AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ, ಅವರು ಸುಳ್ಳು ರಾಮಯ್ಯ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳು ರಾಮಯ್ಯ .2004 - 2014 ವರೆಗೆ NDRF ಬಿಡುಗಡೆ ಮಾಡಿದ ಒಟ್ಟು ಅನುದಾನ ರೂ. 3655 ಕೋಟಿ ಆದರೆ 2014 ರಿಂದ ಇಲ್ಲಿಯ ತನಕ ಬಿಡುಗಡೆ ಮಾಡಲಾದ ಅನುದಾನ ರೂ. 12,542 ಕೋಟಿ, ನಾಲ್ಕು ಪಟ್ಟು ಹೆಚ್ಚು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ, ಅವರು ಸುಳ್ಳು ರಾಮಯ್ಯ -ಪ್ರಹ್ಲಾದ್ ಜೋಶಿ
ಸಿದ್ದರಾಮಯ್ಯ, ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: ಆಯೇಷಾ ಬಾನು|

Updated on:Feb 14, 2024 | 12:11 PM

Share

ಹುಬ್ಬಳ್ಳಿ, ಫೆ.14: ಸಿದ್ದರಾಮಯ್ಯ (Siddaramaiah) ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಅವರು ಸುಳ್ಳು ರಾಮಯ್ಯ. ನಾನು ನಿನ್ನೆಯಿಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಮೊದಲು NDRF (ನ್ಯಾಷನಲ್ ಡಿಸಾಸ್ಟರ್ ರಿಲೀಫ್ ಫಂಡ್) ಫಂಡ್​ನಲ್ಲಿ ಇಷ್ಟು ಪ್ರಮಾಣದ ಹಣ ಕೊಡುತ್ತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಬಿ.ಎಸ್. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತೀದಾರೆ. ನಾವು ಒಂದೇ ಒಂದು ರೂಪಾಯಿ GST ಹಣ ಕೊಡೋದು ಕೂಡ ಬಾಕಿ ಇಲ್ಲ ಎಂದು ಸಿದ್ದರಾಮಯ್ಯನವರ ಆರೋಪಗಳಿಗೆ ಜೋಶಿ ತಿರುಗೇಟು ನೀಡಿದರು.

ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ

ಇದನ್ನೂ ಓದಿ: ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

NDRFನಲ್ಲಿ ನಾವು 12 ಸಾವಿರ ಕೋಟಿ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ ಇತ್ತು. ನಮ್ಮ ಕಾಲದಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷದಲ್ಲಿ 81 ಸಾವಿರ ಕೋಟಿ ಹೆಚ್ಚಿದೆ. ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ಇವರು ಯಾವುದೇ ಗ್ರ್ಯಾಂಟ್ ಕೊಟ್ಟಿಲ್ಲ ಅಂತೀದಾರೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. 2004 ರಿಂದ 2014 ರಲ್ಲಿ 1667 ಕೋಟಿ ಹಣ ಬಿಡುಗಡೆಯಾಗಿತ್ತು. ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರು ಸುಳ್ಳು ರಾಮಯ್ಯ. ನಾನು ನಿನ್ನೆ ಇಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ. ಮಹದಾಯಿ ವಿಚಾರ ಅರಣ್ಯ ಇಲಾಖೆ ನಿರಾಕರಣೆ ಮಾಡಿಲ್ಲ ಎಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ

ಸಿದ್ದರಾಮಯ್ಯ 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು. ಅನುದಾನ ವಿಚಾರವಾಗಿ ಡ್ಯಾಶ್ ಬೋರ್ಡ್​ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ಅದನ್ನು ಡೌನ್​ಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಇದೀಗ ಅಂಕಿ-ಅಂಶವೇ ಡಿಲೀಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ ಮಾಡಿದರು. ಇದೇ ವೇಳೆ ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಒಂದು ಹಂತದಲ್ಲಿ ಚರ್ಚೆ ನಡೆಯುತ್ತಿದೆ, ಅದೆಲ್ಲವೂ ಅಪೂರ್ಣ ಆಗಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಎಲ್ಲವೂ ಅಂತಿಮವಾಗಲಿದೆ. ಈ ಬಾರಿ ಚುನಾವಣೆಯಲ್ಲಿ ನಾನು ಮತ್ತೆ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರ ಬಗ್ಗೆ ನಾವು ಸಹಾನುಭೂತಿ ಹೊಂದಿದ್ದೇವೆ

ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ವಿಚಾರ ಸಂಬಂಧ ಮಾತನಾಡಿದ ಪ್ರಹ್ಲಾದ್ ಜೋಶಿ, ಕೃಷಿ ಸಚಿವರು ರೈತ ಮುಖಂಡರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ರೈತರ ಹೊಸ ಬೇಡಿಕೆಯನ್ನು ನಮ್ಮ ಸರ್ಕಾರ ಪರಿಶೀಲನೆ ಮಾಡ್ತಿದೆ. ಸಹಾನುಭೂತಿಯಿಂದ ಎಲ್ಲ ಬೇಡಿಕೆ ಪರಿಶೀಲನೆ ಮಾಡುತ್ತಿದ್ದಾರೆ. ರೈತರ ಬಗ್ಗೆ ನಾವು ಸಹಾನುಭೂತಿ ಹೊಂದಿದ್ದೇವೆ. ಕಲ್ಲು ಹೊಡೆಯೋದು ಕೆಲಸವಲ್ಲ, ರೈತರು ಮಾತುಕತೆಗೆ ಬರಬೇಕು. ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡ್ತಿಲ್ಲ. ಅನುಮತಿ‌ ಇಲ್ಲದೆ ಬಂದವರನ್ನು ಪೊಲೀಸರು ತಡೆಯುತ್ತಿದ್ದಾರೆ. ನಮ್ಮ ದೇಶದ ಪ್ರಜೆಗಳನ್ನು ಉಳಿಸುವ ಕೆಲಸ ಆಗ್ತಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Wed, 14 February 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು