AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧಾರ

ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿಯಾಗಿದ್ದು ಏಕೆ ಎಂಬ ವಿಚಾರ ನಿನ್ನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಸಮನ್ಸ್​ ನೀಡಿಕೆಗೆ ನೈಜ ಕಾರಣ ಏನು ಎಂಬುದು ಇದೀಗ ಬಯಲಾಗಿದೆ. ಈ ಮಧ್ಯೆ, ಸಮನ್ಸ್ ಅನ್ವಯ ಇಂದು ಹೋರಾಟಗಾರರು ವಿಚಾರಣೆಗೆ ಕೋರ್ಟ್​ನಲ್ಲಿ ಹಾಜರಾಗಬೇಕಿತ್ತು. ಆದರೆ ಅವರು ಯಾರೂ ಕೋರ್ಟ್​ಗೆ ಹಾಜರಾಗದೆ, ದೂರವುಳಿದಿದ್ದಾರೆ

ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧಾರ
ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧರಿಸಿದ ಹೋರಾಟಗಾರರರು
TV9 Web
| Edited By: |

Updated on:Dec 07, 2021 | 1:08 PM

Share

ಧಾರವಾಡ: ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿಯಾಗಿದ್ದು ಏಕೆ ಎಂಬ ವಿಚಾರ ನಿನ್ನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಸಮನ್ಸ್​ ನೀಡಿಕೆಗೆ ನೈಜ ಕಾರಣ ಏನು ಎಂಬುದು ಇದೀಗ ಬಯಲಾಗಿದೆ. ಈ ಮಧ್ಯೆ, ಸಮನ್ಸ್ ಅನ್ವಯ ಇಂದು ಹೋರಾಟಗಾರರು ವಿಚಾರಣೆಗೆ ಕೋರ್ಟ್​ನಲ್ಲಿ ಹಾಜರಾಗಬೇಕಿತ್ತು. ಆದರೆ ಅವರು ಯಾರೂ ಕೋರ್ಟ್​ಗೆ ಹಾಜರಾಗದೆ, ದೂರವುಳಿದಿದ್ದಾರೆ.

2015ರಲ್ಲಿ ನಡೆದಿದ್ದ ಮಹದಾಯಿ ಹೋರಾಟದ ವಿಷಯದಲ್ಲಿ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ 13ಕ್ಕೂ ಹೆಚ್ಚು ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿತ್ತು. ಆ ವೇಳೆ 187 ರೈತರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕೇಸ್ ವಾಪಸ್ ಸಹ ಪಡೆದಿತ್ತು. ಆದರೂ ಕೆಲವು ರೈತರಿಗೆ ನವಲಗುಂದ ಜೆಎಂಎಫ್‌ಸಿ ಕೋರ್ಟ್‌ನಿಂದ ಸಮನ್ಸ್ ಜಾರಿಯಾಗಿತ್ತು. ಆದರೆ ನಾವು ಕೋರ್ಟ್‌‌ಗೆ ಹಾಜರಾಗದಿರಲು ನಿರ್ಧರಿಸಿದ್ದೇವೆ ಎಂದು ಪ್ರಕರಣದ ಪ್ರಮುಖ ಆರೋಪಿ, ಮಹದಾಯಿ ಹೋರಾಟಗಾರ ಲೋಕನಾಥ ಹೆಬಸೂರ ಪ್ರತಿಕ್ರಿಯೆ ನೀಡಿದ್ದಾರೆ.

ಇಷ್ಟಕ್ಕೂ ಇವರಿಗೆಲ್ಲಾ ಸಮನ್ಸ್ ಜಾರಿಗೆಯಾಗಿದ್ದು ಏಕೆ?

ಸರ್ಕಾರ ಎಲ್ಲ‌ ಕೇಸ್ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದರೆ 56 ಕೇಸ್‌ಗಳ ಪೈಕಿ 51 ಮಾತ್ರವೇ ವಾಪಸ್ ಪಡೆದಿತ್ತು. ಉಳಿದವು ಪೆಂಡಿಂಗ್​ ಇವೆ. ಉಳಿದ ಐದು ಕೇಸುಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಅವುಗಳಿಗೆ ಸಂಬಂಧಿಸಿ ಈಗ ಸಮನ್ಸ್ ಬಂದಿವೆ ಎಂದು ಸ್ವತಃ ಹೋರಾಟಗಾರ ಲೋಕನಾಥ ಹೆಬಸೂರ ತಿಳಿಸಿದ್ದಾರೆ. ಇದೇ ಡಿಸೆಂಬರ್ 13ಕ್ಕೆ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಇದೆ. ಅಷ್ಟರೊಳಗೆ ಸರ್ಕಾರ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಬೇಕು. ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್, ಸಿಎಂ ಬೊಮ್ಮಾಯಿಗೆ ಕಂಟಕ, ಕೋನರೆಡ್ಡಿ ಹೇಳೋದೇನು?

Published On - 1:07 pm, Tue, 7 December 21

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ