AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ಈ ಮಾರ್ಗದ ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ

ಸಕಲೇಶಪುರ ಟು ಸುಬ್ರಹ್ಮಣ್ಯ ಮಾರ್ಗದಲ್ಲಿ ನಡೆಯುತ್ತಿರುವ ವಿದ್ಯುದ್ದೀಕರಣ ಕಾರ್ಯದಿಂದಾಗಿ, ನೈಋತ್ಯ ರೈಲ್ವೆ ನವೆಂಬರ್ 2 ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ 4 ಗಂಟೆಗಳ ಕಾಲ ಲೈನ್ ಬ್ಲಾಕ್ ಘೋಷಿಸಿದೆ. ಇದರಿಂದ ಯಶವಂತಪುರ-ಮಂಗಳೂರು, ಕಾರವಾರ ಸೇರಿ ಹಲವು ಪ್ರಮುಖ ರೈಲು ಸೇವೆಗಳ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ! ಈ ಮಾರ್ಗದ ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 24, 2025 | 6:18 PM

Share

ಹುಬ್ಬಳ್ಳಿ, ಅಕ್ಟೋಬರ್​ 24: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ನೈಋತ್ಯ ರೈಲ್ವೆ (South Western Railway) ನವೆಂಬರ್ 2 ರಿಂದ ಡಿಸೆಂಬರ್ 15 ರ ವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು ರೈಲು ಸೇವೆಗಳ (train services) ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ.

ಯಾವೆಲ್ಲಾ ರೈಲುಗಳ ಅವಧಿ ವಿಸ್ತರಣೆ?

  • ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್​​ಪ್ರೆಸ್ ರೈಲು ಮೊದಲು ನವೆಂಬರ್​​ 01 ರವರೆಗೆ ರದ್ದುಗೊಂಡಿತ್ತು. ಇದೀಗ ನವೆಂಬರ್​​ 08 ರಿಂದ ಡಿಸೆಂಬರ್​ 13ರ ವರೆಗೆ ರದ್ದುಗೊಳ್ಳಲಿದೆ.

ನೈಋತ್ಯ ರೈಲ್ವೆ ಟ್ವೀಟ್​​

  • ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್​ಪ್ರೆಸ್ ರೈಲು ಮೊದಲು ನವೆಂಬರ್​ 02 ರ ವರೆಗೆ ರದ್ದುಗೊಂಡಿತ್ತು. ಇದೀಗ ನವೆಂಬರ್​ 09 ರಿಂದ ಡಿಸೆಂಬರ್​ 14ರ ವರೆಗೆ ರದ್ದುಗೊಳ್ಳಲಿದೆ.
  • ರೈಲು ಸಂಖ್ಯೆ 16575 ಯಶವಂತಪುರ–ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್​ಪ್ರೆಸ್ ಮೊದಲು ಅಕ್ಟೋಬರ್​​ 30ರ ವರೆಗೆ ರದ್ದುಗೊಂಡಿತ್ತು. ಈಗ ನವೆಂಬರ್​ 02 ರಿಂದ ಡಿಸೆಂಬರ್​​ 14ರ ವರೆಗೆ ರದ್ದುಗೊಳ್ಳಲಿದೆ.
  • ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್​ಪ್ರೆಸ್ ಮೊದಲು ಅಕ್ಟೋಬರ್​ 30ರ ವರೆಗೆ ರದ್ದುಗೊಂಡಿತ್ತು. ಈಗ ನವೆಂಬರ್ 03 ರಿಂದ ಡಿಸೆಂಬರ್​ 15ರ ವರೆಗೆ ರದ್ದುಗೊಳ್ಳಲಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು

  • ರೈಲು ಸಂಖ್ಯೆ 16515 ಯಶವಂತಪುರ–ಕಾರವಾರ ಟ್ರೈ-ವೀಕ್ಲಿ ಎಕ್ಸ್​​ಪ್ರೆಸ್ ಮೊದಲು ಅಕ್ಟೋಬರ್​ 31 ರ ವರೆಗೆ ರದ್ದುಗೊಂಡಿತ್ತು. ಈಗ ನವೆಂಬರ್ 03 ರಿಂದ ಡಿಸೆಂಬರ್​ 15ರ ವರೆಗೆ ರದ್ದುಗೊಳ್ಳಲಿದೆ.
  • ರೈಲು ಸಂಖ್ಯೆ 16516 ಕಾರವಾರ–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್​ಪ್ರೆಸ್ ಮೊದಲು ಅಕ್ಟೋಬರ್​ 01ರ ವರೆಗೆ ರದ್ದುಗೊಂಡಿತ್ತು. ಈಗ ನವೆಂಬರ್ 04 ರಿಂದ ಡಿಸೆಂಬರ್​ 16ರ ವರೆಗೆ ರದ್ದುಗೊಳ್ಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು
ಚಿತ್ರದುರ್ಗ ಬಸ್ ದುರಂತ: 42 ಶಾಲಾ ಮಕ್ಕಳು ಪವಾಡಸದೃಶವಾಗಿ ಪಾರು
ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್
ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್
ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?
ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು?
ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಅದ್ದೂರಿ ಸ್ವಾಗತ
ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಅದ್ದೂರಿ ಸ್ವಾಗತ
ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್
ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್