AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕೊಡಿಸುವುದಾಗಿ ಆನ್​ಲೈನ್​ ವಂಚನೆ! ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್

ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮಾತನಾಡಿದ್ದರು. ಡಿಸ್ಕೌಂಟ್ ಕೊಡಿಸುವುದಾಗಿ ಹೇಳಿ ವಿವಿಧ ಶುಲ್ಕದ ಹೆಸರಲ್ಲಿ ಒಂದು ಲಕ್ಷ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕೊಡಿಸುವುದಾಗಿ ಆನ್​ಲೈನ್​ ವಂಚನೆ! ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್
ಬಂಧಿತ ಮಹಿಳೆ
TV9 Web
| Edited By: sandhya thejappa|

Updated on:Mar 24, 2022 | 9:06 AM

Share

ಹುಬ್ಬಳ್ಳಿ: ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಕೊಡಿಸುವುದಾಗಿ ಹುಬ್ಬಳ್ಳಿಯ ಸುರೇಶ್ ಕುಮಾರ್ ಎಂಬುವವರಿಗೆ ಅಪರಿಚಿತ ವ್ಯಕ್ತಿಗಳು ಆನ್​ಲೈನ್​ (Online) ವಂಚನೆ ಮಾಡಿದ್ದಾರೆ. ಸುರೇಶ್ ಕುಮಾರ್​ಗೆ ಆನ್​ಲೈನ್​ ವಂಚಕರು ಸುಮಾರು ಒಂದು ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾರೆ. ಸುರೇಶ್ ಕುಮಾರ್ 499 ರೂಪಾಯಿ ತುಂಬಿ ಕೋಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರು. ಅದೇ ದಿನ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮಾತನಾಡಿದ್ದರು. ಡಿಸ್ಕೌಂಟ್ ಕೊಡಿಸುವುದಾಗಿ ಹೇಳಿ ವಿವಿಧ ಶುಲ್ಕದ ಹೆಸರಲ್ಲಿ ಒಂದು ಲಕ್ಷ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಳ್ಳತನ ಮಾಡುತ್ತಿದ್ದ ಒಂಟಿ ಕಳ್ಳಿ ಅರೆಸ್ಟ್!: ಬೆಂಗಳೂರು: ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. ಜಯಂತಿ ಅಲಿಯಾಸ್ ಕುಟ್ಟಿಯಮ್ಮ ಬಂಧಿತ ಆರೋಪಿತೆ. ನಗರದ ಒಟ್ಟು ಇಪ್ಪತ್ತು ಮೂರು ಕಳ್ಳತನ ಪ್ರಕರಣದಲ್ಲಿ ಈಕೆ ಅರೋಪಿತೆಯಾಗಿದ್ದಾಳೆ. ಮಹಿಳೆ ಬೀಗ ಹಾಕಿದ್ದ ಮನೆಗಳನ್ನು ಗುರುತಿಸುತಿದ್ದಳಿ. ಬಳಿಕ ಒಂಟಿಯಾಗಿ ಮನೆಗೆಳಿಗೆ ಹೋಗಿ, ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಳು.

ಬಂಧಿತ ಮಹಿಳೆ ಒಂದೆ ಏರಿಯಾದಲ್ಲಿ ಎರಡು ಕಳ್ಳತನ ಮಾಡಿದ್ದಾಳೆ. ವಿದ್ಯಾರಣ್ಯಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಎರಡು ಹೊಸ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಅಂಬೇಡ್ಕರ್ ಬ್ಯಾನರ್ ವಿರೂಪಗೊಳಿಸಿ ಆರೋಪಿಗಳು ಸೆರೆ: ಅಂಬೇಡ್ಕರ್ ಬ್ಯಾನರ್ ವಿರೂಪಗೊಳಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೋಣಾಜೆ ಪೊಲೀಸರು ಶರಣ್ (24), ಸುಜಿತ್ (26) ಎಂಬುವವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಹೊರವಲಯದ ಅಸ್ಶೆಗೋಳಿಯಲ್ಲಿ ಅಳವಡಿಸಿದ ಅಂಬೆಡ್ಕರ್ ಜಯಂತಿ ಫ್ಲೆಕ್ಸ್​ಗೆ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಅರಿವಿನ ಜ್ಯೋತಿ ಎಂದರೇನು? ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹೇಳ್ತಾರೆ ಕೇಳಿ

‘ನಿಮ್ಮ ದೇಶದಲ್ಲಿರುವ ಪುಟಿನ್ ವಿಹಾರನೌಕೆ ಮತ್ತು ಆಸ್ತಿಗಳನ್ನು ಜಪ್ತಿ ಮಾಡಿ’: ಇಟಲಿ ಸಂಸತ್ತಿಗೆ ವೊಲೊದಿಮಿರ್ ಜೆಲೆನ್ಸ್ಕಿ ಆಗ್ರಹ

Published On - 8:57 am, Thu, 24 March 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್