AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ

Selfie Madness: ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ.

ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ
ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ
TV9 Web
| Edited By: |

Updated on:Jul 17, 2022 | 8:07 PM

Share

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ (Selfie Madness) ಯುವಕನೊಬ್ಬ ‌ನೀರು ಪಾಲಾದ (Watery Grave) ದುರಂತ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ (Neerasagara Reservoir) ಈ ಘಟನೆ ನಡೆದಿದೆ. ಕಿರಣ (22) ನೀರಲ್ಲಿ ಕೊಚ್ಚಿ ಹೋದ ಯುವಕ.

ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ: ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car accident: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಇಬ್ಬರ ಸಾವು

ಆನೇಕಲ್: ಮರಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅನೇಕಲ್‌ ತಾಲೂಕಿನ ಸೋಲೂರು ಗೇಟ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಸಿಲುಕಿದ್ದ ಐವರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಬಳಿಕ ಅನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಾರು ಸೋಲೂರು ಗೇಟ್ ಬಳಿಯಿಂದ ಬೆಂಗಳೂರು ಕಡೆ ಹೊರಟಿತ್ತು.

ಡಿವೈಡರ್​ಗೆ ಬೈಕ್ ಡಿಕ್ಕಿ: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಉಡುಪಿ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19), ಆದಿತ್ಯರೆಡ್ಡಿ(18) ಸೇರಿ ಮಣಿಪಾಲ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಇಬ್ಬರು ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರು ಹರಿಯುವುದನ್ನು ನೋಡುತ್ತಿದ್ದ ಆಟೋ ಚಾಲಕ ಕಾಲುವೆಯಲ್ಲಿ ಕೊಚ್ಚಿ ಹೋದ್ರು

ಇನ್ನು ಮತ್ತೊಂದು ಕಡೆ ತುಮಕೂರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ರಕ್ಷಣಾ ಕಾರ್ಯದ ಬಗ್ಗೆ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಿಂಗ್‌ ರಸ್ತೆಯ ಗುಬ್ಬಿ ಗೇಟ್‌ನ ದಾನ ಪ್ಯಾಲೇಸ್‌ ಬಳಿ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದರು. ಮಳೆಯಿಂದ ಕಾಲುವೆಯಲ್ಲಿ ಜೋರಾಗಿ ನೀರು ಹರಿಯುತ್ತಿತ್ತು. ನೀರು ಹರಿಯುವುದನ್ನ ನೋಡ್ತಿದ್ದಾಗ ಚಾಲಕ ಕೊಚ್ಚಿಹೋಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಬಳಿ ಅಪಘಾತ

ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಅಪಘಾತವಾಗಿದೆ. ಹೊಸೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಡಿಕ್ಕಿ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಸಿಗ್ನಲ್ ರೆಡ್ ಆಗಿದ್ರೂ ಕಾರು ಚಾಲಕ ಜಂಪ್ ಮಾಡಿದ್ದಾನೆ. ಕಾರು ತೆರಳಿದ್ದನ್ನು ಗಮನಿಸಿ ಹಿಂದಿನಿಂದ ಲಾರಿ ಕೂಡ ಮುನ್ನುಗ್ಗಿತ್ತು. ಕಾರು ಸಡನ್ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.

Published On - 7:47 pm, Sun, 17 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?