AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ

ಹಿಂದೊಮ್ಮೆ ಗಣಪತಿ ಪೂಜೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂಬ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಸನಾತನವಾದಿಗಳ ವಿರುದ್ಧ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 06, 2024 | 9:48 PM

Share

ಧಾರವಾಡ, ಫೆ.06: ಸನಾತನವಾದಿಗಳ ವಿರುದ್ಧ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ (Sanehalli panditaradhya shivacharya swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ(Dharwad) ದಲ್ಲಿ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಮಾತನಾಡಿದ ಅವರು ‘ ಡಾ.ಎಂ.ಎಂ.ಕಲಬುರ್ಗಿಯನ್ನು ನಾವು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇವೆ. ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸನಾತನವಾದಿಗಳು ಮೊದಲಿನಿಂದಲೂ ಇಂತಹ ಕಿರುಕುಳ ಕೊಡುತ್ತಿದ್ದಾರೆ. ಅದು 12ನೇ ಶತಮಾನದಲ್ಲೂ ಸತ್ಯ, 21ನೇ ಶತಮಾನದಲ್ಲೂ ಸತ್ಯ ಎಂದು ಕಿಡಿಕಾರಿದರು.

ಸನಾತನವಾದಿಗಳು ವ್ಯಕ್ತಿಯನ್ನು ಕೊಲ್ಲಬಹುದು, ವಿಚಾರ ಕೊಲ್ಲಲು ಆಗಲ್ಲ

ಅವರು ವ್ಯಕ್ತಿಯನ್ನು ಕೊಲ್ಲಬಹುದು, ವ್ಯಕ್ತಿಯ ವಿಚಾರವನ್ನು ಎಂದಿಗೂ ಕೊಲ್ಲಲು ಸಾಧ್ಯವಿಲ್ಲ. ಕಲಬುರ್ಗಿ ಎಂಬ ವ್ಯಕ್ತಿ ಹೋಗಿರಬಹುದು. ಆದರೆ, ಅವರ ವಿಚಾರಗಳನ್ನು ಇನ್ನಷ್ಟು ಪ್ರಖರತೆ ಪಡೆದುಕೊಳ್ಳುತ್ತಿವೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯಶ್ರೀ ಹೇಳಿದರು.

ಇತ್ತೀಚೆಗೆ ಗಣಪತಿ ಪೂಜೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿತ್ತು. ಇಷ್ಟೇಲ್ಲ ಆದ ಬಳಿಕ ಪ್ರತಿಕ್ರಿಯಿಸಿದ್ದ ಅವರು ‘ಗಣಪತಿ ನಮ್ಮ ಸಂಸ್ಕೃತಿ ಅಲ್ಲ ಎಂದು ಪುನರುಚ್ಚರಿಸಿದ್ದರು. ಜೊತೆಗೆ ಟೀಕೆ ಮಾಡಿದವರ ವಿರುದ್ಧ ಗುಡುಗಿದ್ದರು.

ಇದನ್ನೂ ಓದಿ:ಗಣಪತಿ ನಮ್ಮ ಸಂಸ್ಕೃತಿ ಅಲ್ಲ, ಮತ್ತೆ ಪುನರುಚ್ಚರಿಸಿ ಟೀಕಾಕಾರರಿಗೆ ಉತ್ತರ ಕೊಟ್ಟ ಸಾಣೇಹಳ್ಳಿ ಸ್ವಾಮೀಜಿ

ನಮ್ಮ ಸಂಸ್ಕೃತಿ ಎಂದರೆ ಲಿಂಗಾಯತ, ಶರಣ ಸಂಸ್ಕೃತಿ. ಕೆಲ ಮಹಾನುಭಾವರು ದೊಡ್ಡ ಲೇಖನ ಬರೆದಿದ್ದಾರೆ. ಈ ರೀತಿ ಹೇಳಿಕೆ ನೀಡಿ ನಿಜಗುಣಾನಂದಶ್ರೀ ರಾಜ್ಯೋತ್ಸವ ಪ್ರಶಸ್ತಿ ಪಡೆದರು ಎಂದು ಬರೆದಿದ್ದಾರೆ. ಪಂಡಿತಾರಾಧ್ಯಶ್ರೀಗೆ ಮೊಟ್ಟ ಮೊದಲ ರಾಜ್ಯೋತ್ಸವ ಪ್ರಶಸ್ತಿ ಬಂದಿದ್ದು ಅವರಿಗೆ ಗೊತ್ತಿಲ್ಲ ಎಂದು ಟೀಕೆಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸನಾತನವಾದಿಗಳ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ