ವ್ಯಾನಿಟಿ ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹುಬ್ಬಳ್ಳಿಯಲ್ಲಿ ಹಿಂದೂ ಮಹಿಳೆಯರಿಗೆ ತ್ರಿಶೂಲ ವಿತರಿಸಿ, ಆತ್ಮರಕ್ಷಣೆಗಾಗಿ ಬಳಸುವಂತೆ ಹೇಳಿದ್ದಾರೆ. ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, ಮುತಾಲಿಕ್ ಅವರು ಲವ್ ಜಿಹಾದ್ ವಿರುದ್ಧ ಎಚ್ಚರಿಸಿದ್ದಾರೆ. ಅಲ್ಲದೇ ನೇಹಾ ಹಿರೇಮಠರನ್ನು ಹತ್ಯೆ ಮಾಡಿದ ಆರೋಪಿಯನ್ನು ಗಲ್ಲಿಗೆ ಏರಿಸಿ ಎಂದು ಆಗ್ರಹಿಸಿದ್ದಾರೆ.

ವ್ಯಾನಿಟಿ ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು
ಪ್ರಮೋದ್ ಮುತಾಲಿಕ್
Edited By: ವಿವೇಕ ಬಿರಾದಾರ

Updated on: Apr 18, 2025 | 3:57 PM

ಹುಬ್ಬಳ್ಳಿ, ಏಪ್ರಿಲ್​ 18: ಮಹಿಳೆಯರು ತ್ರಿಶೂಲವನ್ನು (Trishula) ವ್ಯಾನಿಟಿ ಬ್ಯಾಗ್​ನಲ್ಲಿಟ್ಟುಕೊಳ್ಳಿ. ಯಾರಾದರು ಚುಡಾಯಿಸಿದರೆ ಅಥವಾ ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ. ಎಲ್ಲಿ ಒದಿಬೇಕು ಅಂತ ಗೊತ್ತಿದೆ ಅಲ್ವಾ, ಅಲ್ಲಿಗೆ ಒದ್ದುಬಿಡಿ ಎಂದು ಶ್ರೀರಾಮಸೇನೆ (Sri Ram Sena) ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿವಿಮಾತು ಹೇಳಿದರು.

ಹುಬ್ಬಳ್ಳಿಯ ಶಿವಕೃಷ್ಣ ಮಂದಿರದಲ್ಲಿ ಶ್ರೀರಾಮ ಸೇನೆವತಿಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಬಂದ ಪ್ರತಿಯೊಬ್ಬ ಹೆಣ್ಮಕ್ಕಳಿಗೂ ಶ್ರೀರಾಮಸೇನೆ ಕಾರ್ಯಕರ್ತರು ತ್ರಿಶೂಲ ಹಂಚಿದರು. ತ್ರಿಶೂಲಗಳನ್ನು ಪಡೆದ ಮಹಿಳೆಯರು ಅದನ್ನು ಪ್ರದರ್ಶನ ಮಾಡಿದರು.

ತ್ರಿಶೂಲ ದೀಕ್ಷೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಮೋದ್​ ಮುತಾಲಿಕ್​, ಆಯುಧ ಪೂಜೆ ದಿನ ಮನೆಯಲ್ಲಿ ತಲವಾರ ಪೂಜೆ ಮಾಡಬೇಕು. ಆದರೆ, ಇಂದು ಪುಸ್ತಕ ಪೆನ್ನು ಇಟ್ಟು ಪೂಜೆ ಮಾಡುತ್ತಿದ್ದೇವೆ. ದುರ್ಗಾಮಾತೆಯ ಕೈಯಲ್ಲಿ ಹತ್ತು ಶಸ್ತ್ರಗಳಿವೆ. ಈಶ್ವರನ ಕೈಯಲ್ಲಿ ತ್ರಿಶೂಲವಿದೆ. ಅದನ್ನೇ ಮಹಿಳೆಯರ ಕೈಗೆ ಕೊಡುತ್ತಿದ್ದೇವೆ. ಮುಂದಿನ ಆಯುಧ ಪೂಜೆ ದಿನ ಹರಿತವಾದ ತಲವಾರ ಇಟ್ಟು ಪೂಜೆ ಮಾಡಿ ಎಂದು ಹೇಳಿದರು.
ನಾವು ನೀಡುತ್ತಿರುವ ತ್ರಿಶೂಲ ಬಗ್ಗೆ ಯಾರು ಭಯ ಪಡಬೇಡಿ. ಹಿಡಿಕೆ ಬಿಟ್ಟು ಆರು ಇಂಚು ಉದ್ದ ಇದ್ದರೇ ಅದು ಆಯುಧವಾಗುತ್ತದೆ. ಆದರೆ, ನಾವು ನೀಡುತ್ತಿರುವುದು ಮೂರು ಇಂಚಿನ ತ್ರಿಶೂಲ. ಯಾರಾದರು ಕೇಳಿದರೆ, ಮೊದಲು ಅವರಿಗೆ ಚುಚ್ಚಿಬಿಡಿ. ಪೊಲೀಸರು ಬಂದೂಕಿಗೆ ಪೂಜೆ ಮಾಡುತ್ತಾರೆ. ಹೀಗಾಗಿ, ನಾವು ಯಾಕೆ ತ್ರಿಶೂಲ ಇಟ್ಟುಕೊಳ್ಳಲು ಭಯ ಪಡಬೇಕು ಎಂದರು.

ಇದನ್ನೂ ಓದಿ
ಮುತಾಲಿಕ್ ತರಾಟೆ ಬೆನ್ನಲ್ಲೇ ನೇಹಾ ಹಂತಕ ಫಯಾಜ್​ ಕಾಲೇಜಿನಿಂದಲೇ ಅಮಾನತು
ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ!
ನೇಹಾಳ ಹತ್ಯೆ ಕೋಪದಲ್ಲಿ ಮಾಡಿದ್ದಲ್ಲ! ಪೂರ್ವ ತಯಾರಿ ನಡೆಸಿದ್ದ ಫಯಾಜ್​
ನೇಹಾ ಕೊಲೆ ಪ್ರಕರಣ: ಹತ್ಯೆಗೆ ಕಾರಣ ಬಾಯಿಟ್ಟ ಫಯಾಜ್

ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು

ಇಂದಿಗೆ ಸಿರಿಯಾಗಿ ಒಂದು ವರ್ಷದ ಹಿಂದೆ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯಾಯಿತು. ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು. ಅಂದಾಗ ಮಾತ್ರ ನೇಹಾ ಹಿರೇಮಠ ಹತ್ಯೆಗೆ ನ್ಯಾಯ ಸಿಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರೇ ತಿಂಗಳಿನಲ್ಲಿ ನ್ಯಾಯ ಕೊಡಿಸ್ತೇನೆ ಅಂತ ಹೇಳಿದ್ದರು. ಆದರೆ, ನಿದ್ರಾಮಯ್ಯನವರೇ ಏನು ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಯಾಲಯ ಆತನಿಗೆ ಜಾಮೀನು ನೀಡಿದರೇ, ನಾವೇ ಅವನನ್ನು ಕಲ್ಲು ಹೊಡೆದು ಕೊಂದು ಹಾಕುತ್ತೇವೆ. ನೇಹಾ ಹಿರೇಮಠ ಪ್ರೀತಿ ಮಾಡಿರಬಹುದು. ಆದರೆ, ಮದುವೆ ಆಗಲ್ಲ ಅಂತ ಹೇಳಿದ್ದಕ್ಕೆ ಕೊಂದು ಬಿಡುವುದಾ? ಮೋಸ ಮಾಡಿ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮಾಡುತ್ತಿದ್ದಾರೆ. ಅಬ್ದಲ್ಲಾ, ಅಶೋಕ ಅಂತ ಹೇಳಿ ಪ್ರೀತಿ ಮಾಡುತ್ತಾನೆ. ಪ್ರೀತಿ ಮಾಡಿ ಬುರ್ಕಾ ಹಾಕಿಸಿ, ನಮಾಜ ಮಾಡಿಸಿ ಗೋ ಮಾಂಸ ತಿನಿಸುತ್ತಿದ್ದಾರೆ. ಈ ದೇಶವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ, ನೇಹಾ ತಂದೆ ಆರೋಪ

ಅವರಿಗೆ ಹಂದಿ ಕಂಡರೆ ಆಗಲ್ಲ

ಒಂಬತ್ತು ಲಕ್ಷ ಎಕರೆ ವಕ್ಪ್ ಬೋರ್ಡ್ ಅಧಿನದಲ್ಲಿದೆ. ಇದು ಐದು ಪಾಕಿಸ್ತಾನ, ಹತ್ತು ಬಾಂಗ್ಲಾದೇಶಕ್ಕೆ ಸಮಾನವಾಗಿದೆ. ಜನಸಂಖ್ಯೆ ಹೆಚ್ಚಿಸಲು‌ ನಾಲ್ಕೈದು ಮದುವೆ ಮಾಡಿಕೊಳ್ಳುತ್ತಾರೆ. ಹಮ್ ಪಾಂಚ್, ಹಮಾರ ಪಚ್ಚಿಸ್ ಅಂತಾರೆ. ಹೀಗಾಗಿ, ಅವರಿಗೆ ಹಂದಿ ಕಂಡರೆ ಆಗಲ್ಲ. ಹಿಂದೂ ದಂಪತಿಗಳು ಮೂರು, ನಾಲ್ಕು, ಡಜನ್​ಗಟ್ಟಲೆ ಮಕ್ಕಳಿಗೆ ಜನ್ಮ ನೀಡಿ. ಮೂರನೇ ಮಗುವಿನ ಶಿಕ್ಷಣ, ಆರೋಗ್ಯ ಜವಾಬ್ದಾರಿ ಶ್ರಿರಾಮಸೇನೆ ಹೊತ್ತುಕೊಳ್ಳುತ್ತೆ. ದೇಶ ಉಳಿಸಬೇಕಾಗಿದೆ. ನಿಮಗೆ ಸಾಕಲು ಸಾದ್ಯವಾಗದಿದ್ದರೆ ನಾವು ಸಾಕುತ್ತೇವೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Fri, 18 April 25

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us