AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು

ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್(Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಹೌದು, ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ.

ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 04, 2024 | 5:17 PM

Share

ಹುಬ್ಬಳ್ಳಿ, ಆ.04: ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್(Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ. ಈ ಹಿನ್ನಲೆ ಅನುಮತಿ ಇಲ್ಲದೆ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಶವ ಬಳಸಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ಮೂಲಕ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಮೃತನ ಕುಟುಂಬಸ್ಥರಿಗೆ ಒತ್ತಡ

ಹೌದು, ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಕಿಮ್ಸ್ ಅಧಿಕಾರಿಗಳು ಮೃತನ ಕುಟುಂಬಸ್ಥರಿಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹತಾವುಲ್ಲಾ, ಕಳೆದ 15 ದಿನದಿಂದ ಮನೆಗೆ ಬಂದಿರಲಿಲ್ಲ. ಇತ್ತ ಆತನ ಕುಟುಂಬ ನಾಪತ್ತೆಯಾಗಿದ್ದವನಿಗಾಗಿ ಹುಡುಕಾಟ ನಡೆಸಿದ್ದರು. ಅದರಂತೆ ಜುಲೈ 27 ರಂದು ವಿದ್ಯಾನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಉಣಕಲ್​ನ ಸುಭಾನಿ ನಗರದ ಮೃತ ವ್ಯಕ್ತಿ ಹತಾವುಲ್ಲಾ ಖಾನ್ (40) ಪತ್ತೆಯಾಗಿದ್ದ.

ಇದನ್ನೂ ಓದಿ:ಹುಬ್ಬಳ್ಳಿ ಕಿಮ್ಸ್​ನಲ್ಲಿ ರೋಗಿಯೊಬ್ಬನ ಹುಚ್ಚಾಟ; ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನ

ಶವ ನೀಡಲು ಹಿಂದೇಟು

ಬಳಿಕ ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ‌ ಸೇರಿಸಿದ್ದರು. ಆದರೆ, ಅಂದು ಸ‌ಂಜೆಯೇ ಹತಾವುಲ್ಲಾ ಮೃತಪಟ್ಟಿದ್ದ. ಈ ವಿಷಯ‌ವನ್ನು ಕಿಮ್ಸ್ ಮತ್ತು ಪೊಲೀಸ್ ಸಿಬ್ಬಂದಿ ಮನೆಯವರಿಗೆ ತಿಳಿಸಿಲ್ಲ. ಶನಿವಾರ ಕಿಮ್ಸ್ ಆಸ್ಪತ್ರೆಯಲ್ಲಿ ಪತಿ ಇರುವ ಬಗ್ಗೆ ಮಾಹಿತಿ ತಿಳಿದು ಆಸ್ಪತ್ರೆ ಬಂದಾಗ ಸಾವಿನ ಮಾಹಿತಿ ಲಭ್ಯವಾಗಿದೆ. ಆದರೆ, ಸಿಬ್ಬಂದಿ ಶವ ನೀಡಲು ಹಿಂದೇಟು ಹಾಕುತ್ತಿದ್ದಾರೆ.

ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಮೃತದೇಹ ನೀಡಿದ ಕಿಮ್ಸ್ ಸಿಬ್ಬಂದಿ

ಇನ್ನು ಈ ಕುರಿತು ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಸಿಬ್ಬಂದಿಗಳು ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.  ಕಿಮ್ಸ್ ಆಸ್ಪತ್ರೆಯ‌ ಮೆಡಿಕಲ್ ಕಾಲೇಜಿನಲ್ಲಿದ್ದ ಹತಾವುಲ್ಲಾ ಖಾನ್‌ ಮೃತದೇಹ ನೀಡಲಾಗಿದೆ. ಕೆಲ‌ಕಾಲ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!