AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ-ಅಯೋಧ್ಯೆ ಯಾತ್ರೆ ರದ್ದುಗೊಳಿಸಿದ ಸ್ಟಾರ್‌ ಏರ್‌ಲೈನ್ಸ್‌: ಪ್ರಯಾಣಿಕರಿಗೆ ದಂಡ ಸಮೇತ ಪರಿಹಾರಿ ನೀಡುವಂತೆ ಧಾರವಾಡ ಗ್ರಾಹಕರ ಆಯೋಗ ಆದೇಶ

ಸೇವಾ ನ್ಯೂನ್ಯತೆ ಎಂದು ಸ್ಟಾರ್‌ ಏರ್‌ಲೈನ್ಸ್‌ಗೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು 27 ಜನರು ಗ್ರಾಹಕ ರಕ್ಷಣಾ ಕಾಯ್ದೆ ಅಡಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ 2023ರ ಫೆಬ್ರುವರಿ 1ರಂದು ದೂರನ್ನು ಸಲ್ಲಿಸಿದ್ದರು. ಏಕಾಏಕಿ ವಿಮಾನ ರದ್ದುಪಡಿಸಿ ಪ್ರವಾಸಿಗರಿಗೆ ಬೇರೆ ವ್ಯವಸ್ಥೆ ಮಾಡದಿರುವುದು ಸ್ಟಾರ್‌ ಏರ್‌ಲೈನ್ಸ್‌ನವರ ತಪ್ಪು. ಹಾಗಾಗಿ ಧಾರವಾಡ ಗ್ರಾಹಕರ ಆಯೋಗವು ದಂಡ ಸಮೇತ ಪರಿಹಾರ ನೀಡುವಂತೆ ಆದೇಶಿಸಿದೆ.

ಕಾಶಿ-ಅಯೋಧ್ಯೆ ಯಾತ್ರೆ ರದ್ದುಗೊಳಿಸಿದ ಸ್ಟಾರ್‌ ಏರ್‌ಲೈನ್ಸ್‌: ಪ್ರಯಾಣಿಕರಿಗೆ ದಂಡ ಸಮೇತ ಪರಿಹಾರಿ ನೀಡುವಂತೆ ಧಾರವಾಡ ಗ್ರಾಹಕರ ಆಯೋಗ ಆದೇಶ
ಪ್ರಾತಿನಿಧಿಕ ಚಿತ್ರ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Aug 28, 2023 | 11:11 PM

Share

ಧಾರವಾಡ, ಆಗಸ್ಟ್​ 28: ಮಹಿಳಾ ನ್ಯಾಯವಾದಿಯಾಗಿರುವ ಮಹೇಶ್ವರಿ ಉಪ್ಪಿನ್ ಮತ್ತು ಅವರೊಂದಿಗೆ 26 ಸಂಗಡಿಗರು ಹುಬ್ಬಳ್ಳಿ (Hubballi) ಯ ಸುರಕ್ಷಾ ಟೂರ್ಸ್‌ ಮೂಲಕ 2022ರ ಅಕ್ಟೋಬರ್ 9 ರಿಂದ 19ರ ರವರೆಗೆ ದೆಹಲಿ, ಹರಿದ್ವಾರ, ಅಯೋಧ್ಯೆ, ಕಾಶಿ, ಪ್ರಯಾಗರಾಜ, ಮಥುರಾ ಸೇರಿ ಉತ್ತರ ಭಾರತದ ಪ್ರವಾಸ ನಿಗದಿ ಮಾಡಿಕೊಂಡಿದ್ದರು. ದೆಹಲಿಯಿಂದ ಹೊರಟು ಆ ಎಲ್ಲ ಕ್ಷೇತ್ರಗಳ ದರ್ಶನ ಮಾಡಿಸಿಕೊಂಡು ವಾಪಸ್ಸು ದೆಹಲಿಗೆ ಕರೆತರುವ ಜವಾಬ್ದಾರಿ ಹುಬ್ಬಳ್ಳಿಯ ಸುರಕ್ಷಾ ಟೂರ್ಸ್ ಮತ್ತು ಟ್ರಾವೆಲ್ಸ್‌ನವರದ್ದಾಗಿತ್ತು.

ಪ್ರವಾಸಿಗರು ಸುರಕ್ಷಾ ಟೂರ್ಸ್ ಮಾಲೀಕ ಸುನೀಲ ತೊಗರಿಯವರಿಗೆ ತಲಾ ರೂ. 21 ಸಾವಿರದಂತೆ ಹಣ ಸಂದಾಯ ಮಾಡಿದ್ದರು. ಹುಬ್ಬಳ್ಳಿಯಿಂದ ದೆಹಲಿಗೆ ತಲುಪಲು ಎಲ್ಲ 27 ಜನ ಪ್ರವಾಸಿಗರು ಸ್ಟಾರ್‌ ಏರ್‌ಲೈನ್ಸ್‌ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ಪ್ರಯಾಣಕ್ಕೆ ಸಿದ್ಧತೆ ಸಹ ಮಾಡಿಕೊಂಡಿದ್ದರು. ಆದರೆ, ಏಕಾಏಕಿ ಹುಬ್ಬಳ್ಳಿಯಿಂದ ದೆಹಲಿಗೆ ಹೋಗಬೇಕಾದ ಸ್ಟಾರ್‌ ಏರ್‌ಲೈನ್ಸ್‌ ರದ್ದಾಗಿರುವುದಾಗಿ ಸಂಗಡಿಗರಿಗೆ ಮಾಹಿತಿ ಬಂತು.

ಇದನ್ನೂ ಓದಿ: ಮಕ್ಕಳ ನಡಿಗೆ ಹಸಿರಿನ ಕಡೆಗೆ: ಶಾಲೆಗಳ ಆವರಣದಲ್ಲಿ 50 ಲಕ್ಷ ಸಸಿ ನೆಡುವ ಯೋಜನೆ

ಸ್ಟಾರ್‌ ಏರ್‌ಲೈನ್ಸ್‌ರವರು ದೆಹಲಿಗೆ ಹೋಗಲು ಬೇರೆ ವ್ಯವಸ್ಥೆ ಮಾಡಿರಲಿಲ್ಲ. ಹಾಗಾಗಿ ಸುರಕ್ಷಾ ಟೂರ್ಸ್‌ನ ಮಾಲೀಕ ಸುನೀಲ ತೊಗರಿ ತನ್ನ ಖರ್ಚು ಹಾಕಿ ಬೇರೆ ಬೇರೆ ಮಾರ್ಗಗಳ ಮೂಲಕ 2022ರ ಅಕ್ಟೋಬರ್ 9ರ ರಾತ್ರಿ ಎಲ್ಲ ಪ್ರವಾಸಿಗರಿಗೆ ದೆಹಲಿ ತಲುಪುವ ವ್ಯವಸ್ಥೆ ಮಾಡಿದರು. ನಂತರ ಪ್ರವಾಸವೂ ಸುಗಮವಾಯಿತು.

ತಮ್ಮ ಪ್ರಯಾಣಕ್ಕೆ ಜೂನ್ ತಿಂಗಳಲ್ಲೇ ಟಿಕೇಟ್ ನಿಗದಿಯಾಗಿದ್ದರೂ ಪ್ರಯಾಣದ ಹಿಂದಿನ ದಿನ ಸ್ಟಾರ್ ಏರ್‌ಲೈನ್ಸ್‌ ಒಮ್ಮೆಲೇ ಪ್ರಯಾಣ ರದ್ದುಪಡಿಸಿದ್ದರಿಂದ ಅನಾನುಕೂಲವಾಗಿದ್ದು, ಸೇವಾ ನ್ಯೂನ್ಯತೆ ಎಂದು ಸ್ಟಾರ್‌ ಏರ್‌ಲೈನ್ಸ್‌ಗೆ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು 27 ಜನರು ಗ್ರಾಹಕ ರಕ್ಷಣಾ ಕಾಯ್ದೆ ಅಡಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ 2023ರ ಫೆಬ್ರುವರಿ 1ರಂದು ದೂರನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ದೂರಿನ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಹುಬ್ಬಳ್ಳಿಯಿಂದ ದೆಹಲಿಗೆ ಕರೆದೊಯ್ಯುವ ಹೊಣೆಗಾರಿಕೆ ತನ್ನದಲ್ಲದಿದ್ದರೂ ಸುರಕ್ಷಾ ಟೂರ್ಸ್‌ನ ಮಾಲೀಕ ಸುನೀಲ ತೊಗರಿ ತನ್ನ ಗ್ರಾಹಕರಿಗೆ ತೊಂದರೆ ಆಗಬಾರದು ಎಂದು ಪರ್ಯಾಯ ವ್ಯವಸ್ಥೆ ಮಾಡಿರುವುದು ಪ್ರಶಂಸನೀಯ.

ಆದರೆ ಏಕಾಏಕಿ ವಿಮಾನ ರದ್ದುಪಡಿಸಿ ಪ್ರವಾಸಿಗರಿಗೆ ಬೇರೆ ವ್ಯವಸ್ಥೆ ಮಾಡದಿರುವುದು ಸ್ಟಾರ್‌ ಏರ್‌ಲೈನ್ಸ್‌ನವರ ತಪ್ಪು. ಆದ್ದರಿಂದ ಸ್ಟಾರ್‌ ಏರ್‌ಲೈನ್ಸ್‌‌ನವರು ಎಲ್ಲ 27 ದೂರುದಾರರಿಗೆ ತಲಾ ರೂ. 25 ಸಾವಿರ ಪರಿಹಾರ ಮತ್ತು ರೂ. 5 ಸಾವಿರ ಪ್ರಕರಣದ ಖರ್ಚು ವೆಚ್ಚವೆಂದು ಒಟ್ಟು ರೂ. 8.10 ಲಕ್ಷಗಳನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಸಂದಾಯ ಮಾಡುವಂತೆ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:39 pm, Mon, 28 August 23

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!