AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ: ಎಸ್​.ಆರ್​.ಹಿರೇಮಠ್

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಸಹ ಪ್ರಾಂತೀಯ ಪಕ್ಷ ಸ್ಥಾಪಿಸಿದ್ದರು. ಆ ಮಹಾ ಕಳ್ಳ ಶ್ರೀರಾಮುಲು ಸಹ ಬಿಎಸ್‌ಆರ್ ಪಕ್ಷ ಮಾಡಿದ್ದರು. ಸುಗಲಮ್ಮ ದೇವಸ್ಥಾನಕ್ಕೆ ಧಕ್ಕೆ ಮಾಡಿ ದುರಾಸೆ ಮಾಡಿದ್ದರು. ಅದಾದ ಬಳಿಕವೆ ರೆಡ್ಡಿ ಕಪಾಳಕ್ಕೆ ಹೊಡಿಸಿಕೊಂಡು ಅರೆಸ್ಟ್ ಆಗಿ‌ ಹೋದ ಎಂದು ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ: ಎಸ್​.ಆರ್​.ಹಿರೇಮಠ್
ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್
TV9 Web
| Edited By: |

Updated on: Feb 05, 2023 | 3:25 PM

Share

ಧಾರವಾಡ: ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಬಿಜೆಪಿಯಲ್ಲಿಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ. ಬಿ ಎಸ್​ ಯಡಿಯೂರಪ್ಪ (BS Yadiyurappa) ಸಹ ಪ್ರಾಂತೀಯ ಪಕ್ಷ ಸ್ಥಾಪಿಸಿದ್ದರು. ಆ ಮಹಾ ಕಳ್ಳ ಶ್ರೀರಾಮುಲು (Sriramulu) ಸಹ ಬಿಎಸ್‌ಆರ್ ಪಕ್ಷ ಮಾಡಿದ್ದರು. ಸುಗಲಮ್ಮ ದೇವಸ್ಥಾನಕ್ಕೆ ಧಕ್ಕೆ ಮಾಡಿ ದುರಾಸೆ ಮಾಡಿದ್ದರು. ಅದಾದ ಬಳಿಕವೆ ರೆಡ್ಡಿ ಕಪಾಳಕ್ಕೆ ಹೊಡಿಸಿಕೊಂಡು ಅರೆಸ್ಟ್ ಆಗಿ‌ ಹೋದ. ಇವರು ಏನೇ ಪ್ರಯತ್ನ ಮಾಡಿದರೂ ಇಬ್ಬರೂ ಬೀಳುತ್ತಾರೆ. ಸಾಮ್ರಾಜ್ಯಗಳು, ಸರ್ವಾಧಿಕಾರಿಗಳು ಕೆಳಗೆ ಇಳಿದರೆ ಅದು ಅವರಲ್ಲಿನ ವೈಫಲ್ಯದಿಂದ ಎಂದು ಸಾಮಾಜಿಕ ಹೋರಾಟಗಾರ ಎಸ್​.ಆರ್​.ಹಿರೇಮಠ್ (SR Hiremath) ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತೆ ಅನ್ನೋದು ಗೊತ್ತಿಲ್ಲ. ನಾನು ಎನ್ನುವ ಅಹಂಕಾರ ನಡೆಯುವುದಿಲ್ಲ. ಬಿ.ಶ್ರೀರಾಮುಲು ಕೂಡ ಸ್ವಂತ ಪಕ್ಷ ಕಟ್ಟಿದ್ದರು. ಆಗ ನಾವು ಶಿವಮೊಗ್ಗದಿಂದ ಬಳ್ಳಾರಿವರೆಗೆ ಜನಜಾಗೃತಿ ಮಾಡಿದ್ದೆವು. ಆಗ ಪ್ರತಿ ತಿಂಗಳು ಯಡಿಯೂರಪ್ಪಗೆ ಕಾಣಿಕೆ ಹೋಗುತ್ತಿತ್ತು. ಇದನನ್ನೇನು ರಾಮುಲು ಬೆವರು ಸುರಿಸಿ ತಂದಿದ್ದಾ? ಈ ಗಣಿ ಕಳ್ಳ ಅಕ್ರಮ ಹಣವನ್ನು ಕೊಟ್ಟಿದ್ದ. ಇಂಥವನು ಉದ್ದಟತನದಿಂದ ಬಿಆರ್‌ಎಸ್ ಪಕ್ಷ ಮಾಡಿದ್ದ. ಅವತ್ತು ರಾಮುಲು ಜೊತೆಗೆ ಹೋಗಿದ್ದ ಸ್ವಾಮೀಜಿಗಳನ್ನೂ ನಾನು ಪ್ರಶ್ನಿಸಿದ್ದೆ. ಪ್ರಜಾಪ್ರಭುತ್ವದಲ್ಲಿ ಜನರೇ ಮಾಲೀಕರು ಎಂದರು.

ನಾವು ಪ್ರಶ್ನೆ ಮಾಡಬೇಕು, ರೆಡ್ಡಿಯನ್ನು ಮೂರು ಜಿಲ್ಲೆಗಳಿಂದ ಗಡಿಪಾರು ಮಾಡಿದೆ. ಸೋಮಶೇಖರ ರೆಡ್ಡಿ ವಿರುದ್ಧವಾಗಿಯೇ ಇವರು ನಿಲ್ಲುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ಸ್ಪರ್ಧಿಸುವ ಹಕ್ಕಿದೆ. ಆದರೆ ಆ ಹಕ್ಕಿಗೆ ಅವರ ಅರ್ಹತೆ, ಹಿನ್ನೆಲೆ ಗಮನಿಸಬೇಕು. ಅವರು ಇಡಿಗಂಟು ಕಳೆದುಕೊಂಡರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಪ್ರಚಾರಕ್ಕೆ ರೆಡ್ಡಿ ಪತ್ನಿ, ಮಗಳು ಬರುತ್ತಿದ್ದಾರೆ. ರೆಡ್ಡಿಗೆ ಕೈದಿ ನಂಬರ್ ಹಾಕಿದ ಫೋಟೊ ಬಂದಿತ್ತು. ಆಗ 2-3 ವಾರ ಮಗಳು ಶಾಲೆಗೆ ಹೋಗಿರಲಿಲ್ಲ. ಅಷ್ಟು ಅಪಮಾನ, ಅವಮಾನ ಆಗಿತ್ತು. ಇವರು ಈಗ ಹೇಗೆ ಜನರ ಮಧ್ಯೆ ಹೋಗುತ್ತಿದ್ದಾರೆ? ಗೆದ್ದ ಮೇಲೆ ಸಂವಿಧಾನದ ಚೌಕಟ್ಟಿನಲ್ಲಿ ಜನಹಿತ ಮಾಡಬೇಕು ಎಂದು ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?