AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು, ಸಂವಿಧಾನ ನಮಗಲ್ಲ ಅಂದ್ರೆ, ಅವರು ಈ ದೇಶದ ನಾಗರಿಕರಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

ಮತಾಂಧರು ನಿನ್ನೆ ಗ್ರಾಫಿಕ್ ಎನಿಮೇಶನ್ ಇಟ್ಟುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಇಗಾಗಲೇ ನಾವು ಎಲ್ಲ ವಿವರ ಪಡೆದಿದ್ದೇವೆ. ಯಾರೇ ಇದ್ರೂ ಅವರನ್ನು ಒಳಗಡೆ ಹಾಕಬೇಕು.

ಕಾನೂನು, ಸಂವಿಧಾನ ನಮಗಲ್ಲ ಅಂದ್ರೆ, ಅವರು ಈ ದೇಶದ ನಾಗರಿಕರಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Apr 17, 2022 | 9:09 PM

Share

ಹುಬ್ಬಳ್ಳಿ: ನಿನ್ನೆ ಒಂದು ದೊಡ್ಡ ಗುಂಪು ಕಾನೂನು (Law) ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನ ಜಕಂ ಮಾಡಿದ್ದಾರೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದ್ದು, ಇದನ್ನು ನಮ್ಮ ಸರ್ಕಾರ ಸಹಿಸೋದಿಲ್ಲ ಎಂದು ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಮಾಬ್​ನಲ್ಲಿ ಏನೋ ಮಾಡಿದೀವಿ ಅಂದ್ರೆ ನಡೆಯೋದಿಲ್ಲ. ಕಾನೂನು, ಸಂವಿಧಾನ ನಮಗಲ್ಲ ಅಂದ್ರೆ, ಅವರು ಈ ದೇಶದ ನಾಗರಿಕರಲ್ಲ ಅನ್ನೋ ಅನುಮಾನ ಬರತ್ತೆ. ಇದರ ಹಿಂದೆ ಮತೀಯ ಸಂಘಟನೆಗಳಿದ್ರೆ ಅದು ಹೊರಗೆ ಬರತ್ತೆ. ಕಂಪ್ಲೇಟ್ ಕೊಟ್ಟು ಕೆಲವರು ವಾಪಸ್ ಬಂದಿದ್ದಾರೆ. ಯಾರೇ ಇದ್ರೂ ಪೊಲೀಸರು ಕ್ರಮ ಕೈಗೊಳುತ್ತಾರೆ. ಇಲ್ಲಿ ಇಂಟಲಿಜೆನ್ಸ್ ಫೆಲ್ಯೂವರ್ ಏನ್ ಆಗಿಲ್ಲ‌. ಮತೀಯ ಸಂಘಟನೆಗಳನ್ನ ಹದ್ದ ಬಸ್ತಿನಲ್ಲಿಡೋ ಅವಶ್ಯಕತೆ ಇದೆ. ಹಿಂದಿನ ಸರ್ಕಾರ ಅಂತಹ ಸಂಘಟನೆಗಳನ್ನು ತುಷ್ಟೀಕರಣ ಮಾಡಿವೆ‌. ಕಾಂಗ್ರೆಸ್​ನವರಿಗೆ ಬೇರೆ ಏನೂ ಇಸ್ಯೂ ಇಲ್ಲ‌. ಅವರು ಹುಬ್ಬಳ್ಳಿಯಲ್ಲಿ ಇಂತಹ ಘಟನೆ ನಡೆದರೂ ಖಂಡಿಸೋ ಸೌಜನ್ಯ ಇಲ್ಲ. ಡಿಜೆ ಕೆಜಿ ಹಳ್ಳಿಗೂ ಸಾಮ್ಯತೆ ಇದೆ ಎಂದು ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ  ಹೇಳಿದ್ದಾರೆ.

ಕೇಂದ್ರದ ಗಣಿ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮತಾಂಧರು ನಿನ್ನೆ ಗ್ರಾಫಿಕ್ ಎನಿಮೇಶನ್ ಇಟ್ಟುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಇಗಾಗಲೇ ನಾವು ಎಲ್ಲ ವಿವರ ಪಡೆದಿದ್ದೇವೆ. ಯಾರೇ ಇದ್ರೂ ಅವರನ್ನು ಒಳಗಡೆ ಹಾಕಬೇಕು. ಕಾರ್ಪೋರೇಟ್ ಇರಲಿ, ಅವರ ಮನೆಯವರಿರಲಿ, ಯಾರೇ ಇದ್ರೂ ಒಳಗಡೆ ಹಾಕಬೇಕು. ಅತ್ಯಂತ ಕಠಿಣ ಕಾನೂನು ಕ್ರಮ ನಾನು ಕೈಗೊಳುತ್ತೇನೆ. ಪೊಲೀಸ್ ಠಾಣೆ ಬಲಪಡಿಸೋ ಕೆಲಸ ಮಾಡ್ತೀವಿ. ಪೂರ್ತಿ ತಯಾರಿ ಮಾಡಿಕೊಂಡು ಮತೀಯ ಸಂಘಟನೆ ಬ್ಯಾನ್ ಮಾಡ್ತೀವಿ ಎಂದು ಹೇಳಿದರು.

ಸೆಕ್ಯೂರ್ ಆಸ್ಪತ್ರೆಗೆ ಭೇಟಿ ನಿಡಿದ ಸಚಿವ ಆರಗ ಜ್ಞಾನೇಂದ್ರ, ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿರುವ ಇನ್ಸ್ಪೆಕ್ಟರ್ ಕಾಡದೇವರಮಠ ಮತ್ತು ಪೇದೆ ಗುರುಪಾದಪ್ಪ ಸ್ವಾದಿ ಆರೋಗ್ಯ ವಿಚಾರಿಸಿದ್ದಾರೆ. ಎ.ಡಿ ಜೀಪಿ ಪ್ರತಾಪ್ ರೆಡ್ಡಿ (ಕಾನೂನು ಮತ್ತು ಸುವ್ಯವಸ್ಥೆ) ಜೊತೆ ದುರ್ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯ ಕೊಠಡಿಯಲ್ಲೇ ಪ್ರತಾಪ್ ರೆಡ್ಡಿ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೀಟಿಂಗ್ ಮಾಡಿದ್ದಾರೆ.

ಹುಬ್ಬಳ್ಳಿ ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಪ್ರಹ್ಲಾದ್ ಜೋಶಿ, ಆರಗ ಜ್ಞಾನೇಂದ್ರ ಭೇಟಿ ಹಿನ್ನೆಲೆ ಜನರು ಸೇರಿದ್ದರು. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆ ಪೊಲೀಸರು ಜನರನ್ನು ಕಳಿಸಿದ್ದಾರೆ. ನಿನ್ನೆ ರಾತ್ರಿ ಹನುಮಂತನ ದೇವಸ್ಥಾನದ ಮೇಲೆ ಕಲ್ಲು ತೂರಿದ್ದು, ಪ್ರಹ್ಲಾದ್ ಜೋಶಿ, ಆರಗ ಜ್ಞಾನೇಂದ್ರ, ಶೆಟ್ಟರ್ ದೇಗುಲ ಪರಿಶೀಲಿಸಿದ್ದಾರೆ. ಹನುಮಂತ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಆರಗ ಜ್ಞಾನೇಂದ್ರ, ಬಳಿಕ ಹಳೇ ಹುಬ್ಬಳ್ಳಿ ಠಾಣೆಗೆ ಭೇಟಿ ನೀಡಿ ಹು-ಧಾ ನಗರ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.

ಎಲ್ಲೋ ಗಲಭೆಗಳಾದರೆ ಗೃಹ ಸಚಿವ, ಸಿಎಂ ಜವಾಬ್ದಾರರೇ?

ಚಿತ್ರದುರ್ಗ: ಆ ರೀತಿಯ ಘಟನೆಗಳು ನಡೆಯಬಾರದು. ಗಲಭೆ ತಡೆಯಲು ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಎಲ್ಲೋ ಗಲಭೆಗಳಾದರೆ ಗೃಹ ಸಚಿವ, ಸಿಎಂ ಜವಬ್ದಾರರೇ ಎಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಗಲಭೆಗೆ ಯಾರೇ ಕಾರಣ ಆಗಿದ್ದರೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿ. ಹೊಸಪೇಟೆಯಲ್ಲಿ 2 ದಿನದ ಬಿಜೆಪಿ ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಲಾಗಿದೆ. ಮುಂಬರುವ ಚುನಾವಣೆ ತಂತ್ರಗಾರಿಕೆ ಬಗ್ಗೆ ಚರ್ಚೆ ಆಗಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಚರ್ಚೆ ಮಾಡಿದ್ದು, ಮತ್ತೆ ರಾಜ್ಯದಾದ್ಯಂತ ನಾವು ಪ್ರವಾಸ ಮಾಡುತ್ತೇವೆ. 150ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತೇವೆ. ಮೋದಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:

ಪುನೀತ್ ಧ್ವನಿಯಲ್ಲಿಯೇ ಪ್ರದರ್ಶನ ಕಾಣಲಿದೆ ‘ಜೇಮ್ಸ್’; ಹೇಗೆ? ಎಂದಿನಿಂದ? ಅಪ್ಪು ಅಭಿಮಾನಿಗಳಿಗಿದು ಖುಷಿಯ ವಿಚಾರ

Published On - 8:35 pm, Sun, 17 April 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?