AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nationl Youth Fest: ಹುಬ್ಬಳ್ಳಿ-ಧಾರವಾಡ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೊಂದಣಿ ಕಡ್ಡಾಯ; ಇಲ್ಲಿದೆ ಲಿಂಕ್​

ಧಾರವಾಡದಲ್ಲಿ ಜನವರಿ 12 ರಿಂದ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತ ವೆಬ್​ಸೈಟ್​ನಲ್ಲಿ ನೊಂದಣಿ ಕಡ್ಡಾಯಗೊಳಿಸಿದೆ.

Nationl Youth Fest: ಹುಬ್ಬಳ್ಳಿ-ಧಾರವಾಡ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೊಂದಣಿ ಕಡ್ಡಾಯ; ಇಲ್ಲಿದೆ ಲಿಂಕ್​
ರಾಷ್ಟ್ರೀಯ ಯುವ ದಿನಾಚರಣೆ
TV9 Web
| Updated By: ವಿವೇಕ ಬಿರಾದಾರ|

Updated on:Jan 09, 2023 | 5:13 PM

Share

ಧಾರವಾಡ: ಧಾರವಾಡದಲ್ಲಿ ಜನವರಿ 12 ರಿಂದ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವೋತ್ಸವದಲ್ಲಿ ಪಾಲ್ಗೊಳ್ಳಲು ಯುವ ಪ್ರತಿನಿಧಿಗಳು ನಿರೀಕ್ಷೆಗೂ ಮೀರಿ ಆಸಕ್ತಿ ತೋರಿದ್ದಾರೆ. ಯುವ ಜನೋತ್ಸವದಲ್ಲಿ ಭಾಗಿಯಾಗಲು ಎಲ್ಲರಿಗೂ ಅವಕಾಶವಿಲ್ಲ. ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿತಗೊಳಲಿರುವ ರಾಷ್ಟ್ರೀಯ ಯುವ ಜನೋತ್ಸವ ವೀಕ್ಷಿಸಲು ಈಗಾಗಲೇ 15 ಸಾವಿರ ಮಂದಿ ನೋಂದಣಿಯಾಗಿದ್ದಾರೆ. ಒಟ್ಟು 7,500 ಮಂದಿ ಯುವ ಪ್ರತಿನಿಧಿಗಳು ಪಾಲ್ಗೊಳ್ಳಲು ಅವಕಾಶವಿದ್ದು, 75,000 ಪ್ರೇಕ್ಷಕರನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರೀಯ ಯುವ ಜನೋತ್ಸವವನ್ನು ಆಯೋಜಿಸಲಾಗುತ್ತಿದೆ.

ರಾಜ್ಯ ಎನ್.ವೈ.ಕೆ.ಎಸ್ ಮತ್ತು ರಾಜ್ಯ ಎನ್.ಎಸ್.ಎಸ್. ಸಂಘಟನೆಗಳಿಂದ ಪಾಲ್ಗೊಳ್ಳುವವರನ್ನು ರಾಜ್ಯ ಯುವ ಇಲಾಖೆ ಆಯ್ಕೆ ಮಾಡುತ್ತದೆ. ಪ್ರತಿಯೊಂದು ರಾಜ್ಯಕ್ಕೆ ಆಯಾ ಕೇಂದ್ರ ಸಂಸ್ಥೆಯಿಂದ ನಿರ್ದಿಷ್ಟ ಕೋಟ ನಿಗದಿ ಮಾಡಲಾಗುತ್ತದೆ. ಮುಂಚಿತವಾಗಿಯೇ ನೋಂದಣಿ ಮಾಡಿಕೊಂಡರೆ ರಾಷ್ಟ್ರೀಯ ಯುವ ಜನೋತ್ಸವವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಯೋಜಿಸಲು ಮತ್ತು ಸೂಕ್ತ ಯೋಜನೆ ರೂಪಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆ ಲಿಂಕ್​ ಕೂಡ ಬಿಡುಗಡೆ ಮಾಡಲಾಗಿದೆ. ಇನ್ನೂ ಯುವಜನೋತ್ಸವದಲ್ಲಿ 60 ಕ್ಕೂ ಹೆಚ್ಚು ಹೆಸರಾಂತ ತಜ್ಞರು ವಿಶೇಷ ಯುವ ಶೃಂಗಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ, ಜಿ20 ಮತ್ತು ವೈ20 ಕಾರ್ಯಕ್ರಮಗಳ ಕುರಿತು ಐದು ವಿಷಯಗಳ ಬಗ್ಗೆ ಸಮಗ್ರ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ:  ಯುವಜನೋತ್ಸವ ವೇಳೆ ಪ್ರಧಾನಿ ಮೋದಿಗೆ ಗಿಫ್ಟ್ ನೀಡಲು ಕೈಯಲ್ಲಿ ಬೇಲೂರು ಶಿಲಾಬಾಲಕಿ ಹಿಡಿದು ನಿಂತಿರುವ ಧಾರವಾಡದ ಯುವಕ

“ಕೆಲಸದ ಭವಿಷ್ಯ, ಉದ್ಯಮ, ನಾವೀನ್ಯ ಮತ್ತು 21 ನೇ ಶತಮಾನದ ಕೌಶಲ್ಯಗಳು”, “ಹವಾಮಾನ ಬದಲಾವಣೆ ಮತ್ತು ವಿಪತ್ತು ಅಪಾಯ ಕಡಿತ”, “ಶಾಂತಿ ನಿರ್ಮಾಣ ಮತ್ತು ಸಮನ್ವಯ”, “ಪ್ರಜಾಪ್ರಭುತ್ವ ಮತ್ತು ಆಡಳಿತದಲ್ಲಿ ಯುವಕರ ಭವಿಷ್ಯದ ಹಂಚಿಕೆ” ಹಾಗೂ “ಆರೋಗ್ಯ ಮತ್ತು ಯೋಗಕ್ಷೇಮ” ಕುರಿತು ವಿಷಯ ತಜ್ಞರು ಬೆಳಕು ಚೆಲ್ಲಲಿದ್ದಾರೆ. ಹೀಗಾಗಿ ಎಷ್ಟು ಜನ ಪಾಲ್ಗೊಳ್ಳಲಿದ್ದಾರೆ ಎಂಬ ಆಧಾರದ ಮೇಲೆ ಗೋಷ್ಠಿಗಳ ಆಯೋಜನೆ, ವಿಷಯ ತಜ್ಞರನ್ನು ನಿಯೋಜಿಸಲು, ಸಾರಿಗೆ, ವಸತಿ, ಊಟ ಮತ್ತಿತರ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ.

ಪ್ರತಿಯೊಬ್ಬರಿಗೂ ಕ್ಯೂ ಆರ್ ಕೋಡ್ ಇರುವ ವೈಯಕ್ತಿಕ ಗುರುತಿನ ಚೀಟಿ

ಪ್ರತಿಯೊಬ್ಬರಿಗೂ ಕ್ಯೂ ಆರ್ ಕೋಡ್ ಇರುವ ವೈಯಕ್ತಿಕ ಗುರುತಿನ ಚೀಟಿ ಸಿದ್ಧಪಡಿಸಲು ಮತ್ತು ವೇದಿಕೆಗೆ ಆಗಮಿಸಿದಾಗ ನೋಂದಣಿ ಪ್ರಕ್ರಿಯೆ ತ್ವರಿತ ಮತ್ತು ಸುಗಮಗೊಳಿಸಬಹುದಾಗಿದೆ. ಪ್ರತಿಯೊಬ್ಬ ಪ್ರತಿನಿಧಿಗೆ ಅವರ ವರ್ಗವನ್ನು ಆಧರಿಸಿ ವೆಬ್ ಸೈಟ್ ನಲ್ಲಿ ವೈಯಕ್ತಿಕ ಸಹಾಯ ವಿಭಾಗವಿದೆ. ಪ್ರಮುಖ ಸೂಚನೆಗಳು, ನೋಡೆಲ್ ಅಧಿಕಾರಿ ವಿವರಗಳು, ಸ್ಥಳ ನಕ್ಷೆ ಸೇರಿ ಎಲ್ಲಾ ಮಾಹಿತಿ ವೆಬ್ ಸೈಟ್ ನಲ್ಲಿ ಇರಲಿದೆ. ತಮ್ಮ ದೂರವಾಣಿ ಸಂಖ್ಯೆ ಬಳಸಿಕೊಂಡು ವಸತಿ ಮತ್ತಿತರ ಸೌಲಭ್ಯಗಳ ವಿವರಗಳನ್ನು ಪಡೆಯಬಹುದಾಗಿದೆ.

ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೋಂದಣಿ ಕಡ್ಡಾಯ

5 ದಿನಗಳ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೋಂದಣಿ ಕಡ್ಡಾಯ. ದೇಶಾದ್ಯಂತ ನೊಂದಣಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ವೆಬ್ಸೈಟ್​ನ್ನು ರಚಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರು ಇತ್ತೀಚೆಗೆ https://nyfhubballidharwad2023.in/ ವೆಬ್ ಸೈಟ್ ಉದ್ಘಾಟಿಸಿದ್ದರು. ವೆಬ್ ಸೈಟ್ ಸ್ಥಿತ ಸ್ಥಾಪಕ ಕ್ಲೌಡ್ ವ್ಯವಸ್ಥೆಯಾಗಿದ್ದು, ಏಕ ಕಾಲದಲ್ಲಿ ಸಾವಿರಾರು ಬಳಕೆದಾರರನ್ನು ನಿಭಾಯಿಸಲಿದೆ. ವೆಬ್ ಸೈಟ್ ನಲ್ಲಿ ಎಲ್ಲಾ ವೇದಿಕೆಗಳು, ಕಾರ್ಯಕ್ರಮಗಳು, ಸಮಯ ಮತ್ತಿತರ ಅಗತ್ಯ ಮಾಹಿತಿ ಒದಗಿಸಲಾಗುತ್ತದೆ. ಸೂಚನಾ ಫಲಕದಲ್ಲಿರುವ ಮಾಹಿತಿಯೂ ಇಲ್ಲಿ ಲಭ್ಯವಿರಲಿದೆ. ಪ್ರತಿಯೊಂದು ಚಟುವಟಿಕೆಗಳಿಗೆ ನೊಡೆಲ್ ಅಧಿಕಾರಿಗಳು ಜವಾಬ್ದಾರರಾಗಲಿದ್ದಾರೆ. ಪ್ರವಾಸಿ ವಿವರಗಳ ಜೊತೆಗೆ ಕಾರ್ಯಕ್ರಮದ ಪಟ್ಟಿ, ಕ್ಷಣ ಕ್ಷಣಕ್ಕೂ ಅಪ್ ಲೋಡ್ ಮಾಡುವ ಸಕಾಲಿಕ ಮಾಹಿತಿ ಲಭ್ಯವಾಗಲಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಜನವರಿ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಹಸಿರು ಉತ್ಸವವಾಗಿ ಆಚರಣೆಗೆ ಸಿದ್ಧತೆ

15 ಸಾವಿರ ಯುವಕರು ನೊಂದಣಿ

ಇನ್ನು ಈ ಬಗ್ಗೆ ಟಿವಿ-9 ಡಿಜಿಟಲ್ ಜೊತೆಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಷ್ಟ್ರೀಯ ಯುವ ಜನೋತ್ಸವವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜ. 12 ರಂದು ಉದ್ಘಾಟಿಸಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಈ ಉತ್ಸವ ಯುವಜನರಿಗಾಗಿ, ಯುವ ಸಮೂಹವೇ ಪಾಲ್ಗೊಳ್ಳಲಿ ಎನ್ನುವ ಉದ್ದೇಶದಿಂದ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದು, ಈಗಾಗಲೇ 15 ಸಾವಿರ ಯುವ ಜನರು ನೋಂದಾಯಿಸಿಕೊಂಡಿದ್ದಾರೆ. ಇನ್ನು ಕೆಲವೇ ಕೆಲವು ಅವಕಾಶಗಳು ಉಳಿದಿದ್ದು, ಆಸಕ್ತ ಯುವಕ ಯುವತಿಯರು ನೋಂದಣಿ ಮೂಲಕ ನೇರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಅಂತಾ ಹೇಳಿದ್ದಾರೆ.

ವೆಬ್ ಸೈಟ್ ಲೋಕಾರ್ಪಣೆ ಮಾಡಿದ ಕೆಲವೇ ಸಮಯದಲ್ಲಿ 5,203 ಮಂದಿ ನೋಂದಣಿಯಾಗಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕದಿಂದ ಹೆಚ್ಚು ಮಂದಿ ನೋಂದಣಿಯಾಗಿದ್ದು, 875 ಯುವ ಪ್ರತಿನಿಧಿಗಳು ಭಾಗವಹಿಸಲು ಆಸಕ್ತಿ ತೋರಿದ್ದಾರೆ. ಕರ್ನಾಟಕ ರಾಜ್ಯ ಸಂಘಟನೆಯಿಂದ 164, ಎನ್.ಎಸ್.ಎಸ್ ನಿಂದ 118, ಎನ್.ವೈ.ಕೆ.ಎಸ್ ನಿಂದ 443, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ವಿಭಾಗದಿಂದ 150 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ನಂತರದ ಸ್ಥಾನಗಳಲ್ಲಿ ತಮಿಳು ನಾಡು 346, ಆಂಧ್ರಪ್ರದೇಶ 323ವಿದೆ. ನೋಂದಣಿ ಸಂಪೂರ್ಣ ಉಚಿತವಾಗಿದೆ.

ವರದಿ- ನರಸಿಂಹಮೂರ್ತಿ ಪ್ಯಾಟಿ ಟಿವಿ9, ಧಾರವಾಡ

Published On - 5:12 pm, Mon, 9 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ