AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 26ರಂದು ಕಾಂಗ್ರೆಸ್​ನಿಂದ ಮತ್ತೆ ಪ್ರತಿಭಟನೆ: ಮುಗಿದಿದ್ದ ಪ್ರಕರಣವನ್ನು ಮತ್ತೆ ಹೊರಗೆ ತೆಗೆದಿದ್ದಾರೆ, ಕೇಂದ್ರಕ್ಕೆ ನಾಚಿಕೆಯಾಗಬೇಕು ಎಂದ ಸಲೀಂ ಅಹ್ಮದ್

ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಮುಗಿದು ಹೋದ ಪ್ರಕರಣವನ್ನು ಮತ್ತೆ ಹೊರಗೆ ತೆಗೆದಿದ್ದಾರೆ. ಅವರಾರೂ ಇದಕ್ಕೆಲ್ಲಾ ಹೆದರೋದಿಲ್ಲ. ಇಬ್ಬರಿಗೂ ತೊಂದರೆ ಕೊಟ್ಟರೆ ನೀವು ಸರ್ವನಾಶ ಆಗ್ತೀರಾ.

ಜುಲೈ 26ರಂದು ಕಾಂಗ್ರೆಸ್​ನಿಂದ ಮತ್ತೆ ಪ್ರತಿಭಟನೆ: ಮುಗಿದಿದ್ದ ಪ್ರಕರಣವನ್ನು ಮತ್ತೆ ಹೊರಗೆ ತೆಗೆದಿದ್ದಾರೆ, ಕೇಂದ್ರಕ್ಕೆ ನಾಚಿಕೆಯಾಗಬೇಕು ಎಂದ ಸಲೀಂ ಅಹ್ಮದ್
ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ
TV9 Web
| Edited By: |

Updated on: Jul 24, 2022 | 7:37 PM

Share

ಧಾರವಾಡ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ‘ಕೈ’ ನಾಯಕರಿಗೆ ಸಮನ್ಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಜುಲೈ 26ರಂದು ಮತ್ತೆ ಪ್ರತಿಭಟನೆ(Congress Protest) ನಡೆಸುತ್ತೇವೆ ಎಂದು ಧಾರವಾಡದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್(Saleem Ahmed) ತಿಳಿಸಿದ್ದಾರೆ. ಸೋನಿಯಾ ಗಾಂಧಿ(Sonia Gandhi), ರಾಹುಲ್‌ ಗಾಂಧಿ(Rahul Gandhi)ಗೆ ಸಮನ್ಸ್‌ ನೀಡಿದ್ದನ್ನು ಖಂಡಿಸಿ ಜುಲೈ 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಮುಗಿದು ಹೋದ ಪ್ರಕರಣವನ್ನು ಮತ್ತೆ ಹೊರಗೆ ತೆಗೆದಿದ್ದಾರೆ. ಅವರಾರೂ ಇದಕ್ಕೆಲ್ಲಾ ಹೆದರೋದಿಲ್ಲ. ಇಬ್ಬರಿಗೂ ತೊಂದರೆ ಕೊಟ್ಟರೆ ನೀವು ಸರ್ವನಾಶ ಆಗ್ತೀರಾ. ನಾವೆಲ್ಲರೂ ಅವರೊಂದಿಗೆ ಇದ್ದೇವೆ. ಜುಲೈ 26ರಂದು ಮತ್ತೆ ಬೆಂಗಳೂರಿನಲ್ಲಿ ಪ್ರತಿಭಟನೆ ಇಟ್ಟುಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವ ಸಂಕಲ್ಪ ಚಿಂತನಾ ಶಿಬಿರ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಲೀಂ ಅಹ್ಮದ್‌ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ. ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ವಿಚಾರಕ್ಕೆ ಸಂಬಂಧಿಸಿ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೆ ಹೋರಾಟ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಸಂತೋಷ್‌ ಆತ್ಮಹತ್ಯೆ ನಂತರ ಕೇಸ್ ದಾಖಲಿಸಲು ಆಗ್ರಹಿಸಿದ್ದೆವು. K.S.ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸದೆ ಕ್ಲೀನ್‌ಚಿಟ್‌ ನೀಡಿದ್ದಾರೆ. ಮತ್ತೆ ಸಚಿವ ಸ್ಥಾನ ಪಡೆಯಲು ಕೆ.ಎಸ್.ಈಶ್ವರಪ್ಪ ಸಿದ್ಧರಾಗಿದ್ದಾರೆ. ಇವರಿಗೆಲ್ಲಾ ಅಧಿಕಾರದ ಆಸೆ, ಇದೊಂದು ನಿರ್ಜೀವ ಸರ್ಕಾರ. ಹೀಗಾಗಿ ಈಶ್ವರಪ್ಪ ವಿರುದ್ಧ ಮತ್ತೆ ಹೋರಾಟ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಬಿಜೆಪಿಯವ್ರು ಸಮಾಜ ಒಡೆಯುವ ಕೆಲಸ ಮಾಡಿದರು

ಬಿಜೆಪಿಗೆ ಸೋಲಾಗುತ್ತೆಂದು ಇಂಟಲಿಜೆನ್ಸ್ ರಿಪೋರ್ಟ್‌ ಸಿಕ್ಕಿತ್ತು. ಬಿಜೆಪಿಗೆ ಕೇವಲ 60 ಸೀಟು ಸಿಗುತ್ತೆ ಅನ್ನೋ ಮಾಹಿತಿ ಬಂತು. ಹೀಗಾಗಿ ಬಿಜೆಪಿಯವ್ರು ಸಮಾಜ ಒಡೆಯುವ ಕೆಲಸ ಮಾಡಿದರು. ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ಬಿಜೆಪಿಗೆ ಸೋಲಾಗುತ್ತೆಂದು ತಿಳಿದೇ ಜಿ.ಪಂ, ತಾ.ಪಂ ಚುನಾವಣೆ ನಡೆಸುತ್ತಿಲ್ಲ. ನಮ್ಮ ಸರ್ವೆ ಪ್ರಕಾರ 130 ಸೀಟ್‌ ಪಡೆದು ‘ಕೈ’ ಅಧಿಕಾರಕ್ಕೆ ಬರುತ್ತೆ. ನಾಯಕ ರಾಹುಲ್ ಗಾಂಧಿ 150 ಸೀಟ್ ಟಾರ್ಗೆಟ್ ನೀಡಿದ್ದಾರೆ ಎಂದರು.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?