Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು

ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್(Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಹೌದು, ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ.

ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 04, 2024 | 5:17 PM

ಹುಬ್ಬಳ್ಳಿ, ಆ.04: ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್(Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ. ಈ ಹಿನ್ನಲೆ ಅನುಮತಿ ಇಲ್ಲದೆ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಶವ ಬಳಸಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ಮೂಲಕ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಮೃತನ ಕುಟುಂಬಸ್ಥರಿಗೆ ಒತ್ತಡ

ಹೌದು, ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಕಿಮ್ಸ್ ಅಧಿಕಾರಿಗಳು ಮೃತನ ಕುಟುಂಬಸ್ಥರಿಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹತಾವುಲ್ಲಾ, ಕಳೆದ 15 ದಿನದಿಂದ ಮನೆಗೆ ಬಂದಿರಲಿಲ್ಲ. ಇತ್ತ ಆತನ ಕುಟುಂಬ ನಾಪತ್ತೆಯಾಗಿದ್ದವನಿಗಾಗಿ ಹುಡುಕಾಟ ನಡೆಸಿದ್ದರು. ಅದರಂತೆ ಜುಲೈ 27 ರಂದು ವಿದ್ಯಾನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಉಣಕಲ್​ನ ಸುಭಾನಿ ನಗರದ ಮೃತ ವ್ಯಕ್ತಿ ಹತಾವುಲ್ಲಾ ಖಾನ್ (40) ಪತ್ತೆಯಾಗಿದ್ದ.

ಇದನ್ನೂ ಓದಿ:ಹುಬ್ಬಳ್ಳಿ ಕಿಮ್ಸ್​ನಲ್ಲಿ ರೋಗಿಯೊಬ್ಬನ ಹುಚ್ಚಾಟ; ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನ

ಶವ ನೀಡಲು ಹಿಂದೇಟು

ಬಳಿಕ ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ‌ ಸೇರಿಸಿದ್ದರು. ಆದರೆ, ಅಂದು ಸ‌ಂಜೆಯೇ ಹತಾವುಲ್ಲಾ ಮೃತಪಟ್ಟಿದ್ದ. ಈ ವಿಷಯ‌ವನ್ನು ಕಿಮ್ಸ್ ಮತ್ತು ಪೊಲೀಸ್ ಸಿಬ್ಬಂದಿ ಮನೆಯವರಿಗೆ ತಿಳಿಸಿಲ್ಲ. ಶನಿವಾರ ಕಿಮ್ಸ್ ಆಸ್ಪತ್ರೆಯಲ್ಲಿ ಪತಿ ಇರುವ ಬಗ್ಗೆ ಮಾಹಿತಿ ತಿಳಿದು ಆಸ್ಪತ್ರೆ ಬಂದಾಗ ಸಾವಿನ ಮಾಹಿತಿ ಲಭ್ಯವಾಗಿದೆ. ಆದರೆ, ಸಿಬ್ಬಂದಿ ಶವ ನೀಡಲು ಹಿಂದೇಟು ಹಾಕುತ್ತಿದ್ದಾರೆ.

ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಮೃತದೇಹ ನೀಡಿದ ಕಿಮ್ಸ್ ಸಿಬ್ಬಂದಿ

ಇನ್ನು ಈ ಕುರಿತು ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಸಿಬ್ಬಂದಿಗಳು ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.  ಕಿಮ್ಸ್ ಆಸ್ಪತ್ರೆಯ‌ ಮೆಡಿಕಲ್ ಕಾಲೇಜಿನಲ್ಲಿದ್ದ ಹತಾವುಲ್ಲಾ ಖಾನ್‌ ಮೃತದೇಹ ನೀಡಲಾಗಿದೆ. ಕೆಲ‌ಕಾಲ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು