AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್.ಸಿ. ಸರದೇಶಪಾಂಡೆ ನಿಧನ, ಅವರ ಇಚ್ಛೆಯಂತೆ ದೇಹ ದಾನ

ಭಾರತೀಯ ಸೇನೆಯ ಉಪ ಮಹಾದಂಡನಾಯಕರಾಗಿ ಸೇವೆ ಸಲ್ಲಿಸಿದ್ದ ಧಾರವಾಡ ಮೂಲದ ಸರದೇಶಪಾಂಡೆ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್.ಸಿ. ಸರದೇಶಪಾಂಡೆ ನಿಧನ, ಅವರ ಇಚ್ಛೆಯಂತೆ ದೇಹ ದಾನ
ಎಸ್.ಸಿ. ಸರದೇಶಪಾಂಡೆ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 09, 2023 | 9:28 AM

Share

ಧಾರವಾಡ: ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್.ಸಿ. ಸರದೇಶಪಾಂಡೆ(90) ಅವರು ಬೆಂಗಳೂರು ನಿವಾಸದಲ್ಲಿ‌ ನಿಧನರಾಗಿದ್ದಾರೆ. ಭಾರತೀಯ ಸೇನೆಯ ಉಪ ಮಹಾದಂಡನಾಯಕರಾಗಿ ಸೇವೆ ಸಲ್ಲಿಸಿದ್ದ ಧಾರವಾಡ ಮೂಲದ ಸರದೇಶಪಾಂಡೆ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಎಸ್.ಸಿ. ಸರದೇಶಪಾಂಡೆ ಅವರು ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಧಾರವಾಡದಲ್ಲಿ ನೆಲೆಸಿದ್ದ ಸರದೇಶಪಾಂಡೆ ಅವರು ಇತ್ತೀಚೆಗೆ ಬೆಂಗಳೂರು ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದರು. ಇವರು ಇಚ್ಛೆಯಂತೆ ಅವರ ದೇಹವನ್ನು ದಾನ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಜನಿಸಿದ ಎಸ್.ಸಿ. ಸರ್‌ದೇಶಪಾಂಡೆ ಅವರು ಪ್ರಾಥಮಿಕ ಹಾಗೂ ಮಾಧ್ಯಮ ಶಿಕ್ಷಣವನ್ನು ಧಾರವಾಡದ ಕೆ.ಇ. ಬೋರ್ಡ್ಸ್ ಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಕಾಲೇಜು ಶಿಕ್ಷಣವನ್ನು ಧಾರವಾಡದಲ್ಲಿ ಪೂರೈಸಿದ್ದಾರೆ. ಮಗ ಸೇನೆಗೆ ಸೇರಬೇಕೆಂಬುದು ಅವರ ತಂದೆಯ ಇಚ್ಛೆಯಾಗಿತ್ತು. ಅದರಂತೆ ಸೇನೆಯಲ್ಲಿ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿದ್ದರು. ಕರ್ನಾಟಕದಿಂದ ಗಣರಾಜ್ಯೋತ್ಸವ ಪರೇಡ್‌ಗೆ ಹೋದ ಮೊದಲ ಕೆಡೆಟ್ ಎಂಬುದು ಸರ್‌ದೇಶಪಾಂಡೆ ಅವರ ಹೆಗ್ಗಳಿಕೆ.

ಇದನ್ನೂ ಓದಿ: Prof Maleyur Guruswamy: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವಿದ್ವಾಂಸ ಪ್ರೊ.ಮಲೆಯೂರು ಗುರುಸ್ವಾಮಿ ನಿಧನ

ಯುದ್ಧಗಳ ಬಗ್ಗೆ ಪುಸ್ತಕ ಬರೆದಿದ್ದ ಸರದೇಶಪಾಂಡೆ

ಕುಮಾವೋ ರೆಜಿಮೆಂಟ್ ಮೂಲಕ ಸೈನ್ಯಕ್ಕೆ ಸೇರ್ಪಡೆಯಾದ ಇವರು ಅದೇ ರೆಜಿಮೆಂಟ್‌ಗೆ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. ಬ್ರಿಗೇಡಿಯರ್, ಮೇಜರ್ ಜನರಲ್ ಹುದ್ದೆ ಸಹ ನಿರ್ವಹಿಸಿದ್ದಾರೆ. ಶ್ರೀಲಂಕಾದಲ್ಲಿ ಶಾಂತಿ ಪಾಲನಾ ಸಮಿತಿಗೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಸಮರ್ಥವಾಗಿ ನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ‘ಶಾಂತಿ ಯುದ್ಧ ಸೇವಾ ಮೆಡಲ್’ ಪಡೆದಿದ್ದ ಅಧಿಕಾರಿ ಸರದೇಶಪಾಂಡೆ, ನಿವೃತ್ತಿ ಬಳಿಕ ಅನೇಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಯುದ್ಧಗಳ ಬಗ್ಗೆ ಅನೇಕ ಪುಸ್ತಕ ಬರೆದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:27 am, Thu, 9 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು