AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು

ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವುದು ತಿಳಿದು ಬಂದಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.

Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು
ನಾಡೋಜ ಚೆನ್ನವೀರ ಕಣವಿ
TV9 Web
| Edited By: ಆಯೇಷಾ ಬಾನು|

Updated on: Feb 07, 2022 | 2:43 PM

Share

ಧಾರವಾಡ: ನಾಡೋಜ ಚೆನ್ನವೀರ ಕಣವಿ(Chennaveera Kanavi) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವುದು ತಿಳಿದು ಬಂದಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಣವಿಯವರಿಗೆ ಮತ್ತೆ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದೆ. ಚೆನ್ನವೀರ ಕಣವಿ ಜ.14ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿದ್ರು.

ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 3-4 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದರು.

ಇದನ್ನೂ ಓದಿ: ವಿಳಂಬವಾಗಬಹುದು ‘ರಾಧೆ ಶ್ಯಾಮ್​’ ಒಟಿಟಿ ರಿಲೀಸ್​; ಇದಕ್ಕಿದೆ ಮಹತ್ವದ ಕಾರಣ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ