AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ: ಎಸ್​.ಆರ್​.ಹಿರೇಮಠ್

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಸಹ ಪ್ರಾಂತೀಯ ಪಕ್ಷ ಸ್ಥಾಪಿಸಿದ್ದರು. ಆ ಮಹಾ ಕಳ್ಳ ಶ್ರೀರಾಮುಲು ಸಹ ಬಿಎಸ್‌ಆರ್ ಪಕ್ಷ ಮಾಡಿದ್ದರು. ಸುಗಲಮ್ಮ ದೇವಸ್ಥಾನಕ್ಕೆ ಧಕ್ಕೆ ಮಾಡಿ ದುರಾಸೆ ಮಾಡಿದ್ದರು. ಅದಾದ ಬಳಿಕವೆ ರೆಡ್ಡಿ ಕಪಾಳಕ್ಕೆ ಹೊಡಿಸಿಕೊಂಡು ಅರೆಸ್ಟ್ ಆಗಿ‌ ಹೋದ ಎಂದು ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ: ಎಸ್​.ಆರ್​.ಹಿರೇಮಠ್
ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್
TV9 Web
| Edited By: |

Updated on: Feb 05, 2023 | 3:25 PM

Share

ಧಾರವಾಡ: ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ. ಬಿ ಎಸ್​ ಯಡಿಯೂರಪ್ಪ (BS Yadiyurappa) ಸಹ ಪ್ರಾಂತೀಯ ಪಕ್ಷ ಸ್ಥಾಪಿಸಿದ್ದರು. ಆ ಮಹಾ ಕಳ್ಳ ಶ್ರೀರಾಮುಲು (Sriramulu) ಸಹ ಬಿಎಸ್‌ಆರ್ ಪಕ್ಷ ಮಾಡಿದ್ದರು. ಸುಗಲಮ್ಮ ದೇವಸ್ಥಾನಕ್ಕೆ ಧಕ್ಕೆ ಮಾಡಿ ದುರಾಸೆ ಮಾಡಿದ್ದರು. ಅದಾದ ಬಳಿಕವೆ ರೆಡ್ಡಿ ಕಪಾಳಕ್ಕೆ ಹೊಡಿಸಿಕೊಂಡು ಅರೆಸ್ಟ್ ಆಗಿ‌ ಹೋದ. ಇವರು ಏನೇ ಪ್ರಯತ್ನ ಮಾಡಿದರೂ ಇಬ್ಬರೂ ಬೀಳುತ್ತಾರೆ. ಸಾಮ್ರಾಜ್ಯಗಳು, ಸರ್ವಾಧಿಕಾರಿಗಳು ಕೆಳಗೆ ಇಳಿದರೆ ಅದು ಅವರಲ್ಲಿನ ವೈಫಲ್ಯದಿಂದ ಎಂದು ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್ (SR Hiremath) ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತೆ ಅನ್ನೋದು ಗೊತ್ತಿಲ್ಲ. ನಾನು ಎನ್ನುವ ಅಹಂಕಾರ ನಡೆಯುವುದಿಲ್ಲ. ಬಿ.ಶ್ರೀರಾಮುಲು ಕೂಡ ಸ್ವಂತ ಪಕ್ಷ ಕಟ್ಟಿದ್ದರು. ಆಗ ನಾವು ಶಿವಮೊಗ್ಗದಿಂದ ಬಳ್ಳಾರಿವರೆಗೆ ಜನಜಾಗೃತಿ ಮಾಡಿದ್ದೆವು. ಆಗ ಪ್ರತಿ ತಿಂಗಳು ಯಡಿಯೂರಪ್ಪಗೆ ಕಾಣಿಕೆ ಹೋಗುತ್ತಿತ್ತು. ಇದನನ್ನೇನು ರಾಮುಲು ಬೆವರು ಸುರಿಸಿ ತಂದಿದ್ದಾ? ಈ ಗಣಿ ಕಳ್ಳ ಅಕ್ರಮ ಹಣವನ್ನು ಕೊಟ್ಟಿದ್ದ. ಇಂಥವನು ಉದ್ದಟತನದಿಂದ ಬಿಆರ್‌ಎಸ್ ಪಕ್ಷ ಮಾಡಿದ್ದ. ಅವತ್ತು ರಾಮುಲು ಜೊತೆಗೆ ಹೋಗಿದ್ದ ಸ್ವಾಮೀಜಿಗಳನ್ನೂ ನಾನು ಪ್ರಶ್ನಿಸಿದ್ದೆ. ಪ್ರಜಾಪ್ರಭುತ್ವದಲ್ಲಿ ಜನರೇ ಮಾಲೀಕರು ಎಂದರು.

ನಾವು ಪ್ರಶ್ನೆ ಮಾಡಬೇಕು, ರೆಡ್ಡಿಯನ್ನು ಮೂರು ಜಿಲ್ಲೆಗಳಿಂದ ಗಡಿಪಾರು ಮಾಡಿದೆ. ಸೋಮಶೇಖರ ರೆಡ್ಡಿ ವಿರುದ್ಧವಾಗಿಯೇ ಇವರು ನಿಲ್ಲುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ಸ್ಪರ್ಧಿಸುವ ಹಕ್ಕಿದೆ. ಆದರೆ ಆ ಹಕ್ಕಿಗೆ ಅವರ ಅರ್ಹತೆ, ಹಿನ್ನೆಲೆ ಗಮನಿಸಬೇಕು. ಅವರು ಇಡಿಗಂಟು ಕಳೆದುಕೊಂಡರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಪ್ರಚಾರಕ್ಕೆ ರೆಡ್ಡಿ ಪತ್ನಿ, ಮಗಳು ಬರುತ್ತಿದ್ದಾರೆ. ರೆಡ್ಡಿಗೆ ಕೈದಿ ನಂಬರ್ ಹಾಕಿದ ಫೋಟೊ ಬಂದಿತ್ತು. ಆಗ 2-3 ವಾರ ಮಗಳು ಶಾಲೆಗೆ ಹೋಗಿರಲಿಲ್ಲ. ಅಷ್ಟು ಅಪಮಾನ, ಅವಮಾನ ಆಗಿತ್ತು. ಇವರು ಈಗ ಹೇಗೆ ಜನರ ಮಧ್ಯೆ ಹೋಗುತ್ತಿದ್ದಾರೆ? ಗೆದ್ದ ಮೇಲೆ ಸಂವಿಧಾನದ ಚೌಕಟ್ಟಿನಲ್ಲಿ ಜನಹಿತ ಮಾಡಬೇಕು ಎಂದು ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್