AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ ಸಮಸ್ಯೆ: ಎಂ.ಡಿ. ತಲೆದಂಡವಾಯ್ತು, ಇನ್ನಾದರೂ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಕಾಮಗಾರಿ ಸರಿ ದಾರಿಗೆ ಬರುತ್ತದಾ!?

ಹು-ಧಾ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳ ನಡುವೆ ಶೀತಲ ಸಮರ ನಡೆದಿತ್ತು.. ಖುದ್ದು ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ಸ್ಮಾರ್ಟ್ ಸಿಟಿ ಎಂ. ಡಿ. ಗೆ ಪತ್ರ ಬರೆದು ವಿವರ ಕೋರಿದ್ರು. ಯಾವುದಕ್ಕೂ ಎಂ.ಡಿ. ಉತ್ತರ ಕೊಡಲು ಮುಂದಾಗಲಿಲ್ಲ 

ಸ್ಮಾರ್ಟ್​ ಸಮಸ್ಯೆ: ಎಂ.ಡಿ. ತಲೆದಂಡವಾಯ್ತು, ಇನ್ನಾದರೂ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಕಾಮಗಾರಿ ಸರಿ ದಾರಿಗೆ ಬರುತ್ತದಾ!?
ಎಂ.ಡಿ. ತಲೆದಂಡವಾಯ್ತು, ಇನ್ನಾದರೂ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಕಾಮಗಾರಿ ಸರಿ ದಾರಿಗೆ ಬರುತ್ತದಾ!?
TV9 Web
| Edited By: |

Updated on: Dec 13, 2022 | 7:23 PM

Share

ರಾಜ್ಯ ಸರಕಾರಕ್ಕೆ ಕೇಂದ್ರ ಸರ್ಕಾರದಿಂದ ಸ್ಮಾರ್ಟ್ ಸಿಟಿ (Smart city) ಕಾಮಗಾರಿಗೆ ಸಾವಿರಾರು ಕೋಟಿ ಅನುದಾನ ಹೊಳೆಯಾಗಿ ಹರಿಯುತ್ತಿದೆ. ಆದರೆ ಅನುದಾನದ ಸದ್ಬಳಕೆ ಮಾತ್ರ ನಿರೀಕ್ಷೆಯಂತೆ ಆಗ್ತಿಲ್ಲ. ಯದ್ವಾತದ್ವಾ ದುಂದು ವೆಚ್ಚ ಮಾಡಿ ಹಣ ಹೇಗೆಲ್ಲಾ ದುರ್ಬಳಕೆ ಆಗ್ತಿದೆ ಗೊತ್ತಾ? ಹುಬ್ಬಳ್ಳಿ (Hubballi) ಧಾರವಾಡ (Dharwad) ಮಹಾನಗರದಲ್ಲಿ ಸ್ಮಾರ್ಟ್ ಸಿಟಿ (Hubballi Dharwad Smart City) ಕಾಮಗಾರಿ ನಡೆಯುತ್ತಿದೆ.. ಹೆಚ್ಚು ಕಡಿಮೆ ಒಂದೂವರೆ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಅವಳಿ ನಗರದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಯಾವುದೂ ನೆಟ್ಟಗೆ ಆಗಲಿಲ್ಲ.. ಯಾವುದಕ್ಕೂ ಸರಿಯಾದ ಲೆಕ್ಕಾಚಾರ ಇಲ್ಲ ಅಂತ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳ ನಡುವೆ ಶೀತಲ ಸಮರ ನಡೆದಿತ್ತು.. ಖುದ್ದು ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ಸ್ಮಾರ್ಟ್ ಸಿಟಿ ಎಂ. ಡಿ. ಗೆ ಪತ್ರ ಬರೆದು ವಿವರ ಕೋರಿದ್ರು. ಯಾವುದಕ್ಕೂ ಎಂ.ಡಿ. ಉತ್ತರ ಕೊಡಲು ಮುಂದಾಗಲಿಲ್ಲ.. ಹೀಗಾಗಿ ಸಮರ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಸ್ಮಾರ್ಟ್ ಸಿಟಿ ಎಂ.ಡಿ. ಶಕೀಲ್ ಅಹ್ಮದ್ ತಲೆದಂಡ (Transfer) ಪಡೆದಿದೆ ಸರಕಾರ.. ಅವರ ಜಾಗಕ್ಕೆ ಹೊಸ ಎಂ.ಡಿ. ಐಎಎಸ್ ಅಧಿಕಾರಿ ಪ್ರಿಯಾಂಕರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರ..

ಹುಬ್ಬಲ್ಲಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ ನೂತನ ವ್ಯವಸ್ಥಾಪಕ:

ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಪ್ರಿಯಾಂಕ ಎಂ. ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿದ್ದ ಶಕೀಲ್ ಅಹ್ಮದ್‌ರನ್ನು ನಗರಾಭಿವೃದ್ಧಿ ಇಲಾಖೆಗೆ ವರ್ಗಾಯಿಸಲಾಗಿದೆ. ಪ್ರಿಯಾಂಕಾ ಅವರು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು. ಶಕೀಲ್ ಅಹ್ಮದ್ ಅವರ ಕಾರ್ಯನಿರ್ವಹಣೆ ಬಗ್ಗೆ ಜನಪ್ರತಿನಿಧಿಗಳಿಂದ ಸಾಕಷ್ಟು ಆಕ್ಷೇಪಣೆಗಳು ಕೇಳಿ ಬಂದಿದ್ದವು.

ಇದನ್ನೂ ಓದಿ:

ಸರಕಾರದ ಉದಾಸೀನದಿಂದ ದಾವಣಗೆರೆ ಹೈಟೆಕ್​ ಮಂಡಕ್ಕಿ ಭಟ್ಟಿ ಸ್ಮಾರ್ಟ್ ಯೋಜನೆ ಇನ್ನೂ ಟೇಕಾಫ್ ಆಗುತ್ತಿಲ್ಲ: ಸಾವಿರಾರು ಕುಟುಂಬಗಳ ಪರದಾಟ

ಹು-ಧಾ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರು ಇತ್ತೀಚೆಗೆ ಹು-ಧಾ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವಾರ್ಷಿಕ ಸಭೆಯಲ್ಲಿ ಲೆಕ್ಕ ಪರಿಶೋಧನೆಯ ವರದಿಯ ಬಗ್ಗೆ ಬಹಿರಂಗವಾಗಿ ಸಂಶಯ ವ್ಯಕ್ತಪಡಿಸಿದ್ದರು. ಪೂರ್ಣಗೊಂಡಿರುವ ಯಾವೊಂದು ಕಾಮಗಾರಿಗಳನ್ನು ಪಾಲಿಕೆಗೆ ಹಸ್ತಾಂತರಿಸದಿರುವುದು, ಕಳಪೆ ಕಾಮಗಾರಿ, ಇತ್ಯಾದಿ ಲೋಪದೋಷಗಳನ್ನು ಅವರು ಪಟ್ಟಿ ಮಾಡಿದ್ದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಹ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅವಳಿ ನಗರಕ್ಕೆ ಕೇಂದ್ರ ಸರ್ಕಾರ ಅಷ್ಟೊಂದು ಅನುದಾನ ನೀಡುತ್ತಿದ್ರು ಪ್ರಯೋಜನ ಮಾತ್ರ ಶೂನ್ಯ ವಾಗಿತ್ತು ಎನ್ನುತ್ತಾರೆ ಬಸವರಾಜ್ ತೇರದಾಳ, ಎಎಪಿ ನಾಯಕ.

ತೊಳನಕೆರೆ ಮತ್ತು ಇಂದಿರಾ ಗ್ಲಾಸ್ ಹೌಸ್ ನವೀಕರಣ ಮತ್ತು ಹೆಗ್ಗೆರಿಯ ತರಕಾರಿ ಮಾರುಕಟ್ಟೆ ಬಿಟ್ರೆ ಬೇರೆ ಯಾವ ಕಾಮಗಾರಿ ಕೂಡ ಸಂಪೂರ್ಣವಾಗಿಲ್ಲ. ಮುಗಿದಿರುವ ಕಾಮಗಾರಿಗೆ ಬಳಕೆಯಾದ ಅನುದಾನ ಬಗ್ಗೆ ಅನುಮಾನ ಇದ್ದು ಸಾಕಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ಎಎಪಿ ಪಾರ್ಟಿ ಲೋಕಾಯುಕ್ತರಿಗೆ ದೂರು ನೀಡಿದೆ. ಇನ್ನು ಎಂ.ಡಿ ತಲೆ ದಂಡದಿಂದ ಇನ್ನಾದರೂ ಸ್ಮಾರ್ಟ್ ಸಿಟಿ ಕಾಮಗಾರಿ ಸರಿ ದಾರಿಗೆ ಬರುವುದೋ ಅಂತ ಕಾಡು ನೋಡಬೇಕಾಗಿದೆ.

ವರದಿ: ರಹಮತ್ ಕಂಚಗಾರ್ ಟಿವಿ9 ಹುಬ್ಬಳ್ಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!