AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್​; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ

ಚುನಾವಣೆಗೂ ಮುನ್ನ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತ್ತು. ಅಲ್ಲಿಂದ ಜೂ. 27ರವರೆಗೆ ವಾಯವ್ಯ ವಿಭಾಗದ ಬಸ್ಸುಗಳಲ್ಲಿ ಬರೊಬ್ಬರಿ 2,14,75,000 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರ ಟಿಕೆಟ್ ಮೌಲ್ಯ 54 ಕೋಟಿಗೂ ರೂಪಾಯಿಗೂ ಅಧಿಕವಾಗಿದೆ.

ಶಕ್ತಿ ಯೋಜನೆ ಎಫೆಕ್ಟ್​; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ
ಉಚಿತ ಮಹಿಳಾ ಪ್ರಯಾಣ
ಶಿವಕುಮಾರ್ ಪತ್ತಾರ್
| Edited By: |

Updated on: Jun 29, 2023 | 1:14 PM

Share

ಹುಬ್ಬಳ್ಳಿ: ಚುನಾವಣೆಗೂ ಮುನ್ನ ಕಾಂಗ್ರೆಸ್(Congress)​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ(Free Bus Service) ಹಿನ್ನಲೆ ಎಲ್ಲಾ ಬಸ್​ಗಳು ಫುಲ್​ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ ಒಳಪಡುವ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಉತ್ತರ ಕನ್ನಡ ಹಾವೇರಿ ಸೇರಿ 9 ಜಿಲ್ಲೆಯ ಸಾರಿಗೆ ವಿಭಾಗದಲ್ಲಿ ಮಹಿಳೆಯರ ಪ್ರಯಾಣಿಕರ ಸಂಖ್ಯೆ ಕೋಟಿ ದಾಟಿದೆ.

ಜೂ.11ರಿಂದ ಜೂ.27ರವರೆಗೆ 2 ಕೋಟಿಗೂ ಹೆಚ್ಚು ಮಹಿಳೆಯರ ಸಂಚಾರ

ಹೌದು ಜೂನ್​ 11ರಿಂದ 27ರವರೆಗೆ ಬರೊಬ್ಬರಿ 2,14,75,000 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರ ಟಿಕೆಟ್ ಮೌಲ್ಯ 54 ಕೋಟಿಗೂ ರೂಪಾಯಿಗೂ ಅಧಿಕವಾಗಿದೆ. ಜೂ.27 ರ ಒಂದೇ ದಿನ 14,88,000 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳಸಿದ್ದಾರೆ. ಇನ್ನು ಮಹಿಳೆಯರ ಜೊತೆ ಪುರುಷ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗಿದೆ. ಜೂ.27 ರಂದು ಒಂದೇ ದಿನ ವಾಯುವ್ಯ ಸಾರಿಗೆ ವಿಭಾಗದಲ್ಲಿ 26 ಲಕ್ಷ 31 ಸಾವಿರ ಜನ ಪ್ರಯಾಣಿಸಿದ್ದಾರೆ. ಇದರಲ್ಲಿ 14 ಲಕ್ಷ 88 ಸಾವಿರ ಮಹಿಳಾ ಪ್ರಯಾಣಿಕರು, 11 ಲಕ್ಷ 43 ಸಾವಿರ ಪುರುಷ ಪ್ರಯಾಣಿಕರ ಪ್ರಯಾಣಕರು ಸೇರಿದ್ದಾರೆ.

ಇದನ್ನೂ ಓದಿ:Chamarajanagara: ಮಹಿಳೆಯರಿಗೆ ಉಚಿತ ಪ್ರಯಾಣ ಎಫೆಕ್ಟ್​; ಡ್ರೈವರ್​ ಸೀಟ್​ ಮೂಲಕ ಬಸ್ ಹತ್ತಿದ ಲೇಡಿಸ್

2 ಕೋಟಿ ಮಹಿಳಾ ಪ್ರಯಾಣದ ವೆಚ್ಚವನ್ನು ಸರ್ಕಾರ ಬರಿಸಬೇಕು

ಗದಗ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸಿ ಸಿ ಪಾಟೀಲ್ ಕಾಂಗ್ರೆಸ್​ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ ಬಸ್ ಪ್ರಯಾಣ ಹೊರತುಪಡಿಸಿದ್ರೆ, ಉಳಿದ ಯೋಜನೆ ಜಾರಿ ಮಾಡಲು ಸಾಧ್ಯವಾಗ್ತಾಯಿಲ್ಲ. ಈವರಿಗೆ 2 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಆ 2 ಕೋಟಿ ಪ್ರಯಾಣದ ವೆಚ್ಚವನ್ನು ಸರ್ಕಾರ ಬರಿಸಬೇಕು. ಇಲ್ಲವೆಂದರೆ ಚಾಲಕ ಹಾಗೂ ಕಂಡಕ್ಟರ್ ಬಸ್ ಬಿಟ್ಟು ಹೋಗಬೇಕಾಗುತ್ತೇ. ಇನ್ನು ಈ ಉಚಿತ ಪ್ರಯಾಣದಿಂದ ಶಾಲಾ ಮಕ್ಕಳಿಗೆ, ತೊಂದರೆಯಾಗುತ್ತಿದೆ, ಹೆಚ್ಚಿನ ಬಸ್ ವ್ಯವಸ್ಥೆ ಕೂಡ ಇಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ