AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಕಾನೂನು ಸಚಿವರ ವಿರುದ್ಧವೇ ಹೋರಾಡಿ ಸುಪ್ರೀಂಕೋರ್ಟ್​​ನಲ್ಲಿ ಗೆದ್ದ ಅಕ್ಕ ತಂಗಿ

ಹುಬ್ಬಳ್ಳಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದು ಎಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ಕೋರ್ಟ್​​ ಶಾಕ್​​ ಕೊಟ್ಟಿದ್ದು, 135 ವರ್ಷಗಳ ಬಳಿಕ ಜಾಗ ಮರಳಿ ನಮ್ಮದಾಗಿದೆ ಎಂದು ಸಹೋದರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ: ಕಾನೂನು ಸಚಿವರ ವಿರುದ್ಧವೇ ಹೋರಾಡಿ ಸುಪ್ರೀಂಕೋರ್ಟ್​​ನಲ್ಲಿ ಗೆದ್ದ ಅಕ್ಕ ತಂಗಿ
ಹೆಚ್​​.ಕೆ. ಪಾಟೀಲ್ ಕುಟುಂಬಕ್ಕೆ ಹಿನ್ನಡೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 11, 2025 | 2:45 PM

Share

ಹುಬ್ಬಳ್ಳಿ, ಡಿಸೆಂಬರ್​​ 11: ಜಾಗದ ವಿಚಾರವಾಗಿ ಕರ್ನಾಟಕದ ಕಾನೂನು ಸಚಿವ ಹೆಚ್​​. ಕೆ. ಪಾಟೀಲ್​​ ಅವರ ವಿರುದ್ಧವೇ ಹೋರಾಡಿ ಸುಪ್ರೀಂಕೋರ್ಟ್​​ನಲ್ಲಿ ಅಕ್ಕ-ತಂಗಿ ಗೆದ್ದಿದ್ದಾರೆ. ಹುಬ್ಬಳ್ಳಿ ನಗರದ ಪಿಂಟೋ ಸರ್ಕಲ್ ಬಳಿಯ 15 ಗುಂಟೆ ಜಾಗವನ್ನು ಕಬಳಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಾದ ಹುಬ್ಬಳ್ಳಿ ನಗರಗ ಸಾವಕ್ಕ ಸುಳ್ಳದ, ಧಾರವಾಡದ ಜಕ್ಕವ್ವ ಕೋರ್ಟ್​​ ಮೊರೆ ಹೋಗಿದ್ದರು. ಹೆಚ್​​.ಕೆ. ಪಾಟೀಲ್ ಕುಟುಂಬ ಆಸ್ತಿ ಬಿಟ್ಟುಕೊಡ್ತಿಲ್ಲ ಎಂದು ಆರೋಪಿಸಿದ್ದರು. ಈ ಬಗ್ಗೆ ಸುಪ್ರೀಂ ಕೋರ್ಟ್ ದ್ವೀಸದಸ್ಯ ಪೀಠ ಡಿಸೆಂಬರ್ 9ರಂದು ಆದೇಶ ನೀಡಿದ್ದು, 15 ಗುಂಟೆ ಜಾಗ ಸಾವಕ್ಕ ಮತ್ತು ಜಕ್ಕವ್ವ ಸಹೋದರಿಯರಿಗೆ ಸೇರಿದ್ದು ಎಂದಿದೆ.

ಪ್ರಕರಣ ಏನು?

ಸಾವಕ್ಕ, ಜಕ್ಕವ್ವ ತಂದೆ ಮರಿತಮ್ಮಪ್ಪ ಅಮರಶೆಟ್ಟಿ 1894ರಲ್ಲಿ ಇಂಡಿಯನ್ ಕಾಟನ್ ಕಂಪನಿಗೆ 5 ಎಕರೆ ಜಾಗವನ್ನು 10 ವರ್ಷಗಳ ಕಾಲ ಲೀಸ್​​ಗೆ ನೀಡಿದ್ದರು. ಬಳಿಕ 1941ರಲ್ಲಿ ಸಿದ್ದಲಿಂಗಪ್ಪ ಬುಳ್ಳಾ ಅನ್ನೋರು ಇಂಡಿಯನ್ ಕಾಟನ್ ಕಂಪನಿಯಿಂದ ಲೀಸ್ ಹೋಲ್ಡ್ ರೈಟ್ಸ್ ಖರೀದಿಸಿದ್ದರು. ಅದಾದಮೇಲೆ 1964ರಲ್ಲಿ ಬುಳ್ಳಾರಿಂದ ಹೆಚ್. ಕೆ.  ಪಾಟೀಲ್​​ರ ತಂದೆ ಕೆ. ಹೆಚ್. ಪಾಟೀಲರು ಆ ಪೈಕಿ 15 ಗುಂಟೆ ಜಾಗವನ್ನು ಸಬ್​​ಲೀಸ್​​ಗೆ ಪಡೆದಿದ್ದರು. ಬಳಿಕ ಲೀಸ್​​ಗೆ ಪಡೆದ ಜಾಗವನ್ನು ಬುಳ್ಳಾ ಕುಟುಂಬ ಮತ್ತು ಹೆಚ್. ಕೆ. ಪಾಟೀಲ್ ಕುಟುಂಬ ಬಿಟ್ಟುಕೊಡದ ಕಾರಣ ಸಹೋದರಿಯರು ಕೋರ್ಟ್​​ ಮೊರೆ ಹೋಗಿದ್ದರು. 2024ರಲ್ಲಿ ಸಾವಕ್ಕ ಮತ್ತು ಜಕ್ಕವ್ವ ಪರ ಸುಪ್ರೀಂಕೋರ್ಟ್​​ ಆದೇಶವಾಗಿತ್ತು.

ಇದನ್ನೂ ಓದಿ: NWKRTCಗೆ ಬಾರದ 940 ಕೋಟಿ ಶಕ್ತಿ ಯೋಜನೆ ಹಣ; ಸಂಕಷ್ಟದಲ್ಲಿ ನಿಗಮ

ಕೋರ್ಟ್​​ ತನ್ನ ಆದೇಶದಲ್ಲಿ ಮೂಲ ಬಾಡಿಗೆದಾರ ಬುಳ್ಳಾ ಜಾಗದ ಮಾಲೀಕರಲ್ಲಎಂದು ಹೇಳಿದ್ದ ಕಾರಣ, ಅವರ ಕುಟುಂಬ ಕಬ್ಜಾ ಮಾಡಿದ್ದ ಜಾಗವನ್ನು ಮಾಲಿಕರಿಗೆ ಬಿಟ್ಟುಕೊಟ್ಟಿತ್ತು. ಆದರೆ ಹೆಚ್. ಕೆ. ಪಾಟೀಲ್ ಕುಟುಂಬ ಮಾತ್ರ ಇದಕ್ಕೆ ತಕರಾರು ತೆಗೆದ ಕಾರಣ ಸಹೋದರಿಯರು ಮತ್ತೆ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದರು. ಇದೀಗ ಈ ಕಾನೂನು ಹೋರಾಟದಲ್ಲಿಯೂ ಸಾವಕ್ಕ ಮತ್ತು ಜಕ್ಕವ್ವ ಸಹೋದರಿಯರಿಗೆ ಜಯವಾಗಿದೆ. ಸುಪ್ರೀಂಕೋರ್ಟ್ ಆದೇಶದಿಂದ ಸಂತಸಗೊಂಡಿರುವ ಇವರು, 135 ವರ್ಷಗಳ ನಂತರ ನಮ್ಮ ಆಸ್ತಿ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Thu, 11 December 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ