AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ

ಸೋಮವಾರದಿಂದ (ಜುಲೈ 11) ಉದಯಪುರ ಸಿಟಿ ಹಾಗೂ ಗುರುವಾರದಿಂದ (ಜುಲೈ 14) ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ಉದಯಪುರ ಸಿಟಿ - ಮೈಸೂರು - ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ವಾಯವ್ಯ ರೈಲ್ವೆ ವಲಯವು ಮತ್ತೆ ಆರಂಭಿಸಲಿದೆ. ಈ ರೈಲುಗಳು ಕೆಳಗೆ ತಿಳಿಸಿದ ವೇಳಾಪಟ್ಟಿಯೊಂದಿಗೆ ಸಂಚರಿಸುತ್ತವೆ

ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ
ಮುಂದಿನ ವಾರದಿಂದ ಮೈಸೂರು- ಉದಯಪುರ ನಡುವೆ ಹಮ್ ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಮತ್ತೆ ಆರಂಭ
TV9 Web
| Edited By: |

Updated on: Jul 09, 2022 | 7:48 PM

Share

ಬರುವ ಸೋಮವಾರದಿಂದ (ಜುಲೈ 11) ಉದಯಪುರ ಸಿಟಿ ಹಾಗೂ ಗುರುವಾರದಿಂದ (ಜುಲೈ 14) ಮೈಸೂರು ನಿಲ್ದಾಣದಿಂದ ಜಾರಿಗೆ ಬರುವಂತೆ ಉದಯಪುರ ಸಿಟಿ – ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 19667/19668) (Humsafar Weekly Express) ಸೇವೆಯನ್ನು ವಾಯವ್ಯ ರೈಲ್ವೆ ವಲಯವು ಮತ್ತೆ ಆರಂಭಿಸಲಿದೆ. ಈ ರೈಲುಗಳು ಕೆಳಗೆ ತಿಳಿಸಿದ ನಿಲುಗಡೆಗಳು ಹಾಗೂ ವೇಳಾಪಟ್ಟಿಯೊಂದಿಗೆ ಸಂಚರಿಸುತ್ತವೆ (South West Railway Hubli Division).

ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಹಾಗೂ ರೈಲುಗಳಲ್ಲಿ ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

1. ಉದಯಪುರ ಸಿಟಿ – ಮೈಸೂರು ಹಮ್ ಸಫರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (19667) ಜುಲೈ 11 ರಿಂದ ಪ್ರತಿ ಸೋಮವಾರದಂದು ರಾತ್ರಿ 09:15 ಕ್ಕೆ ಉದಯಪುರ ಸಿಟಿ ನಿಲ್ದಾಣದಿಂದ ಹೊರಟು, ಪ್ರತಿ ಬುಧವಾರದಂದು ಸಂಜೆ 04.35 ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

2. ಮೈಸೂರು – ಉದಯಪುರ ಸಿಟಿ ಹಮ್ ಸಫರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (19668) ಜುಲೈ 14 ರಿಂದ ಪ್ರತಿ ಗುರುವಾರರಂದು ಬೆಳಿಗ್ಗೆ 10:00 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು, ಪ್ರತಿ ಶನಿವಾರದಂದು ನಸುಕಿನಜಾವ 03:35 ಕ್ಕೆ ಉದಯಪುರ ಸಿಟಿ ನಿಲ್ದಾಣವನ್ನು ತಲುಪಲಿದೆ.

ಈ ರೈಲು (19667) ಮಾರ್ಗ ಮಧ್ಯದಲ್ಲಿ ಚಿತ್ತೌಡಗಢ (11:05/11:15 PM), ಮಂದಸೌರ್ (01:10/01:12 AM), ರತ್ಲಾಮ್ (03:10/03:20 AM), ವಡೋದರಾ (07:35/07:45 AM), ಸೂರತ್ (09:37/09:42 AM), ವಸಯಿ ರೋಡ (12:25/12:30 PM), ಪುಣೆ (04:35/04:40 PM), ಮೀರಜ್ (11:40/11:45 PM), ಬೆಳಗಾವಿ (01:58/02:00 AM), ಎಸ್.ಎಸ್.ಎಸ್ ಹುಬ್ಬಳ್ಳಿ (04:55/05:05 AM), ದಾವಣಗೆರೆ (07:28/07:30 AM), ಕೆ.ಎಸ್.ಆರ್ ಬೆಂಗಳೂರು (01:30/01:35 PM) ಮತ್ತು ಮಂಡ್ಯ (03:00/03:02 PM) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಹಿಂದಿರುಗುವ ದಿಕ್ಕಿನಲ್ಲಿ, ಈ ರೈಲು (19668) ಮಾರ್ಗ ಮಧ್ಯದಲ್ಲಿ ಮಂಡ್ಯ (10:34/10:35 AM), ಕೆ.ಎಸ್.ಆರ್ ಬೆಂಗಳೂರು (12:10/12:20 PM), ದಾವಣಗೆರೆ (04:40/04:42 PM), ಎಸ್.ಎಸ್.ಎಸ್ ಹುಬ್ಬಳ್ಳಿ (08:00/08:10 PM), ಬೆಳಗಾವಿ (10:50/10:52 PM), ಮೀರಜ್ (02:30/02:35 AM), ಪುಣೆ (08:25/08:30 AM), ವಸಯಿ ರೋಡ (12:35/12:45 PM), ಸೂರತ್ (03:22/03:27 PM), ವಡೋದರಾ (05:05/05:15 PM), ರತ್ಲಾಮ್ (08:45/08:55 PM), ಮಂದಸೌರ್ (10:25/10:27 PM) ಮತ್ತು ಚಿತ್ತೌಡಗಢ (01:10/01:20 AM) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಈ ಎರಡು ರೈಲುಗಳು, ಹದಿನಾರು- 3ನೇ ದರ್ಜೆಯ ಹವಾ ನಿಯಂತ್ರಿತ ಬೋಗಿಗಳು, ಒಂದು- ದ್ವಿತೀಯ ದರ್ಜೆಯ ಸ್ಲೀಪರ್ ಬೋಗಿ, ಒಂದು- ಹವಾ ನಿಯಂತ್ರಿತ ಅಡುಗೆ ಬೋಗಿ (ಪ್ಯಾಂಟ್ರಿ ಕಾರ್) ಹಾಗೂ ಎರಡು-ಸಾಮಾನ್ಯ ದ್ವಿತೀಯ ದರ್ಜೆಯ ಲಗೇಜ್ ಕಮ್ ಬ್ರೇಕ್-ವ್ಯಾನ್/ ಜನರೇಟರ್ ಗಳು ಸೇರಿ ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈಋತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!