AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ
ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರಿಗೆ ಸನ್ಮಾನ
TV9 Web
| Edited By: |

Updated on: Jan 26, 2023 | 4:32 PM

Share

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿ ಕಚೇರಿಯಲ್ಲಿ ಇಂದು ವಿಶೇಷ ರೀತಿಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ದೇಶದ ಈ ಸಂಭ್ರಮದ ದಿನದಂದು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಹುಬ್ಬಳ್ಳಿ (Hubballi) ಕಚೇರಿಯಲ್ಲಿ ಕೃಷಿ ಶ್ರಮಿಕರನ್ನು (agricultural labourers) ಧ್ವಜಾರೋಹಣಕ್ಕೆ ಆಹ್ವಾನಿಸಿ, ಅವರನ್ನೆಲ್ಲ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸುವ (Facilitation) ಮೂಲಕ ಗಣತಂತ್ರ ದಿನವನ್ನು (Republic Day 2023) ಆಚರಿಸಿದ್ದು ವಿಶೇಷವಾಗಿತ್ತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ತಮ್ಮ ಕಚೇರಿಯಲ್ಲಿ ನಡೆದ ವಿಶಿಷ್ಠ ಗಣರಾಜ್ಯೋತ್ಸವ ಆಚರಣೆ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಸಮಾಜದ ಕಟ್ಟ ಕಡೆಯ ವರ್ಗ ಕೂಡ ಗಣರಾಜ್ಯೋತ್ಸವವನ್ನು ಸಂಭ್ರಮಿಸುವಂತೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಣರಾಜ್ಯ ಎಂಬುದು ನಮ್ಮೆಲ್ಲರ ಪಾಲಿಗೆ ಗೌರವದ ಸಂಕೇತವಾಗಿದ್ದು, ಇಂತಹ ವಿಶೇಷ ದಿನವನ್ನ ಶ್ರಮಿಕರ ಜೊತೆ ತಮ್ಮ ಕಚೇರಿಯಲ್ಲಿ ಆಚರಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರಮಿಕ ವರ್ಗದ ಹಿರಿಯರಾದ ಬಸವಣ್ಣಪ್ಪ ನೀರಲಗಿಯವರಿಂದ ಧ್ವಜಾರೋಹಣ ಮಾಡಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬಸಪ್ಪಣ್ಣನವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನೆದು ಗೌರವ ಅರ್ಪಿಸಿದರು ಹಾಗೂ ಈ ಮಾದರಿ ಗಣತಂತ್ರ ಆಚರಣೆಗೆ ಮಾರ್ಗದರ್ಶನ ಮಾಡಿದ ಪ್ರಲ್ಹಾದ ಜೋಶಿಯವರ ನಡೆಯನ್ನು ಶ್ಲಾಘಿಸಿದರು.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ