AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ರಾಮ ಲಕ್ಷ್ಮಣ ಸೀತಾ ಮಾತೆ ಚಿತ್ರ ಅಂಟಿಸಿ, ಕೇಸರೀಮಯ ಮಾಡಿ ರಾಮಭಕ್ತಿ ಪ್ರದರ್ಶಿಸುತ್ತಿರುವ ಹುಬ್ಬಳ್ಳಿಯ ಸಚಿನ್!

ಸಚಿನ ಮಿಸ್ಕಿನ್ ಅವರು 15 ಸಾವಿರ ರೂಪಾಯಿ ಖರ್ಚು ಮಾಡಿ ಸಧ್ಯ ಕಾರನ್ನು ವಿಶೇಷವಾಗಿ ಕಾಣುವಂತೆ ಮಾಡಿ ಗಮನ ಸೆಳೆಯುತ್ತಿದ್ದಾನೆ. ಕಾರು ಎಲ್ಲಿ ಹೋದರೂ ಸಾಕು ಜನ ಕಾರನ್ನು ನೋಡುತ್ತಾ, ಸೆಲ್ಪಿ ತಗೆದುಕೊಳ್ಳುತ್ತಿರುವ ಚಿತ್ರಣ ಕಂಡು ಬರುತ್ತಿದೆ

ಶಿವಕುಮಾರ್ ಪತ್ತಾರ್
| Edited By: ಸಾಧು ಶ್ರೀನಾಥ್​|

Updated on:Jan 18, 2024 | 5:07 PM

Share

ದೇಶದೆಲ್ಲೇಡೆ ಎಲ್ಲಿ ನೋಡಿದಲ್ಲಿ ಜೈ ಶ್ರೀರಾಮ್ ಎನ್ನುತ್ತಾ ರಾಮನಾಮನ ಜಪ ಆರಂಭಗೊಂಡಿದೆ. ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿರುವ ಬೆನ್ನಲ್ಲೇ ಇತ್ತ ಇಲ್ಲೊಬ್ಬ ರಾಮ ಭಕ್ತ ಸಂಪೂರ್ಣವಾಗಿ ತನ್ನ ಕಾರನ್ನು ರಾಮ, ಹನುಮಂತ, ಸೀತಾ ಮಾತೆ ಯೊಂದಿಗೆ ಹೊಸ ರಾಮ ಮಂದಿರದ ಸ್ಟಿಕರ್ ಹಾಕಿಕೊಂಡು ತಮ್ಮೀ ಕಾರನ್ನು ಕೇಸರಿಮಯ ಮಾಡಿ ಭಕ್ತಿಯ ಪರಾಕಾಷ್ಠೆ ಮೆರೆದಿದ್ದಾನೆ. ಅಷ್ಟಕ್ಕೂ ಆ ರಾಮಭಕ್ತ ಯಾರು? ಆ ಕಾರನ್ನು ಹೇಗೆ ಮಾಡಿದ್ದಾರೆ… ಈ ಸ್ಟೋರಿ ನೋಡಿ.

ಹೌದು ಅತ್ತ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ದತೆಗಳು ನಡೆದಿದ್ದು ಇಂದು ಗುರುವಾರದಿಂದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿವೆ. ಇತ್ತ ದೇಶದೆಲ್ಲೆಡೆ ಜನರು ಕೂಡಾ ಈ ಒಂದು ಸಂಭ್ರಮವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತುಕೊಂಡಿದ್ದಾರೆ. ಆ ಐತಿಹಾಸಿಕ ದಿನವನ್ನು ವಿಶೇಷವಾಗಿ ಆಚರಣೆ ಮಾಡಲು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಬೇರೆ ಬೇರೆ ಆಚರಣೆಯ ಮೂಲಕ ಸಡಗರವನ್ನು ಇಮ್ಮಡಿಗೊಳಿಸಲು ಕರೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಕೂಡಾ ಜನವರಿ 22 ರಂದು ಬೇರೆ ಬೇರೆ ಕಾರ್ಯಕ್ರಮಗಳ ಮೂಲಕ ರಾಮ ಮಂದಿರ ಉದ್ಘಾಟನೆಯನ್ನು ಮಾಡಲು ಕಾತುರದಿಂದ ಕಾಯುತ್ತಿದ್ದು ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೊಬ್ಬ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ಕಾರನ್ನು ಸಂಪೂರ್ಣವಾಗಿ ಕೇಸರಿ ಮಯವನ್ನಾಗಿ ಮಾಡಿದ್ದಾನೆ.

ಎಸ್ ಹೀಗೆ ಕಾರಿನ ಮುಂದೆ ನಿಂತುಕೊಂಡಿರುವ ಯುವಕನೇ ಸಚಿನ ಮಿಸ್ಕಿನ್ ನಗರದ ಹೊಸೂರಿನ ನಿವಾಸಿಯಾಗಿದ್ದು ರಾಮಭಕ್ತನಾಗಿದ್ದಾನೆ. ಸಧ್ಯ ಐತಿಹಾಸಿಕ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಂದರ್ಭದಲ್ಲಿ ತನ್ನ ಕಾರನ್ನು ರಾಮ, ಲಕ್ಷ್ಮಣ, ಸೀತೆ ಹುನುಮಂತನ ಸ್ಟಿಕರ್ ಮಾಡಿಸಿದ್ದಾನೆ. ಸಚಿನ್ ಕಾರು ಸಂಪೂರ್ಣ ಕೇಸರಿಮಯ ವಾಗಿದೆ.

ಕಾರನ್ನು ಸಂಪೂರ್ಣವಾಗಿ ರಾಮ,ಲಕ್ಷ್ಮಣ,ಸೀತಾ ಮಾತೆ ಹನುಮಂತ ನಿಂದ ತುಂಬಿಕೊಂಡಿದ್ದು ದೇಶದ ಜನತೆ ಬೇರೆ ಬೇರೆ ರೀತಿಯಲ್ಲಿ ಸಡಗರ ಸಂಭ್ರಮವನ್ನು ಆಚರಣೆ ಮಾಡುತ್ತಿದಾರೆ. ಸಚಿನ ಮಿಸ್ಕಿನ್ ಅವರು 15 ಸಾವಿರ ರೂಪಾಯಿ ಖರ್ಚು ಮಾಡಿ ಸಧ್ಯ ಕಾರನ್ನು ವಿಶೇಷವಾಗಿ ಕಾಣುವಂತೆ ಮಾಡಿ ಗಮನ ಸೆಳೆಯುತ್ತಿದ್ದಾನೆ. ಕಾರು ಎಲ್ಲಿ ಹೋದರೂ ಸಾಕು ಜನ ಕಾರನ್ನು ನೋಡುತ್ತಾ, ಸೆಲ್ಪಿ ತಗೆದುಕೊಳ್ಳುತ್ತಿರುವ ಚಿತ್ರಣ ಕಂಡು ಬರುತ್ತಿದೆ.

ಇದನ್ನೂ ನೋಡಿ: ಜೈ ಶ್ರೀರಾಮ್ ಎನ್ನುತ್ತಾ ಬೈಕ್ ಮೂಲಕ ಅಯೋಧ್ಯೆಯತ್ತ ಹೊರಟೇಬಿಟ್ಟರು ಧಾರವಾಡದ ಆ ನಾಲ್ಕು ಮಂದಿ!

ಅಯೋಧ್ಯೆಯ ಶ್ರೀ ರಾಮಚಂದ್ರನಿಗೆ ವಿಶೇಷ ಅಭಿಮಾನ ತೋರಿದ ಸಚಿನನ ಕಾರು ಈಗ ಹುಬ್ಬಳ್ಳಿಯಲ್ಲಿ ವಿಶೇಷವಾಗಿ ಕಂಡು ಬರುತ್ತಿದೆ. ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದ. ಈತ ಇದೀಗ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತನ್ನ ಕಾರಿಗೆ ಸಂಪೂರ್ಣವಾಗಿ ಜೈಶ್ರೀರಾಮ ಘೋಷಣೆಗಳು, ಹನುಮಂತ, ರಾಮನ ಭಾವಚಿತ್ರದ ಸ್ಟೀಕರ್ ಹಚ್ಚುವ ಮೂಲಕ ತನ್ನ ವಿಶೇಷ ಅಭಿಮಾನವನ್ನು ತೋರಿಸಿದ್ದಾನೆ. ಇನ್ನು ಈತನ ಈ ಕಾರ್ಯಕ್ಕೆ ಸ್ಥಳೀಯರು ಕೂಡಾ ಸಾಥ್ ನೀಡಿದ್ದಾರೆ. ಸಚಿನ್ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ತನ್ನ ಕಾರನ್ನು ಓಡಾಡಿಸುವ ಮೂಲಕ ಶ್ರೀರಾಮನ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ, ತಮ್ಮಲ್ಲಿನ ರಾಮ ಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ.

ಆಧ್ಯಾತ್ಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Thu, 18 January 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು