ಫ್ಲೈಓವರ್ ಕಾಮಗಾರಿ ವೇಳೆ ASI ತಲೆ ಮೇಲೆ ಬಿದ್ದ ರಾಡ್; ​​21 ಗಂಟೆ ಕಳೆದರೂ ಪ್ರಜ್ಞಾಹೀನ ಸ್ಥಿತಿ, 16 ಜನರ ವಿರುದ್ಧ ದೂರು

ಮಂಗಳವಾರ ಸಂಜೆ 4 ಗಂಟೆಗೆ ಕೋರ್ಟ್ ವೃತ್ತದಲ್ಲಿ ಫ್ಲೈ ಓವರ್​ ಕಾಮಗಾರಿಯ ಸಂದರ್ಭದಲ್ಲಿ ರಾಡ್​ ಬಿದ್ದು ಹುಬ್ಬಳ್ಳಿಯ ಉಪನಗರ ಠಾಣೆಯ ASI ನಾಭಿರಾಜ್ ದಯಣ್ಣವರವರು ಗಂಭೀರವಾಗಿ ಗಾಯಗೊಂಡಿದ್ದರು. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ನಾಭಿರಾಜ್ ಇದ್ದಾರೆ. 48 ಗಂಟೆಗಳ ಕಾಲ ಏನೂ ಹೇಳೋಕೆ ಆಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಫ್ಲೈಓವರ್ ಕಾಮಗಾರಿ ವೇಳೆ ASI ತಲೆ ಮೇಲೆ ಬಿದ್ದ ರಾಡ್; ​​21 ಗಂಟೆ ಕಳೆದರೂ ಪ್ರಜ್ಞಾಹೀನ ಸ್ಥಿತಿ, 16 ಜನರ ವಿರುದ್ಧ ದೂರು
ASI ನಾಭಿರಾಜ್ ದಯಣ್ಣವರ
Edited By: ಆಯೇಷಾ ಬಾನು

Updated on: Sep 11, 2024 | 12:56 PM

ಹುಬ್ಬಳ್ಳಿ, ಸೆ.11: ಫ್ಲೈಓವರ್ ಕಾಮಗಾರಿಯ ಸಂದರ್ಭದಲ್ಲಿ ರಾಡ್​​ ಬಿದ್ದು ಎಎಸ್​ಐ (ASI) ಗಂಭೀರ ಗಾಯಗೊಂಡ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಫ್ಲೈ ಓವರ್​ ಕಾಮಗಾರಿಯ ಝಂಡು ಕನ್​ಸ್ಟ್ರಕ್ಷನ್​ ಎಂಡಿ ಸೇರಿ 16 ಜನರ ವಿರುದ್ಧ ದೂರು ದಾಖಲಾಗಿದೆ. ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಮಂಗಳವಾರ ಸಂಜೆ ರಾಡ್​ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ASI ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆ.

ಮಂಗಳವಾರ ಸಂಜೆ 4 ಗಂಟೆಗೆ ಕೋರ್ಟ್ ವೃತ್ತದಲ್ಲಿ ಫ್ಲೈ ಓವರ್​ ಕಾಮಗಾರಿಯ ಸಂದರ್ಭದಲ್ಲಿ ರಾಡ್​ ಬಿದ್ದು ಹುಬ್ಬಳ್ಳಿಯ ಉಪನಗರ ಠಾಣೆಯ ASI ನಾಭಿರಾಜ್ ದಯಣ್ಣವರವರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ನಾಭಿರಾಜ್​ಗೆ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ನಾಭಿರಾಜ್ ಇದ್ದಾರೆ. 48 ಗಂಟೆಗಳ ಕಾಲ ಏನೂ ಹೇಳೋಕೆ ಆಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: Viral: ಸಹಪಾಠಿಯ ಹುಟ್ಟುಹಬ್ಬ, ಶಾಲೆಯಲ್ಲಿ ಭರ್ಜರಿ ಬೀಯರ್‌ ಪಾರ್ಟಿ ಮಾಡಿದ ಹೈಸ್ಕೂಲ್‌ ಹುಡುಗೀರು

ತಲೆಗೆ ಗಂಭೀರ ಗಾಯ ಹಿನ್ನೆಲೆ ನಾಭಿರಾಜ್ ದಯಣ್ಣವರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ತಲೆಗೆ ಗಂಭೀರ ಗಾಯವಾಗಿದೆ, ಎಎಸ್ಐಗೆ ಇನ್ನೂ ಪ್ರಜ್ಞೆ ಬಂದಿಲ್ಲ. ವೈದ್ಯರು ASI ನಾಭಿರಾಜ್​ಗೆ ಎಲ್ಲ ರೀತಿಯ ಚಿಕಿತ್ಸೆ ನೀಡ್ತಿದ್ದಾರೆ ಎಂದು ಟಿವಿ9ಗೆ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಕಮ್ಮಾರ್ ಮಾಹಿತಿ ನೀಡಿದ್ದಾರೆ.

ಇನ್ನು ಮತ್ತೊಂದೆಡೆ ಘಟನೆ ಸಂಬಂಧ ನಾಭಿರಾಜ್ ಸಂಬಂಧಿಕರು ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸುಮಾರು 320 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಸಂಬಂಧಿಕರ ದೂರಿನನ್ವಯ ಕಂಪನಿಯ ಎಂಡಿ ಸೇರಿ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us