AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈಓವರ್ ಕಾಮಗಾರಿ ವೇಳೆ ASI ತಲೆ ಮೇಲೆ ಬಿದ್ದ ರಾಡ್; ​​21 ಗಂಟೆ ಕಳೆದರೂ ಪ್ರಜ್ಞಾಹೀನ ಸ್ಥಿತಿ, 16 ಜನರ ವಿರುದ್ಧ ದೂರು

ಮಂಗಳವಾರ ಸಂಜೆ 4 ಗಂಟೆಗೆ ಕೋರ್ಟ್ ವೃತ್ತದಲ್ಲಿ ಫ್ಲೈ ಓವರ್​ ಕಾಮಗಾರಿಯ ಸಂದರ್ಭದಲ್ಲಿ ರಾಡ್​ ಬಿದ್ದು ಹುಬ್ಬಳ್ಳಿಯ ಉಪನಗರ ಠಾಣೆಯ ASI ನಾಭಿರಾಜ್ ದಯಣ್ಣವರವರು ಗಂಭೀರವಾಗಿ ಗಾಯಗೊಂಡಿದ್ದರು. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ನಾಭಿರಾಜ್ ಇದ್ದಾರೆ. 48 ಗಂಟೆಗಳ ಕಾಲ ಏನೂ ಹೇಳೋಕೆ ಆಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಫ್ಲೈಓವರ್ ಕಾಮಗಾರಿ ವೇಳೆ ASI ತಲೆ ಮೇಲೆ ಬಿದ್ದ ರಾಡ್; ​​21 ಗಂಟೆ ಕಳೆದರೂ ಪ್ರಜ್ಞಾಹೀನ ಸ್ಥಿತಿ, 16 ಜನರ ವಿರುದ್ಧ ದೂರು
ASI ನಾಭಿರಾಜ್ ದಯಣ್ಣವರ
ಶಿವಕುಮಾರ್ ಪತ್ತಾರ್
| Edited By: |

Updated on: Sep 11, 2024 | 12:56 PM

Share

ಹುಬ್ಬಳ್ಳಿ, ಸೆ.11: ಫ್ಲೈಓವರ್ ಕಾಮಗಾರಿಯ ಸಂದರ್ಭದಲ್ಲಿ ರಾಡ್​​ ಬಿದ್ದು ಎಎಸ್​ಐ (ASI) ಗಂಭೀರ ಗಾಯಗೊಂಡ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಫ್ಲೈ ಓವರ್​ ಕಾಮಗಾರಿಯ ಝಂಡು ಕನ್​ಸ್ಟ್ರಕ್ಷನ್​ ಎಂಡಿ ಸೇರಿ 16 ಜನರ ವಿರುದ್ಧ ದೂರು ದಾಖಲಾಗಿದೆ. ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಮಂಗಳವಾರ ಸಂಜೆ ರಾಡ್​ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ASI ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆ.

ಮಂಗಳವಾರ ಸಂಜೆ 4 ಗಂಟೆಗೆ ಕೋರ್ಟ್ ವೃತ್ತದಲ್ಲಿ ಫ್ಲೈ ಓವರ್​ ಕಾಮಗಾರಿಯ ಸಂದರ್ಭದಲ್ಲಿ ರಾಡ್​ ಬಿದ್ದು ಹುಬ್ಬಳ್ಳಿಯ ಉಪನಗರ ಠಾಣೆಯ ASI ನಾಭಿರಾಜ್ ದಯಣ್ಣವರವರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ನಾಭಿರಾಜ್​ಗೆ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ನಾಭಿರಾಜ್ ಇದ್ದಾರೆ. 48 ಗಂಟೆಗಳ ಕಾಲ ಏನೂ ಹೇಳೋಕೆ ಆಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: Viral: ಸಹಪಾಠಿಯ ಹುಟ್ಟುಹಬ್ಬ, ಶಾಲೆಯಲ್ಲಿ ಭರ್ಜರಿ ಬೀಯರ್‌ ಪಾರ್ಟಿ ಮಾಡಿದ ಹೈಸ್ಕೂಲ್‌ ಹುಡುಗೀರು

ತಲೆಗೆ ಗಂಭೀರ ಗಾಯ ಹಿನ್ನೆಲೆ ನಾಭಿರಾಜ್ ದಯಣ್ಣವರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ತಲೆಗೆ ಗಂಭೀರ ಗಾಯವಾಗಿದೆ, ಎಎಸ್ಐಗೆ ಇನ್ನೂ ಪ್ರಜ್ಞೆ ಬಂದಿಲ್ಲ. ವೈದ್ಯರು ASI ನಾಭಿರಾಜ್​ಗೆ ಎಲ್ಲ ರೀತಿಯ ಚಿಕಿತ್ಸೆ ನೀಡ್ತಿದ್ದಾರೆ ಎಂದು ಟಿವಿ9ಗೆ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಕಮ್ಮಾರ್ ಮಾಹಿತಿ ನೀಡಿದ್ದಾರೆ.

ಇನ್ನು ಮತ್ತೊಂದೆಡೆ ಘಟನೆ ಸಂಬಂಧ ನಾಭಿರಾಜ್ ಸಂಬಂಧಿಕರು ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸುಮಾರು 320 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಸಂಬಂಧಿಕರ ದೂರಿನನ್ವಯ ಕಂಪನಿಯ ಎಂಡಿ ಸೇರಿ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್