AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ

ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ದೂರು ನೀಡಿದ್ದರು. ಸಿದ್ದಪ್ಪ ನೀಡಿದ ದೂರಿನಿಂದ ಹಲವು ಬಾರಿ ನೋಟಿಸ್ ಬಂದಿತ್ತು.

ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ
ಪಿಎಸ್ಐ
TV9 Web
| Edited By: |

Updated on:Jan 24, 2022 | 8:50 AM

Share

ಹುಬ್ಬಳ್ಳಿ: ದೂರು ನೀಡಲು ಪೊಲೀಸ್ ಠಾಣೆಗೆ (Police Station) ಹೋಗಿದ್ದವರ ಮೇಲೆ ಪಿಎಸ್ಐ (PSI) ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್ಐ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ದೂರು ನೀಡಿದ್ದರು. ಸಿದ್ದಪ್ಪ ನೀಡಿದ ದೂರಿನಿಂದ ಹಲವು ಬಾರಿ ನೋಟಿಸ್ ಬಂದಿತ್ತು. ಈ ವಿಚಾರಕ್ಕೆ ಸಿದ್ದಪ್ಪ ಮತ್ತು ನಾಗನಗೌಡ ಗುಂಪುಗಳ ನಡುವೆ ಪರಸ್ಪರ ಜಗಳ ನಡೆದಿತ್ತು. ಗಲಾಟೆ ಸಂಬಂಧ ಸಿದ್ದಪ್ಪ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು. 4 ಬಾರಿ ಠಾಣೆಗೆ ಹೋದರೂ ದೂರು ದಾಖಲಿಸದೆ ಸಿದ್ದಪ್ಪ ಮೇಲೆ ಪಿಎಸ್ಐ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಸಿದ್ದಪ್ಪ ಕಳಸಣ್ಣ, ಅವರ ಪುತ್ರ ಬಸವರಾಜ, ಯಲ್ಲಪ್ಪ ಕಳಸಣ್ಣನವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಕಬ್ಬಿನ ಹೊಲಕ್ಕೆ ಬೆಂಕಿ ಕೊಪ್ಪಳ: ಆಕಸ್ಮಿಕ ಬೆಂಕಿ ತಗುಲಿ ಸುಮಾರು 5.50 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ರೈತ ಈರಣ್ಣ ಬುಲ್ಟಿ ಎಂಬುವವರಿಗೆ ಸೇರಿದ ಕಬ್ಬು ಬೆಂಕಿಗಾಹುತಿಯಾಗಿದೆ. ಸುಮಾರು 6 ಎಕೆರೆ ಪ್ರದೆಶದಲ್ಲಿ ರೈತ ಈರಣ್ಣ ಕಬ್ಬು ಬೆಳೆದಿದ್ದರು. ಬೆಳೆ ಕಟಾವುವಿಗೆ ಬಂದಿತ್ತು. ಆದರೆ ಆಕಸ್ಮಿಕ ಬೆಂಕಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಇದನ್ನೂ ಓದಿ

Coriander Water Benefits: ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು

ದಾವಣಗೆರೆ ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆ ಟೆಂಡರ್‌ನಲ್ಲಿಯೂ ನಡೆದಿದ್ಯಾ ಬ್ರಹ್ಮಾಂಡ ಭ್ರಷ್ಟಾಚಾರ

Published On - 8:47 am, Mon, 24 January 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ