AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ಕಾಯ್ದೆ ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್, ಹಿಂದೂ ದೇಗುಲಗಳನ್ನು ಸ್ವತಂತ್ರ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ

ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಆಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮತಾಂತರ ಕಾಯ್ದೆ ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್, ಹಿಂದೂ ದೇಗುಲಗಳನ್ನು ಸ್ವತಂತ್ರ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Dec 29, 2021 | 6:08 PM

Share

ಹುಬ್ಬಳ್ಳಿ: ಮತಾಂತರ ಕಾಯ್ದೆ ಜಾರಿಗೆ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ ಮಾಡಿಸುತ್ತೇವೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆಗೆ ಅವಕಾಶ ಮಾಡಿಕೊಡ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಏನೂ ಇರಲ್ಲ. ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ ಎಂದು ಬಿಜೆಪಿ ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ.

ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸ್ತೇವೆ. ಮಂದಿರಗಳ ವಿಚಾರ ಬಂದಾಗ ಸರ್ಕಾರ 1 ಕಾನೂನು ತಂದಿದೆ. ಇದು ನಮ್ಮ ಬದ್ಧತೆ, ತಕ್ಷಣ ಸ್ಪಂದಿಸುವುದು ಸರ್ಕಾರದ ಬದ್ಧತೆ. ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಆಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ಗುರಿ ಮೀರಿ ಸಾಧನೆ ಮಾಡುತ್ತೇವೆ. ನಮ್ಮ ಹೊಣೆಗಾರಿಕೆಯನ್ನು ಅರಿತು ಕೆಲಸವನ್ನ ಮಾಡುತ್ತೇವೆ. ಮುಂದಿನ ಏಪ್ರಿಲ್​ ತಿಂಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತದೆ. ಮೋದಿಯವರು ನನಗೆ ಕೆಲ ಮಾರ್ಗದರ್ಶನ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲ ಕಾರ್ಯಕ್ರಮ ಮಾಡಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್​ ಪಾದಯಾತ್ರೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸರ್ಕಾರದಲ್ಲಿ ಯಾಕೆ ಯೋಜನೆ ಜಾರಿ ಮಾಡಲಿಲ್ಲ? ಒಂದೂವರೆ ವರ್ಷ ಮೈತ್ರಿ ಸರ್ಕಾರದಲ್ಲಿ ಪಾಲುದಾರರಾಗಿದ್ರಿ. ಆಗ ಯೋಜನೆ ಬಗ್ಗೆ ಯಾಕೆ ಯೋಚನೆಯನ್ನ ಮಾಡಲಿಲ್ಲ. DPR ಮಾಡಲು ಐದು ವರ್ಷ ಸಮಯ ತೆಗೆದುಕೊಂಡರು. ಇದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.

ಇದನ್ನೂ ಓದಿ: ಎಲ್ಲದಕ್ಕೂ ಬಂದ್‌ ಅಂತಿಮ ನಿರ್ಧಾರವಲ್ಲ; ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಬಸವರಾಜ ಬೊಮ್ಮಾಯಿ ಮನವಿ

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮಂಡಿ‌ ನೋವು: ಪ್ರಧಾನಿಯನ್ನೇ ಬದಲಾಯಿಸದ ನಾವು ಸಿಎಂ ಬದಲಾಯಿಸ್ತೇವಾ? -ಸಂಸದ ಪ್ರತಾಪ್‌

Published On - 6:02 pm, Wed, 29 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?