AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧಾರ

ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿಯಾಗಿದ್ದು ಏಕೆ ಎಂಬ ವಿಚಾರ ನಿನ್ನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಸಮನ್ಸ್​ ನೀಡಿಕೆಗೆ ನೈಜ ಕಾರಣ ಏನು ಎಂಬುದು ಇದೀಗ ಬಯಲಾಗಿದೆ. ಈ ಮಧ್ಯೆ, ಸಮನ್ಸ್ ಅನ್ವಯ ಇಂದು ಹೋರಾಟಗಾರರು ವಿಚಾರಣೆಗೆ ಕೋರ್ಟ್​ನಲ್ಲಿ ಹಾಜರಾಗಬೇಕಿತ್ತು. ಆದರೆ ಅವರು ಯಾರೂ ಕೋರ್ಟ್​ಗೆ ಹಾಜರಾಗದೆ, ದೂರವುಳಿದಿದ್ದಾರೆ

ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧಾರ
ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧರಿಸಿದ ಹೋರಾಟಗಾರರರು
TV9 Web
| Updated By: ಸಾಧು ಶ್ರೀನಾಥ್​|

Updated on:Dec 07, 2021 | 1:08 PM

Share

ಧಾರವಾಡ: ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿಯಾಗಿದ್ದು ಏಕೆ ಎಂಬ ವಿಚಾರ ನಿನ್ನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಸಮನ್ಸ್​ ನೀಡಿಕೆಗೆ ನೈಜ ಕಾರಣ ಏನು ಎಂಬುದು ಇದೀಗ ಬಯಲಾಗಿದೆ. ಈ ಮಧ್ಯೆ, ಸಮನ್ಸ್ ಅನ್ವಯ ಇಂದು ಹೋರಾಟಗಾರರು ವಿಚಾರಣೆಗೆ ಕೋರ್ಟ್​ನಲ್ಲಿ ಹಾಜರಾಗಬೇಕಿತ್ತು. ಆದರೆ ಅವರು ಯಾರೂ ಕೋರ್ಟ್​ಗೆ ಹಾಜರಾಗದೆ, ದೂರವುಳಿದಿದ್ದಾರೆ.

2015ರಲ್ಲಿ ನಡೆದಿದ್ದ ಮಹದಾಯಿ ಹೋರಾಟದ ವಿಷಯದಲ್ಲಿ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ 13ಕ್ಕೂ ಹೆಚ್ಚು ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿತ್ತು. ಆ ವೇಳೆ 187 ರೈತರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕೇಸ್ ವಾಪಸ್ ಸಹ ಪಡೆದಿತ್ತು. ಆದರೂ ಕೆಲವು ರೈತರಿಗೆ ನವಲಗುಂದ ಜೆಎಂಎಫ್‌ಸಿ ಕೋರ್ಟ್‌ನಿಂದ ಸಮನ್ಸ್ ಜಾರಿಯಾಗಿತ್ತು. ಆದರೆ ನಾವು ಕೋರ್ಟ್‌‌ಗೆ ಹಾಜರಾಗದಿರಲು ನಿರ್ಧರಿಸಿದ್ದೇವೆ ಎಂದು ಪ್ರಕರಣದ ಪ್ರಮುಖ ಆರೋಪಿ, ಮಹದಾಯಿ ಹೋರಾಟಗಾರ ಲೋಕನಾಥ ಹೆಬಸೂರ ಪ್ರತಿಕ್ರಿಯೆ ನೀಡಿದ್ದಾರೆ.

ಇಷ್ಟಕ್ಕೂ ಇವರಿಗೆಲ್ಲಾ ಸಮನ್ಸ್ ಜಾರಿಗೆಯಾಗಿದ್ದು ಏಕೆ?

ಸರ್ಕಾರ ಎಲ್ಲ‌ ಕೇಸ್ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದರೆ 56 ಕೇಸ್‌ಗಳ ಪೈಕಿ 51 ಮಾತ್ರವೇ ವಾಪಸ್ ಪಡೆದಿತ್ತು. ಉಳಿದವು ಪೆಂಡಿಂಗ್​ ಇವೆ. ಉಳಿದ ಐದು ಕೇಸುಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಅವುಗಳಿಗೆ ಸಂಬಂಧಿಸಿ ಈಗ ಸಮನ್ಸ್ ಬಂದಿವೆ ಎಂದು ಸ್ವತಃ ಹೋರಾಟಗಾರ ಲೋಕನಾಥ ಹೆಬಸೂರ ತಿಳಿಸಿದ್ದಾರೆ. ಇದೇ ಡಿಸೆಂಬರ್ 13ಕ್ಕೆ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಇದೆ. ಅಷ್ಟರೊಳಗೆ ಸರ್ಕಾರ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಬೇಕು. ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್, ಸಿಎಂ ಬೊಮ್ಮಾಯಿಗೆ ಕಂಟಕ, ಕೋನರೆಡ್ಡಿ ಹೇಳೋದೇನು?

Published On - 1:07 pm, Tue, 7 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ