AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎಸ್​ಬಿಎಂ ಬ್ಯಾಂಕ್​ಗೆ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್​ಗೆ ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಸಹಿತ ದಂಡ ವಿಧಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ ಮತ್ತು ಗಣಿ ಇಲಾಖೆಗೆ ಸಂಬಂಧಿಸಿದ ಹಣವನ್ನು ನಕಲಿ ಖಾತೆಗೆ ಜಮಾ ಮಾಡುವ ಮೂಲಕ ವಂಚನೆ ಎಸಗಲಾಗಿತ್ತು.

ಧಾರವಾಡ: ಎಸ್​ಬಿಎಂ ಬ್ಯಾಂಕ್​ಗೆ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ
ಅಂದಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿಗೆ ವಂಚಿಸಿದ ಪ್ರಕರಣ ಸಂಬಂಧ ಇಬ್ಬರಿಗೆ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆImage Credit source: Bhagya Prakash K/thehindubusinessline
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on: Oct 09, 2023 | 2:47 PM

Share

ಧಾರವಾಡ, ಅ.9: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಸದ್ಯ ಈ ಬ್ಯಾಂಕ್ ಎಸ್​ಬಿಐಗೆ ವಿಲೀನವಾಗಿದೆ) ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1.20 ಲಕ್ಷ ರೂ‌ಪಾಯಿ ದಂಡ ವಿಧಿಸಿ ಧಾರವಾಡದ (Dharwad) ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ ಮತ್ತು ಗಣಿ ಇಲಾಖೆಗೆ ಸಂಬಂಧಿಸಿದ ಹಣವನ್ನು ನಕಲಿ ಖಾತೆಗೆ ಜಮಾ ಮಾಡುವ ಮೂಲಕ ವಂಚನೆ ಎಸಗಲಾಗಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅಸಿಸ್ಟೆಂಟ್ ಮ್ಯಾನೇಜರ್ ಗುರುರಾಜ ರಾವ್ ಮತ್ತು ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ರಾಮಕೃಷ್ಣ ಎಕ್ಸ್‌ಪೋರ್ಟ್ಸ್ ಮಾಲೀಕ ಪ್ರವೀಣ ಕಾಟ್ವಾ ಶಿಕ್ಷೆಗೊಳಗಾದ ಅಪರಾಧಿಗಳು. ಬ್ಯಾಂಕ್‌ಗೆ ವಂಚಿಸಿ ಪ್ರವೀಣಗೆ ಗುರುರಾಜ ಅನುಕೂಲ ಮಾಡಿಕೊಟ್ಟಿದ್ದರು.

ಇದನ್ನೂ ಓದಿ: ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಹೆಸ್ಕಾಂನ ವಿದ್ಯುತ್ ಬಿಲ್ ಮತ್ತು ಗಣಿ ಇಲಾಖೆಯ ರಾಜಧನವನ್ನು ಖಾತೆಗೆ ಜಮಾ ಮಾಡಲು ಡಿಡಿ ಮತ್ತು ಚೆಕ್ ನೀಡಲಾಗಿತ್ತು. ಆದರೆ ಗುರುರಾಜ ಮತ್ತು ಪ್ರವೀಣ ಸೇರಿಕೊಂಡು ಎರಡೂ ಇಲಾಖೆಗೆ ಸೇರಿದ ಒಟ್ಟು 2.70 ಕೋಟಿ ರೂಪಾಯಿಯನ್ನು ನಕಲಿ ಖಾತೆಗೆ ವರ್ಗಾಯಿಸಿದ್ದರು.

ಇತ್ತ, ಖಾತೆಗೆ ಹಣ ಜಮಾ ಆಗದೇ ಇರುವ ಬಗ್ಗೆ ಹೆಸ್ಕಾಂ ಅಧಿಕಾರಿಗಳಿಗೆ ಸಂಶಯ ಮೂಡಿದೆ. ಅದರಂತೆ ಹೆಸ್ಕಾಂ ವಿಚಕ್ಷಣ ದಳವು ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ನಡೆಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More