Sign In

By signing in or creating an account, you agree with Associated Broadcasting Company's Terms & Conditions and Privacy Policy.

Pradhan Joshi: ಸಿದ್ದರಾಮಯ್ಯ ಅವರದ್ದು ನುಡಿದಂತೆ ನಡೆಯದ ಸರ್ಕಾರ : ವೈಫಲ್ಯಗಳ ಪಟ್ಟಿ ಬಿಡುಗಡೆ ಮಾಡಿ ಸಿಎಂಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Siddaramaiah: ಸಮೃದ್ಧವಾಗಿದ್ದ ಕರ್ನಾಟಕದ ಸ್ಥಿತಿಯನ್ನು ಸಂಪೂರ್ಣ ಹಾಳು ಮಾಡಿದ್ದಲ್ಲದೆ, ಜನರ ಏಳಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಯೋಚನೆ, ಯೋಜನೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರಕಾರದ ಕಡೆ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

Pradhan Joshi: ಸಿದ್ದರಾಮಯ್ಯ ಅವರದ್ದು ನುಡಿದಂತೆ ನಡೆಯದ ಸರ್ಕಾರ : ವೈಫಲ್ಯಗಳ ಪಟ್ಟಿ ಬಿಡುಗಡೆ ಮಾಡಿ ಸಿಎಂಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಸಿದ್ದರಾಮಯ್ಯ ಅವರದ್ದು ನುಡಿದಂತೆ ನಡೆಯದ ಸರ್ಕಾರ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Follow us
ಸಾಧು ಶ್ರೀನಾಥ್​
|

Updated on: Oct 30, 2023 | 7:59 PM

ಸಮೃದ್ಧವಾಗಿದ್ದ ಕರ್ನಾಟಕದ ಸ್ಥಿತಿಯನ್ನು (Karnataka) ಸಂಪೂರ್ಣ ಹಾಳು ಮಾಡಿದ್ದಲ್ಲದೆ, ಜನರ ಏಳಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಯೋಚನೆ, ಯೋಜನೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah), ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರಕಾರದ ಕಡೆ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಟೀಕಿಸಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಂಕಿ ಅಂಶಗಳ ಸಹಿತ ತಿರುಗೇಟು ನೀಡಿದ್ದಾರೆ.

ನುಡಿದಂತೆ ನಡೆಯದ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರು ತಿಳಿಯಬೇಕಿದೆ ಎನ್ನುವ ಜೊತೆಗೆ ಸಿದ್ದರಾಮಯ್ಯ ಸರ್ಕಾರದ ವೈಫಲಗಳ ಪಟ್ಟಿಯನ್ನೇ ಪ್ರಲ್ಹಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆ ಮಾಡಿದ್ದಾರೆ. ಆ ವಿವರ ಹೀಗಿದೆ.

* ರಾಜ್ಯದ ಭವಿಷ್ಯದ ಯೋಚನೆಯಿಲ್ಲದೆ ಅರ್ಥಹೀನ ಬಿಟ್ಟಿ ಭಾಗ್ಯ ಘೋಷಣೆ ಹಾಗೂ ಈ ಮೂಲಕ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಕಂಟಕ ತಂದಿರುವುದು

* 10 ವರ್ಷದ ಯುಪಿಎ ಆಡಳಿತ ಮತ್ತು 9 ವರ್ಷದ ಬಿಜೆಪಿ ಆಡಳಿತದಲ್ಲಿ ಕರ್ನಾಟಕಕ್ಕೆ‌ ಅತೀ ಹೆಚ್ಚು ಅನುದಾನ ಒದಗಿಸಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ

* 2014-19ರಲ್ಲಿ ಕರ್ನಾಟಕಕ್ಕೆ ₹1.35 ಲಕ್ಷ ಕೋಟಿಯಷ್ಟು ತೆರಿಗೆ ಹಂಚಿಕೆಯಾಗಿದೆ, ಯುಪಿಎ ಆಡಳಿತಕ್ಕೆ ಹೋಲಿಸಿದರೆ ಇದು 2.5 ಪಟ್ಟು ಹೆಚ್ಚು

* ರಾಜ್ಯದ ನೀರಾವರಿ ವ್ಯವಸ್ಥೆ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಸಿದ್ದರಾಮಯ್ಯ ಸರ್ಕಾರದಿಂದ ಜನರ ದಿಕ್ಕು ತಪ್ಪಿಸುವ ಪ್ರಯತ್ನ

* ಕಳಸಾ ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈಗಾಗಲೇ ಡಿಪಿಆರ್ ಅನುಮೋದಿಸಿದ್ದು, ಮಾಹಿತಿ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ

* ಅಟಲ್ ಭುಜಲ್ ಯೋಜನೆಯಡಿ ಕೇಂದ್ರ ಸರಕಾರವು ಕರ್ನಾಟಕಕ್ಕೆ ₹ 629.54 ಕೋಟಿ ಬಿಡುಗಡೆ ಮಾಡಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರ ಅದರಲ್ಲಿ ಬಳಸಿರುವುದು ಕೇವಲ ₹ 274.05 ಕೋಟಿ ಮಾತ್ರ (28.10.2023ರವರೆಗೆ)

* 2007ರಲ್ಲಿ ಗೋವಾದಲ್ಲಿ ನಿಂತು ಮಹದಾಯಿ ವಿಚಾರವಾಗಿ ಮಾತನಾಡಿದ ಸೋನಿಯಾ ಗಾಂಧಿ, ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ಬಿಟ್ಟುಕೊಡುವುದಿಲ್ಲ ಎಂದಿದ್ದರು, ಆದರೆ ಇಂದು ಅದೇ ವಿಚಾರವಾಗಿ ಸಿದ್ದರಾಮಯ್ಯನವರಿಂದ ರಾಜ್ಯದಲ್ಲಿ ವಿವಾದ ಹುಟ್ಟು ಹಾಕುವ ಪ್ರಯತ್ನ

* ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ನಮ್ಮ ಸರಕಾರ ಗೋವಾ ಸರಕಾರದ ಜೊತೆ ಚರ್ಚಿಸಿದ ನಂತರ ಕರ್ನಾಟಕಕ್ಕೆ ನೀರು ಹರಿಸಲು ಒಪ್ಪಿಕೊಂಡಿತ್ತು.

Also Read: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಹೀಗೆ ರಾಜ್ಯ ಸರ್ಕಾರದ ವಿರುದ್ಧ ಸುಧೀರ್ಘ ಅಂಕಿಅಂಶಗಳ ಮೂಲಕ ಪಾಯಿಂಟ್ ಬೈ ಪಾಯಿಂಟ್ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಪ್ರಲ್ಹಾದ ಜೋಶಿಯವರು, “ಸಿದ್ದರಾಮಯ್ಯನವರೇ, ನಿಮ್ಮ ಎಲೆಯಲ್ಲಿ ಏನು ಬಿದ್ದಿದೆ ನೋಡಿ ನಂತರದಲ್ಲಿ ಕೇಂದ್ರ ಸರಕಾರದ ಕಡೆ ಬೆರಳು ಮಾಡಿ ತೋರಿಸುವಿರಂತೆ!” ಎಂದು ಖಡಕ್ ಪ್ರತ್ಯುತ್ತರ ನೀಡಿದ್ದಾರೆ‌.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ