ಲವ್ ಜಿಹಾದ್ ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆಗೆ ಕೊಲೆ ಬೆದರಿಕೆ, ಮುಖಂಡರ ಫೇಸ್ಬುಕ್ ಖಾತೆಗಳು ಬಂದ್

ಲವ್ ಜಿಹಾದ್ ತಡೆಗೆ ಶ್ರೀರಾಮಸೇನೆ ಹೆಲ್ಪ್ ಲೈನ್ ಆರಂಭಿಸಿದ್ದು ಬೆದರಿಕೆ ಕರೆಗಳು ಬರುತ್ತಿವೆ, ಅಲ್ಲದೆ ಶ್ರೀರಾಮಸೇನೆ ಮುಖಂಡರ ಫೇಸ್ ಬುಕ್ ಖಾತೆಗಳು ಕೂಡ ಬಂದ್ ಆಗಿವೆ. ಹೀಗಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

ಲವ್ ಜಿಹಾದ್ ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆಗೆ ಕೊಲೆ ಬೆದರಿಕೆ, ಮುಖಂಡರ ಫೇಸ್ಬುಕ್ ಖಾತೆಗಳು ಬಂದ್
Follow us
| Updated By: ಆಯೇಷಾ ಬಾನು

Updated on:Jul 06, 2024 | 12:59 PM

ಹುಬ್ಬಳ್ಳಿ, ಜುಲೈ.06: ಲವ್ ಜಿಹಾದ್ (Love Jihad) ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ (Sri Ram Sena) ಮೇಲೆ ಬಾಂಬ್ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ. ಶ್ರೀರಾಮಸೇನೆ ಹೆಲ್ಪ್ ಲೈನ್​ಗೆ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು (Threat Calls) ಬಂದಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.

ಲವ್ ಜಿಹಾದ್ ವಿರುದ್ದ ಸಮರ ಸಾರಿರುವ ಶ್ರೀರಾಮಸೇನೆ ಮೇ 29 ರಂದು ಹೆಲ್ಫ್ ಲೈನ್ ಆರಂಭಿಸಿತ್ತು. ಈ ಹೆಲ್ಫ್ ಲೈನ್​ಗೆ ಇದುವರೆಗೆ 1000ಕ್ಕೂ ಅಧಿಕ ಕಾಲ್ ಗಳು ಬಂದಿವೆ. ಇವುಗಳ ಪೈಕಿ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಕಿಡಿಗೇಡಿಗಳು ಇಂಟರ್ನೆಟ್ ಕಾಲ್ ಮೂಲಕ ಜೀವ ಬೆದರಿಕೆ ಹಾಕುತ್ತಿದ್ದಾರೆ. ಜೊತೆಗೆ ಶ್ರೀರಾಮಸೇನೆ ಸಂಘಟನೆ ಮುಖಂಡರ ಫೇಸ್ ಬುಕ್ ಅಕೌಂಟ್ ಅನ್ನು ಕೂಡ ಕ್ಲೋಸ್ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಫೇಸ್ ಬುಕ್ ಬಂದ್ ಆಗಿದೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು

ಸಂಘಟನೆ ರಾಜ್ಯಾಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳ ಫೇಸ್ ಬುಕ್ ಬಂದ್ ಆಗಿದೆ. ಸರ್ಕಾರ ಮಾಡಿದೆಯೋ ಅಥವಾ ಜಿಹಾದಿಗಳು ಮಾಡಿದ್ದಾರೊ ಗೊತ್ತಿಲ್ಲ. ಲವ್ ಜಿಹಾದ್ ವಿರುದ್ಧ ಅಭಿಯಾನದ ಹಿನ್ನೆಲೆಯಲ್ಲಿ ಈ ಷಡ್ಯಂತ್ರ ಮಾಡಲಾಗಿದೆ. ನಮ್ಮ ಜಾಗೃತಿ ಅಭಿಯಾನ ತಡೆಯಲು ಈ ಕೃತ್ಯ ಎಸಗಲಾಗಿದೆ. ಪ್ರಮೋದ್ ಮುತಾಲಿಕ್, ಸಿದ್ಧಲಿಂಗ ಸ್ವಾಮೀಜಿ ಸೇರಿ ಎಲ್ಲರ ಅಕೌಂಟ್ ಬ್ಲಾಕ್ ಮಾಡಲಾಗಿದೆ. 4 ವಿಭಾಗ ಅಧ್ಯಕ್ಷರ, 18 ಜಿಲ್ಲಾ ಅಧ್ಯಕ್ಷರ ಹಾಗೂ ಪ್ರಮುಖ ಕಾರ್ಯಕರ್ತರ ಫೇಸ್ಬುಕ್ ಬಂದ್ ಆಗಿದೆ. ರಾಜ್ಯದಲ್ಲಿ ಎಮರ್ಜೆನ್ಸ್ ವಾತಾವರಣ ನಿರ್ಮಾಣವಾಗಿದೆ ಎಂದು ಗಂಗಾಧರ ಕುಲಕರ್ಣಿ ತಿಳಿಸಿದರು.

ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗ್ತಿದೆ. ರಾಜ್ಯ ಸರ್ಕಾರ ಮಾಡಿದ್ದಲ್ಲಿ ಕಾರಣ ಹೇಳಬೇಕು. ಮಾಡದೇ ಇದ್ದಲ್ಲಿ ಫೇಸ್ ಬುಕ್ ವಿರುದ್ಧ ಕೇಸ್ ಮಾಡಬೇಕು. ಸಂವಿಧಾನ ಬದ್ಧವಾದ ಹಕ್ಕುಗಳನ್ನು ವಾಪಸ್ ಕೊಡಿಸಬೇಕು. ಇದಕ್ಕೆಲ್ಲ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಕಾರಣ. ಎಲ್ಲಾ ಅಕೌಂಟ್ ಗಳನ್ನು ಮರು ಆರಂಭಿಸಬೇಕು. ಇಲ್ಲದೇ ಇದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:58 pm, Sat, 6 July 24