AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli KIMS: ಹುಬ್ಬಳ್ಳಿ ಕಿಮನ್ಸ್​​ನಲ್ಲಿ ಸಕಾಲಕ್ಕೆ ವೇತನ ಸಿಗದೆ ಸಿಬ್ಬಂದಿ ಪರದಾಟ

ಹುಬ್ಬಳ್ಳಿ ಕಿಮ್ಸ್ ವೇತನ ಸಮಸ್ಯೆ: ಉತ್ತರ ಕರ್ನಾಟಕ ಭಾಗದ ಬಡವರ ಆರೋಗ್ಯ ಸಂಜೀವಿನಿಯಾಗಿರುವ ಕಿಮ್ಸ್​​ನಲ್ಲಿ ರೋಗಿಗಳ ಪ್ರಾಣ ಉಳಿಸಲು ಸಿಬ್ಬಂದಿ ಹಗಲಿರಳು ಶ್ರಮಿಸುತ್ತಿದ್ದಾರೆ. ಆದರೆ, ಇದೇ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಸಿಗದೇ ಪರದಾಡುವಂತಾಗಿದೆ. ಇತ್ತ ಸರ್ಕಾರ ಅನುದಾನ ನೀಡಬೇಕು ಎಂದು ಕಿಮ್ಸ್ ಆಡಳಿತ ಹೇಳುತ್ತಿದೆ. ಅತ್ತ ಸರ್ಕಾರ, ನಿಮ್ಮದೇ ಸಂಪನ್ಮೂಲದಿಂದ ವೇತನ ನೀಡುವಂತೆ ಸಲಹೆ ನೀಡುತ್ತಿದೆ ಎನ್ನಲಾಗಿದೆ.

Hubli KIMS: ಹುಬ್ಬಳ್ಳಿ ಕಿಮನ್ಸ್​​ನಲ್ಲಿ ಸಕಾಲಕ್ಕೆ ವೇತನ ಸಿಗದೆ  ಸಿಬ್ಬಂದಿ ಪರದಾಟ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಹೊರ ರೋಗಿ ವಿಭಾಗ
ಸಂಜಯ್ಯಾ ಚಿಕ್ಕಮಠ
| Edited By: |

Updated on:Apr 24, 2025 | 10:41 AM

Share

ಹುಬ್ಬಳ್ಳಿ, ಏಪ್ರಿಲ್ 24: ಹುಬ್ಬಳ್ಳಿ (Hubli) ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ (KIMS Hospital), ಉತ್ತರ ಕರ್ನಾಟಕ ಭಾಗದಲ್ಲಿ ರೋಗಿಗಳಿಗೆ ಸಂಜೀವಿನಿಯಾಗಿದೆ. ಪ್ರತಿನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗೆ ಈ ಆಸ್ಪತ್ರೆಗೆ ಬರುತ್ತಾರೆ. ಅವರ ಆರೋಗ್ಯ ಸುಧಾರಣೆಗಾಗಿ, ಕಿಮ್ಸ್​ನಲ್ಲಿ ವೈದ್ಯರು ಸೇರಿದಂತೆ ಬರೋಬ್ಬರಿ 1300 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಆರೋಗ್ಯ ಸುಧಾರಣೆಗಾಗಿ, ರೋಗಿಗಳ ಜೀವ ಉಳಿಸಲು ಹಗಲಿರಳು ದುಡಿಯುವ ಸಿಬ್ಬಂದಿ, ಇದೀಗ ತಮ್ಮ ಕುಟುಂಬವನ್ನು ಉಳಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಿಬ್ಬಂದಿಗೆ ಸಕಾಲದಲ್ಲಿ ವೇತನ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಗ್ರೂಪ್ ಎ ದಿಂದ ಗ್ರೂಪ್ ಡಿ ವರಗಿನ ಸಿಬ್ಬಂದಿಗೆ ಕಳೆದ ಒಂದೂವರೆ ವರ್ಷದಿಂದ ಸಕಾಲದಲ್ಲಿ ವೇತನ ಪಾವತಿ ಆಗುತ್ತಿಲ್ಲ ಎನ್ನಲಾಗಿದೆ. ಕೆಲವು ಸಲ, ತಿಂಗಳ ಮಧ್ಯದಲ್ಲಿ ವೇತನವಾದರೆ, ಹಲವು ಸಲ ತಿಂಗಳ ಕೊನೆಯಲ್ಲಿ ವೇತನ ಪಾವತಿಯಾಗುತ್ತಿದೆಯಂತೆ. ಹೀಗಾದರೆ ನಾವು ಕುಟುಂಬ ನಡೆಸುವುದು ಹೇಗೆ? ಮನೆ ಬಾಡಿಗೆ, ಮಕ್ಕಳ ಫೀಸ್ ಸೇರಿದಂತೆ ದೈನಂದಿನ ಖರ್ಚು ವೆಚ್ಚವನ್ನು ನಿಬಾಯಿಸುವುದು ಹೇಗೆ ಎಂದು ಸಿಬ್ಬಂದಿ ಪ್ರಶ್ನಿಸುತ್ತಿದ್ದಾರೆ.

ವೇತನ ವಿಳಂಬ ಸಮಸ್ಯೆ ಬಗ್ಗೆ ಯಾರಾದರೂ ಬಹಿರಂಗವಾಗಿ ಮಾತನಾಡಿದರೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಗಳೂ ಇವೆ.

ಇದನ್ನೂ ಓದಿ
Image
ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
Image
ಹರಸಾಹಸ ಪಟ್ಟು ಪಹಲ್ಗಾಮ್​ಗೆ ತೆರಳಿ ಕನ್ನಡಿಗರ ನೆರವಿಗೆ ನಿಂತ ಸಂತೋಷ ಲಾಡ್
Image
ಧಾರವಾಡದಲ್ಲೂ ಜನಿವಾರ ವಿವಾದ: ತೆಗೆಯುತ್ತೇನೆಂದ್ರೂ ಕತ್ತರಿಸಿ ಬಿಟ್ಟರು!
Image
ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ನಂಬಿಕೆ ಮೇಲಿನ ದಾಳಿ; ಪ್ರಲ್ಹಾದ್ ಜೋಶಿ

ಕಿಮ್ಸ್ ಆರ್ಥಿಕ ಸ್ಥಿತಿ ಹದಗೆಟ್ಟಿರವುದೇ ಕಾರಣ

ಕಿಮ್ಸ್​ನಲ್ಲಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಸಿಗದೇ ಇರಲು ಮುಖ್ಯ ಕಾರಣ ಆರ್ಥಿಕ ಸ್ಥಿತಿ ಹದೆಗೆಟ್ಟಿರುವುದು. ಆದಾಯಕ್ಕಿಂತ ಖರ್ಚೇ ಹೆಚ್ಚಾಗಿರುವುದರಿಂದ, ವೇತನ ಹೊಂದಿಸಲಿಕ್ಕಾಗದೇ ಪರದಾಡುವಂತಾಗಿದೆ. ಹೀಗಾಗಿ ಕಿಮ್ಸ್, ವೈದ್ಯಕೀಯ ಶಿಕ್ಷಣ ಇಲಾಖೆಗೆ, ವೇತನ ಸೇರಿದಂತೆ ಖರ್ಚು ವೆಚ್ಚಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಅನೇಕ ಬಾರಿ ಮನವಿ ಮಾಡಿದೆ. ಆದರೆ ಸರ್ಕಾರ ಈವರೆಗೆ ಅನುದಾನ ನೀಡ್ತಿಲ್ಲ ಎನ್ನಲಾಗಿದೆ. ಕಿಮ್ಸ್ ಆದಾಯದಲ್ಲಿಯೇ ವೇತನ ಪಾವತಿ ಮಾಡುವಂತೆ ಸೂಚಿಸಿದೆ. ಒಂದಡೆ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿ ಸಿಬ್ಬಂದಿ ಪರದಾಡುವುದರ ಜೊತೆಗೆ ವೇತನಕ್ಕಾಗಿ ಪರದಾಡುವಂತಾಗಿದೆ. ಆದರೆ ಇನ್ನೊಂದೆಡೆ ಸರ್ಕಾರ ಕೂಡಾ ನೆರವಿಗೆ ಬಾರದೇ ಇರುವುದ ಅವರ ಸಂಕಷ್ಟವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಧಾರವಾಡದಲ್ಲೂ ಜನಿವಾರ ವಿವಾದ: ವಿದ್ಯಾರ್ಥಿ ತೆಗೆಯುತ್ತೇನೆಂದರು ಬಿಡದೆ ಕತ್ತರಿಸಿ ಬಿಟ್ಟರು!

ಹಣಕಾಸಿನ ವರ್ಷದ ಕೊನೆಯ ತಿಂಗಳು ಆಗಿದ್ದರಿಂದ ಕಳೆದ ತಿಂಗಳು, ಈ ತಿಂಗಳ ವೇತನ ಸ್ವಲ್ಪ ಹೆಚ್ಚು ಕಡಿಮೆಯಾಗಿರಬಹುದು. ಆದರೆ ಸಕಾಲದಲ್ಲಿ ವೇತನ ನೀಡಲು ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಆಶ್ವಾಸನೆ ನೀಡಿದ್ದಾರೆ. ಆದರೆ ರೋಗಿಗಳಿಗಾಗಿ ಹಗಲಿರಳು ಕೆಲಸ ಮಾಡುವ ಸಿಬ್ಬಂದಿಗೆ ತಿಂಗಳ ಮೊದಲ ವಾರದಲ್ಲಿಯೇ ಪ್ರತಿ ತಿಂಗಳು ವೇತನ ಸಿಗುವಂತಹ ವ್ಯವಸ್ಥೆ ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 am, Thu, 24 April 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್