಾಗುತ್ತೇನೆ ಎಂದರು.

ಮಾಜಿ ಸಿಎಮ್ ಜಗದೀಶ ಶೆಟ್ಟರ್​ಗೆ ಕೋವಿಡ್ ಟೆಸ್ಟ್

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಮ್ ಖಾನಾ ಮೈದಾನದಲ್ಲಿ ರಾಷ್ಟ್ರಪತಿ ಕಾರ್ಯಕ್ರಮದ ತಯಾರಿ ವೀಕ್ಷಣೆಗೆ ಆಗಮಿಸಿದ ವೇಳೆ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿಸಿದ್ದಾರೆ. ಮತ್ತು ರಾಷ್ಟ್ರಪತಿ ಕಾರ್ಯಕ್ರಮ ವೇದಿಕೆಗೆ ಭಾಗವಹಿಸಲು ಕೊವಿಡ್ ಟೆಸ್ಟ್ ಕಡ್ಡಾಯ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:44 pm, Sat, 24 September 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ