AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ ಪರೀಕ್ಷೆ ಬಿಟ್ಟಿದ್ದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆದ ಕಥೆ

ಧಾರವಾಡ: ಕೊರೊನಾ ಇಡೀ ವಿಶ್ವವನ್ನೇ ಹೈರಾಣಾಗಿಸಿದೆ. ಅದಕ್ಕೆ ಮಕ್ಕಳು, ಹಿರಿಯರು, ಮಹಿಳೆಯರು, ಪುರುಷರು ಅನ್ನೋ ಬೇಧಭಾವವೇ ಇಲ್ಲ. ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಡೀ ವಿಶ್ವವೇ ಈ ಮಹಾಮಾರಿ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿವೆ. ಇಂಥ ವೇಳೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಏನೇ ಆಗಲಿ SSLC ಪರೀಕ್ಷೆ ನಡೆಸಿಯೇ ತೀರೋದಾಗಿ ಪಣ ತೊಟ್ಟಿತ್ತು. ಅದರಂತೆ ಈಗಾಗಲೇ ಪರೀಕ್ಷೆ ಕೂಡ ಆರಂಭವಾಗಿದೆ. ಎಲ್ಲೆಡೆ ವಿದ್ಯಾರ್ಥಿಗಳು ಭಯದ ನಡುವೆಯೇ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ಧಾರವಾಡದ ವಿದ್ಯಾರ್ಥಿನಿಯೊಬ್ಬರು ಕೊರೊನಾ ಭಯದಿಂದ ಪರೀಕ್ಷೆ ಬರೆಯೋದಕ್ಕೆ […]

ಕೊರೊನಾಗೆ ಹೆದರಿ ಪರೀಕ್ಷೆ ಬಿಟ್ಟಿದ್ದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆದ ಕಥೆ
Follow us
ಸಾಧು ಶ್ರೀನಾಥ್​
| Updated By:

Updated on: Jun 27, 2020 | 7:41 PM

ಧಾರವಾಡ: ಕೊರೊನಾ ಇಡೀ ವಿಶ್ವವನ್ನೇ ಹೈರಾಣಾಗಿಸಿದೆ. ಅದಕ್ಕೆ ಮಕ್ಕಳು, ಹಿರಿಯರು, ಮಹಿಳೆಯರು, ಪುರುಷರು ಅನ್ನೋ ಬೇಧಭಾವವೇ ಇಲ್ಲ. ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಡೀ ವಿಶ್ವವೇ ಈ ಮಹಾಮಾರಿ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿವೆ. ಇಂಥ ವೇಳೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಏನೇ ಆಗಲಿ SSLC ಪರೀಕ್ಷೆ ನಡೆಸಿಯೇ ತೀರೋದಾಗಿ ಪಣ ತೊಟ್ಟಿತ್ತು. ಅದರಂತೆ ಈಗಾಗಲೇ ಪರೀಕ್ಷೆ ಕೂಡ ಆರಂಭವಾಗಿದೆ.

ಎಲ್ಲೆಡೆ ವಿದ್ಯಾರ್ಥಿಗಳು ಭಯದ ನಡುವೆಯೇ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ಧಾರವಾಡದ ವಿದ್ಯಾರ್ಥಿನಿಯೊಬ್ಬರು ಕೊರೊನಾ ಭಯದಿಂದ ಪರೀಕ್ಷೆ ಬರೆಯೋದಕ್ಕೆ ನಿರಾಕರಿಸಿದ್ದಾರೆ. ಜಿಲ್ಲೆಯ ಅಳ್ನಾವರ ತಾಲೂಕಿನ ಕಾಶೆನಟ್ಟಿ ಗ್ರಾಮದ ಲಕ್ಷ್ಮಿ ಕುಳೆ ಎಂಬ ವಿದ್ಯಾರ್ಥಿನಿಗೆ ಕೊರೊನಾ ಅದೆಷ್ಟು ಭಯ ತಂದಿದೆ ಅನ್ನೋದಕ್ಕೆ ಇದು ಸಾಕ್ಷಿ. ಯಾರು ಎಷ್ಟೇ ಹೇಳಿದರೂ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆಯಲು ಆಕೆ ಸಿದ್ಧರಾಗಲೇ ಇಲ್ಲ. ಹೀಗಾಗಿ ಜೂನ್ 25 ರಂದು ನಡೆದ ಮೊದಲನೇ ಪ್ರಶ್ನೆ ಪತ್ರಿಕೆಗೆ ಪರೀಕ್ಷೆಯನ್ನು ಬರೆಯಲೇ ಇಲ್ಲ.

ಇದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಕೂಡಲೇ ಡಿಡಿಪಿಐ ಎಂ.ಎಲ್.ಹಂಚಾಟೆ ತಮ್ಮ ಅಧಿಕಾರಿಗಳನ್ನು ಆಕೆಯ ಮನೆಗೆ ಕಳಿಸಿಕೊಟ್ಟಿದ್ದಾರೆ. ವಿದ್ಯಾರ್ಥಿನಿಯ ಮನೆಗೆ ಹೋದ ಅಧಿಕಾರಿಗಳು ಹಾಗೂ ಪೊಲೀಸರು ಆಕೆಯ ಆತಂಕವನ್ನು ನಿವಾರಿಸಿದ್ದಾರೆ. ಕೊನೆಗೆ ಇಂದು ನಡೆದ ಪರೀಕ್ಷೆಗೆ ಆಕೆ ಹಾಜರಾಗಿ ನಿರ್ಭಯದಿಂದ ಪರೀಕ್ಷೆ ಬರೆದಿದ್ದಾರೆ. ಅಲ್ಲದೇ ಮುಂದಿನ ಎಲ್ಲ ಪರೀಕ್ಷೆಗಳನ್ನು ಬರೆಯೋದಾಗಿ ಹೇಳಿದ್ದಾರೆ.

ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ