AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ
ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರಿಗೆ ಸನ್ಮಾನ
TV9 Web
| Updated By: ಸಾಧು ಶ್ರೀನಾಥ್​|

Updated on: Jan 26, 2023 | 4:32 PM

Share

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿ ಕಚೇರಿಯಲ್ಲಿ ಇಂದು ವಿಶೇಷ ರೀತಿಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ದೇಶದ ಈ ಸಂಭ್ರಮದ ದಿನದಂದು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಹುಬ್ಬಳ್ಳಿ (Hubballi) ಕಚೇರಿಯಲ್ಲಿ ಕೃಷಿ ಶ್ರಮಿಕರನ್ನು (agricultural labourers) ಧ್ವಜಾರೋಹಣಕ್ಕೆ ಆಹ್ವಾನಿಸಿ, ಅವರನ್ನೆಲ್ಲ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸುವ (Facilitation) ಮೂಲಕ ಗಣತಂತ್ರ ದಿನವನ್ನು (Republic Day 2023) ಆಚರಿಸಿದ್ದು ವಿಶೇಷವಾಗಿತ್ತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ತಮ್ಮ ಕಚೇರಿಯಲ್ಲಿ ನಡೆದ ವಿಶಿಷ್ಠ ಗಣರಾಜ್ಯೋತ್ಸವ ಆಚರಣೆ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಸಮಾಜದ ಕಟ್ಟ ಕಡೆಯ ವರ್ಗ ಕೂಡ ಗಣರಾಜ್ಯೋತ್ಸವವನ್ನು ಸಂಭ್ರಮಿಸುವಂತೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಣರಾಜ್ಯ ಎಂಬುದು ನಮ್ಮೆಲ್ಲರ ಪಾಲಿಗೆ ಗೌರವದ ಸಂಕೇತವಾಗಿದ್ದು, ಇಂತಹ ವಿಶೇಷ ದಿನವನ್ನ ಶ್ರಮಿಕರ ಜೊತೆ ತಮ್ಮ ಕಚೇರಿಯಲ್ಲಿ ಆಚರಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರಮಿಕ ವರ್ಗದ ಹಿರಿಯರಾದ ಬಸವಣ್ಣಪ್ಪ ನೀರಲಗಿಯವರಿಂದ ಧ್ವಜಾರೋಹಣ ಮಾಡಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬಸಪ್ಪಣ್ಣನವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನೆದು ಗೌರವ ಅರ್ಪಿಸಿದರು ಹಾಗೂ ಈ ಮಾದರಿ ಗಣತಂತ್ರ ಆಚರಣೆಗೆ ಮಾರ್ಗದರ್ಶನ ಮಾಡಿದ ಪ್ರಲ್ಹಾದ ಜೋಶಿಯವರ ನಡೆಯನ್ನು ಶ್ಲಾಘಿಸಿದರು.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?