AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಕೃಷಿ ಕೆಲಸಕ್ಕೆ ನೆರವಾಗಲು ಎಸ್‌ಎಲ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಯಿಂದ ಕೃಷಿ ಯಂತ್ರ ಆವಿಷ್ಕಾರ

ಆತ ಎಸ್‌ಎಲ್‌ಎಲ್‌ಸಿ ಮುಗಿಸಿ ಮನೆಯಲ್ಲಿದ್ದ. ಅಪ್ಪ ಕೃಷಿ ಕೆಲಸ ಮಾಡೋದನ್ನ ನೋಡುತ್ತಿದ್ದ. ಅಪ್ಪ ಕಷ್ಟ ಪಡೋದನ್ನ ನೋಡಿ ತಾನು ಏನಾದ್ರೂ ಸಹಾಯ ಮಾಡಬೇಕು ಅಂತ ಅಂದ್ಕೊಂಡಿದ್ದ. ಅದರಂತೆ ಆತ ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ ಮಾಡಿದ್ದಾನೆ. ತನ್ನ ಕೈಯಾರೆ ಕೃಷಿಯಂತ್ರ ತಯಾರಿಸಿ ಹುಬ್ಬೇರುವಂತೆ ಮಾಡಿದ್ದಾನೆ.

ಅಪ್ಪನ ಕೃಷಿ ಕೆಲಸಕ್ಕೆ ನೆರವಾಗಲು ಎಸ್‌ಎಲ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಯಿಂದ ಕೃಷಿ ಯಂತ್ರ ಆವಿಷ್ಕಾರ
ಬಸವರಾಜ ಜಾಪಣ್ಣವರ ಎಂಬ ವಿದ್ಯಾರ್ಥಿ ಸೌರ ವಿದ್ಯುತ್ ಚಾಲಿತ ಕಳೆ ಕತ್ತರಿಸುವ ಯಂತ್ರ ಆವಿಷ್ಕಾರಿಸಿದ್ದಾನೆ
TV9 Web
| Edited By: |

Updated on:Aug 18, 2021 | 9:47 AM

Share

ಧಾರವಾಡ: ಕೊರೊನಾದಿಂದ ಶಾಲೆ ಬಾಗಿಲು ಮುಚ್ಚಿ ಎರಡು ವರ್ಷ ಆಯ್ತು. ಸ್ಟೂಡೆಂಟ್ಸ್‌ಗಳಿಗೆ ಸ್ಕೂಲ್‌ ಇಲ್ದೇ ಮನೆಯಲ್ಲೇ ಇದ್ದು ಇದ್ದು ಬೋರ್ ಆಗಿದೆ. ಕೆಲವರು ಅದು ಇದು ಕೆಲಸ ಮಾಡ್ತಾ ಇದ್ರೆ, ಮತ್ತೆ ಕೆಲ ವಿದ್ಯಾರ್ಥಿಗಳು ಮೊಬೈಲ್ ಟಿವಿ ಆಟ ಅಂತ ಫುಲ್ ಬ್ಯುಸಿಯಾಗಿದ್ದಾರೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಸ್ಕೂಲ್‌ಗೆ ರಜೆ ಇದೆ ಅಂತ ಕೈಕಟ್ಟಿ ಕೂರದೆ ಸಾಧನೆ ಮಾಡಿದ್ದಾನೆ. ರೈತರಿಗೆ ನೆರವಾಗಿದ್ದಾನೆ.

ಧಾರವಾಡದ ನವಲೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್‌ಸಿ ಮುಗಿಸಿದ ಬಸವರಾಜ ಜಾಪಣ್ಣವರ ಎಂಬ ವಿದ್ಯಾರ್ಥಿ ಸೌರ ವಿದ್ಯುತ್ ಚಾಲಿತ ಕಳೆ ಕತ್ತರಿಸುವ ಯಂತ್ರ ಆವಿಷ್ಕಾರಿಸಿದ್ದಾನೆ. ಅಲ್ಯೂಮಿನಿಯಂ ಪೈಪ್, ಸೋಲಾರ್ ಪ್ಯಾನಲ್, ಸೈಕಲ್ ರಿಮ್, ಬ್ಯಾಟರಿ ಬಳಸಿ ಕೇವಲ ಹತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ಯಂತ್ರ ತಯಾರಿಸಿದ್ದಾನೆ.

SSLC Student innovate agriculture machine

ಸೌರ ವಿದ್ಯುತ್ ಚಾಲಿತ ಕಳೆ ಕತ್ತರಿಸುವ ಯಂತ್ರ

ಬಸವರಾಜ ಆವಿಷ್ಕರಿಸಿರೋ ಯಂತ್ರ ತುಂಬಾ ಚಿಕ್ಕದಾಗಿರೋ ಕಾರಣಕ್ಕೆ ಬೆಳೆಗೆ ಯಾವುದೇ ತೊಂದರೆಯಾಗೋದಿಲ್ಲ. ಸೋಲರ್ ಮೂಲಕ ಬ್ಯಾಟರಿ ಚಾರ್ಜ್‌ ಆಗಿ ಮೊಟರ್ ತಿರುಗುತ್ತೆ. ಯಂತ್ರಕ್ಕೆ ಅಳವಡಿಸಿರೋ ಬ್ಲೆಡ್‌ಗಳು ಕಳೆಯನ್ನು ಕತ್ತರಿಸುತ್ತೆ. ಎತ್ತುಗಳಿಗೆ, ಟ್ರ್ಯಾಕ್ಟರ್‌ಗಳಿಂತ ಇದರ ವೆಚ್ಚ ಬಹಳ ಕಡಿಮೆ ಇದ್ದು, ರೈತರಿಗೆ ಸಾಕಷ್ಟು ಸಹಕಾರಿ ಆಗಲಿದೆ. ಮಗನ ಈ ಸಾಧನೆ ನೋಡಿ ತಂದೆ ಮಲ್ಲಪ್ಪ ಭಾವುಕರಾಗಿದ್ದಾರೆ.

ಒಟ್ಟಾರೆಯಾಗಿ ಸ್ಕೂಲ್‌ ಇಲ್ಲ ಅಂತ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳದೆೇ ಅಪ್ಪನ ಕೃಷಿ ಕೆಲಸಕ್ಕೆ ಸಹಾಯವಾಗಲಿ ಅಂತ ಕೃಷಿ ಯಂತ್ರ ತಯಾರಿಸಿ ಸಾಧನೆ ಮಾಡಿದ್ದಾನೆ. ಈ ಯಂತ್ರ ನೋಡೋಕೆ ಸಿಂಪಲ್ ಆಗಿದ್ರೂ ಇದನ್ನ ಮತ್ತಷ್ಟು ಅಪ್ಡೆಟ್ ಮಾಡಿದ್ರೆ ರೈತರಿಗೆ ಸಾಕಷ್ಟು ಅನುಕೂಲ ಆಗಲಿದೆ.

SSLC Student innovate agriculture machine

ಬಸವರಾಜ ಜಾಪಣ್ಣವರ

ಇದನ್ನೂ ಓದಿ: ಉಯ್ಯಾಲೆಯೇ ನೇಣು ಕುಣಿಕೆಯಾಗಿ ಬಾಲಕಿ ಸಾವು; ಮತ್ತೋರ್ವ ಬಾಲಕಿ ಸ್ಥಿತಿ ಗಂಭೀರ

Published On - 9:46 am, Wed, 18 August 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು