AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ

Bellary Jeans: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ ಎಂದು ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ ಎಂದಿದ್ದಾರೆ.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಜೋಶಿ ವಾಗ್ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 26, 2023 | 1:48 PM

Share

ಲೋಡ್​ ಶೆಡ್ಡಿಂಗ್​ನಿಂದಾಗಿ ಬಳ್ಳಾರಿ ಜೀನ್ಸ್​ ಉದ್ಯಮ (Bellary Jeans) ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ. “ಸುಳ್ಳು ಹೇಳುವುದು (lying) ಕಾಂಗ್ರೆಸಿಗರ ಜೀನ್ಸ್ (Congress Gene) ನಲ್ಲೇ ಇದೆ ಎಂಬಂತೆ, ದೂರದೃಷ್ಟಿಯ ಯೋಚನೆ ಇಲ್ಲದೆ ಅರ್ಥಹೀನ ಯೋಜನೆಗಳ ಘೋಷಿಸಿ, ಅದನ್ನು ಪೂರೈಸಲಾಗದೆ ಇಂದು ಇಡೀ ಕರ್ನಾಟಕವನ್ನು ದಿವಾಳಿ ಮಾಡುವತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ (Karnataka congress) ಸಾಗುತ್ತಿದೆ.

ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ.

ಬಳ್ಳಾರಿಯಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿಯನ್ನು ಬಿಟ್ಟು ಹೋದರು. ಜೀನ್ಸ್ ಉದ್ಯಮಕ್ಕೆ ನೆರವು ನೀಡುವ ಭರವಸೆ ನೀಡಿದ ರಾಹುಲ್ ಗಾಂಧಿ, ಈ ಉದ್ಯಮವನ್ನೇ ರಾಜ್ಯ ಕಾಂಗ್ರೆಸ್ಸಿಗರ ಮೂಲಕ ಸರ್ವನಾಶ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಟ್ಟಿ ಭಾಗ್ಯ ಘೋಷಿಸಿದ ಕಾಂಗ್ರೆಸ್, ಪಂಜಾಬ್ ರಾಜ್ಯದ ಸ್ಥಿತಿಯನ್ನೇ ರಾಜ್ಯಕ್ಕೂ ತರುವ ಸಂಕಲ್ಪ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿರುವ ಪ್ರಹ್ಲಾದ್​ ಜೋಶಿಯವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Also Read: ಕಾಂಗ್ರೆಸ್ ಸರ್ಕಾರ ಮತ್ತೊಂದು ಗ್ಯಾರಂಟಿ ಈಡೇರಿಸಲೇ ಬೇಕಾಗಿದೆ! ಅದಕ್ಕೆ ಬೇಕಿದೆ ಜಸ್ಟ್​​ 5 ಸಾವಿರ ಕೋಟಿ! ಇದನ್ನ ಸ್ವತಃ ರಾಹುಲ್​ ಗಾಂಧಿಯೇ ಘೋಷಿಸಿದ್ದರು!

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:47 pm, Thu, 26 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ