AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು

ಇತ್ತೀಚಿಗೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕುರಾನ್ ಪಠಣ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಕುರಾನ್ ಪಠಿಸಿದ ಜಾಗದಲ್ಲಿ ಹೋಮ ಮಾಡಲು ಬಿಜೆಪಿ ಸಜ್ಜಾಗಿದ್ದು, ವಿವಾದ ತೀವ್ರಗೊಳ್ಳುವ ಲಕ್ಷಣ ಕಾಣಿಸಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು
ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದ ಫೋಟೊ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma|

Updated on: Oct 10, 2025 | 7:06 AM

Share

ಧಾರವಾಡ, ಅಕ್ಟೋಬರ್ 10: ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಮೌಲ್ವಿಯೊಬ್ಬರು ಕುರಾನ್ ಪಠಣ ಮಾಡಿದ್ದರು. ಇದು ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಇಲ್ಲಿ ಕುರಾನ್ ಪಠಣ ಮಾಡುವುದು ಸರಿಯಾ ಎಂಬ ಪ್ರಶ್ನೆಯನ್ನು ಬಿಜೆಪಿ ಎತ್ತಿತ್ತು. ಆದರೆ ಅದು ಸರಕಾರಿ ಕಾರ್ಯಕ್ರಮ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಪದೇ ಪದೇ ಸ್ಪಷ್ಟನೆ ನೀಡಿದ್ದರು. ಆದರೆ ಬಿಜೆಪಿ ಮಾತ್ರ ತನ್ನ ವಾದದಿಂದ ಹಿಂದೆ ಸರಿದಿರಲಿಲ್ಲ. ಅದರ ಮುಂದುವರೆದ ಭಾಗ ಇದೀಗ ಶುರುವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣದ ವಿರುದ್ಧ ಸಿಡಿದೆದ್ದಿರೋ ಬಿಜೆಪಿ ನಾಯಕರು ಧಾರವಾಡದ (Dharawad) ಡಿಸಿ ಕಚೇರಿ ಎದುರು ವಿಭಿನ್ನವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಿಸಿದ್ದರಿಂದ ನಾವು ಕೂಡ ಡಿಸಿ ಕಚೇರಿ ಎದುರಲ್ಲಿಯೇ ಹೋಮ ಮಾಡಿ, ಎಲ್ಲವನ್ನು ಶುದ್ಧಗೊಳಿಸುವುದಾಗಿ ಹೇಳಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹೋಮ ಮಾಡಲು ಬಿಜೆಪಿ ನಿರ್ಧರಿಸಿದ್ದು, ಕಾರ್ಯಕ್ರಮದ ನೇತೃತ್ವವನ್ನು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ವಹಿಸಿದ್ದಾರೆ.

ಕುರಾನ್ ಪಠಣ ವಿಚಾರವಾಗಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವುದಾಗಿ ಹೇಳಿರುವ ಬೆಲ್ಲದ್​, ಹೆಸ್ಕಾಂ ಕಾಮಗಾರಿ ನಿರ್ಮಾಣ ಗುದ್ದಲಿ ಪೂಜೆ ಕಾರ್ಯಕ್ರಮ ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಕುರಾನ್ ಪಠಣ

ಮಾಡಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ವಾರ್ಡ್ ನಂಬರ್ 34 ರ ಪಾಲಿಕೆ ಸದಸ್ಯೆ ಮಂಗಳಾ ಗೌರಿ ಹಾಗೂ ಪುತ್ರ ನಾಗರಾಜ್ ಗೌರಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಇದಾಗಿದ್ದು, ಇದು ಸರ್ಕಾರಿ ಕಾರ್ಯಕ್ರಮ ಆಗಿರಲಿಲ್ಲ ಎಂದು ವಾದಿಸುತ್ತಿದ್ದಾರೆ. ಆರೋಪವನ್ನು ಅಲ್ಲಗಳೆಯುತ್ತಿರುವ ಕಾಂಗ್ರೆಸ್ ಮುಖಂಡರು, ಕುರಾನ್ ಪಠಣ ಮಾಡಿದ್ದು ಅಭಿನಂದನಾ ಸಮಾರಂಭದಲ್ಲಿ ಎಂದು ವಾದಿಸುತ್ತಿದ್ದಾರೆ. ಅದು ನಾವು ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮ. ಸರ್ಕಾರಿ ಕಾರ್ಯಕ್ರಮ ಕೇವಲ ಗುದ್ದಲಿ ಪೂಜೆಗೆ ಮಾತ್ರ ಸೀಮಿತವಾಗಿತ್ತು ಎಂಬುದು ಅವರ ವಾದವಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್​: ಸಿಸಿ ಕ್ಯಾಮರಾದಲ್ಲಿ ಘಟನೆ ಸೆರೆ

ಒಟ್ಟಿನಲ್ಲಿ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಇಂದು ನಡೆಯಲಿರುವ ಹೋರಾಟದಲ್ಲಿ ಏನೆಲ್ಲಾ ಆಗುತ್ತದೆ ಎಂಬ ಪ್ರಶ್ನೆ ಮೂಡಿಸಿದೆ. ಈ ಪ್ರಕರಣ ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ