AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ

ಸೋಮವಾರದಿಂದ (ಜುಲೈ 11) ಉದಯಪುರ ಸಿಟಿ ಹಾಗೂ ಗುರುವಾರದಿಂದ (ಜುಲೈ 14) ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ಉದಯಪುರ ಸಿಟಿ - ಮೈಸೂರು - ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ವಾಯವ್ಯ ರೈಲ್ವೆ ವಲಯವು ಮತ್ತೆ ಆರಂಭಿಸಲಿದೆ. ಈ ರೈಲುಗಳು ಕೆಳಗೆ ತಿಳಿಸಿದ ವೇಳಾಪಟ್ಟಿಯೊಂದಿಗೆ ಸಂಚರಿಸುತ್ತವೆ

ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ
ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 09, 2022 | 7:48 PM

ಬರುವ ಸೋಮವಾರದಿಂದ (ಜುಲೈ 11) ಉದಯಪುರ ಸಿಟಿ ಹಾಗೂ ಗುರುವಾರದಿಂದ (ಜುಲೈ 14) ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ಉದಯಪುರ ಸಿಟಿ – ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 19667/19668) (Humsafar Weekly Express) ಸೇವೆಯನ್ನು ವಾಯವ್ಯ ರೈಲ್ವೆ ವಲಯವು ಮತ್ತೆ ಆರಂಭಿಸಲಿದೆ. ಈ ರೈಲುಗಳು ಕೆಳಗೆ ತಿಳಿಸಿದ ನಿಲುಗಡೆಗಳು ಹಾಗೂ ವೇಳಾಪಟ್ಟಿಯೊಂದಿಗೆ ಸಂಚರಿಸುತ್ತವೆ (South West Railway Hubli Division).

ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಹಾಗೂ ರೈಲುಗಳಲ್ಲಿ ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

1. ಉದಯಪುರ ಸಿಟಿ – ಮೈಸೂರು ಹಮ್ ಸಫರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (19667) ಜುಲೈ 11 ರಿಂದ ಪ್ರತಿ ಸೋಮವಾರದಂದು ರಾತ್ರಿ 09:15 ಕ್ಕೆ ಉದಯಪುರ ಸಿಟಿ ನಿಲ್ದಾಣದಿಂದ ಹೊರಟು, ಪ್ರತಿ ಬುಧವಾರದಂದು ಸಂಜೆ 04.35 ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

2. ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (19668) ಜುಲೈ 14 ರಿಂದ ಪ್ರತಿ ಗುರುವಾರರಂದು ಬೆಳಿಗ್ಗೆ 10:00 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು, ಪ್ರತಿ ಶನಿವಾರದಂದು ನಸುಕಿನಜಾವ 03:35 ಕ್ಕೆ ಉದಯಪುರ ಸಿಟಿ ನಿಲ್ದಾಣವನ್ನು ತಲುಪಲಿದೆ.

ಈ ರೈಲು (19667) ಮಾರ್ಗ ಮಧ್ಯದಲ್ಲಿ ಚಿತ್ತೌಡಗಢ (11:05/11:15 PM), ಮಂದಸೌರ್ (01:10/01:12 AM), ರತ್ಲಾಮ್ (03:10/03:20 AM), ವಡೋದರಾ (07:35/07:45 AM), ಸೂರತ್ (09:37/09:42 AM), ವಸಯಿ ರೋಡ (12:25/12:30 PM), ಪುಣೆ (04:35/04:40 PM), ಮೀರಜ್ (11:40/11:45 PM), ಬೆಳಗಾವಿ (01:58/02:00 AM), ಎಸ್.ಎಸ್.ಎಸ್ ಹುಬ್ಬಳ್ಳಿ (04:55/05:05 AM), ದಾವಣಗೆರೆ (07:28/07:30 AM), ಕೆ.ಎಸ್.ಆರ್ ಬೆಂಗಳೂರು (01:30/01:35 PM) ಮತ್ತು ಮಂಡ್ಯ (03:00/03:02 PM) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಹಿಂದಿರುಗುವ ದಿಕ್ಕಿನಲ್ಲಿ, ಈ ರೈಲು (19668) ಮಾರ್ಗ ಮಧ್ಯದಲ್ಲಿ ಮಂಡ್ಯ (10:34/10:35 AM), ಕೆ.ಎಸ್.ಆರ್ ಬೆಂಗಳೂರು (12:10/12:20 PM), ದಾವಣಗೆರೆ (04:40/04:42 PM), ಎಸ್.ಎಸ್.ಎಸ್ ಹುಬ್ಬಳ್ಳಿ (08:00/08:10 PM), ಬೆಳಗಾವಿ (10:50/10:52 PM), ಮೀರಜ್ (02:30/02:35 AM), ಪುಣೆ (08:25/08:30 AM), ವಸಯಿ ರೋಡ (12:35/12:45 PM), ಸೂರತ್ (03:22/03:27 PM), ವಡೋದರಾ (05:05/05:15 PM), ರತ್ಲಾಮ್ (08:45/08:55 PM), ಮಂದಸೌರ್ (10:25/10:27 PM) ಮತ್ತು ಚಿತ್ತೌಡಗಢ (01:10/01:20 AM) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಈ ಎರಡು ರೈಲುಗಳು, ಹದಿನಾರು- 3ನೇ ದರ್ಜೆಯ ಹವಾ ನಿಯಂತ್ರಿತ ಬೋಗಿಗಳು, ಒಂದು- ದ್ವಿತೀಯ ದರ್ಜೆಯ ಸ್ಲೀಪರ್ ಬೋಗಿ, ಒಂದು- ಹವಾ ನಿಯಂತ್ರಿತ ಅಡುಗೆ ಬೋಗಿ (ಪ್ಯಾಂಟ್ರಿ ಕಾರ್) ಹಾಗೂ ಎರಡು-ಸಾಮಾನ್ಯ ದ್ವಿತೀಯ ದರ್ಜೆಯ ಲಗೇಜ್ ಕಮ್ ಬ್ರೇಕ್-ವ್ಯಾನ್/ ಜನರೇಟರ್ ಗಳು ಸೇರಿ ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈಋತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ