AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CEIR: ಮೊಬೈಲ್ ಕಳೆದುಕೊಂಡವರು ಇ-ಸ್ಪಂದನ ಮೂಲಕ ದೂರು ಸಲ್ಲಿಸಿ : ಹುಬ್ಬಳ್ಳಿ ಧಾರವಾಡ ಜನತೆಗೆ ಕರೆಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಿದ ಅವಳಿ ನಗರದ ಪೊಲೀಸರಿಗೆ ಅಭಿನಂದನೆ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೊಬೈಲ್ ಕಳೆದುಕೊಂಡ ಜನರು ಇ-ಸ್ಪಂದನ ವ್ಯವಸ್ಥೆಯ ಮೂಲಕ ದೂರು ಸಲ್ಲಿಸುವಂತೆ ಕರೆ ನೀಡಿದ್ದಾರೆ.

CEIR: ಮೊಬೈಲ್ ಕಳೆದುಕೊಂಡವರು ಇ-ಸ್ಪಂದನ ಮೂಲಕ ದೂರು ಸಲ್ಲಿಸಿ : ಹುಬ್ಬಳ್ಳಿ ಧಾರವಾಡ ಜನತೆಗೆ ಕರೆಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮೊಬೈಲ್ ಕಳೆದುಕೊಂಡವರು ಇ ಸ್ಪಂದನದ ಮೂಲಕ ದೂರು ಸಲ್ಲಿಸಿ : ಸಚಿವ ಪ್ರಲ್ಹಾದ್ ಜೋಶಿ
ಸಾಧು ಶ್ರೀನಾಥ್​
|

Updated on:Apr 07, 2023 | 8:19 PM

Share

ಧಾರವಾಡ: ಕಳ್ಳತನವಾಗಿದ್ದ ಒಂದು ಕೋಟಿ ಮೌಲ್ಯದ ಮೊಬೈಲ್ ಫೋನ್ (Mobile Phone) ಗಳನ್ನು ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಜನರಿಗೆ ವಾಪಸ್ ಕೊಡಿಸುವಲ್ಲಿ ಪೊಲೀಸರ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದು ಹೋಗಿದ್ದ ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ 400 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿದ್ದ ಅವಳಿನಗರದ (Hubballi and Dharwad) ಪೊಲೀಸರು, ಅವುಗಳನ್ನ ಇಂದು ವಾರಸುದಾರರಿಗೆ ಹಿಂದಿರುಗಿಸಿದರು. ಪೊಲೀಸರ ಕಾರ್ಯವನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಸಮಾಜಕ್ಕೆ ಪೊಲೀಸರ ಇಂತಹ ಕಾರ್ಯ ಅಗತ್ಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ

ಮೊಬೈಲ್ ಕಳೆದುಕೊಂಡವರು ಇ – ಸ್ಪಂದನ ಹಾಗೂ ಸಿ ಐ ಇ ಆರ್ ಮೂಲಕ ( (Mobile Theft and Central Equipment Identity Register) ದೂರು ಸಲ್ಲಿಸಿದ್ದರು. ಅವಳಿ ನಗರದ ಡಿ ಜಿ ಹಾಗೂ ಐ ಜಿ ಪಿ ಪ್ರವೀಣ್ ಸೂದ್ ಅವರ ಸಮ್ಮುಖದಲ್ಲಿ ವಾರಸುದಾರರು ಕಳೆದುಹೋದ ತಮ್ಮ ಫೋನ್ ಗಳನ್ನು ವಾಪಸ್ ಪಡೆದುಕೊಂಡರು.

ಸಿ ಇ ಐ ಆರ್ ಕೇಂದ್ರ ದೂರಸಂಪರ್ಕ ಇಲಾಖೆಯ ಯೋಜನೆಯಾಗಿದ್ದು ಕಳೆದು ಹೋದ ಮೊಬೈಲ್ ಡಿವೈಸ್​​​ನ ಐ ಎಂ ಇ ಐ ಸಂಖ್ಯೆಯ ಸಹಾಯದಿಂದ ಅದನ್ನು ಪತ್ತೆ ಮಾಡಬಹುದಾಗಿದೆ. ಇ – ಸ್ಪಂದನದ ಮೂಲಕ ಸಾರ್ವಜನಿಕರು ತಮ್ಮ ದೂರು ಸಲ್ಲಿಸಬಹುದಾಗಿದ್ದು, ಶೀಘ್ರದಲ್ಲಿ ಅವುಗಳಿಗೆ ಸ್ಪಂದಿಸುವ ವ್ಯವಸ್ಥೆ ತರಲಾಗಿದೆ.

Also Read: ಮೊಬೈಲ್ ಕಳೆದುಕೊಂಡವರು ಸೀದಾ ಈ ವೆಬ್​ಸೈಟ್​​ಗೆ ಭೇಟಿ ನೀಡ್ತಿದಾರೆ! ತಡವೇಕೆ? ಮೊಬೈಲ್ ಕಳೆದಿದ್ದರೆ ನೀವೂ ಹೀಗೆ ಮಾಡಿ!

ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಿದ ಅವಳಿ ನಗರದ ಪೊಲೀಸರಿಗೆ ಅಭಿನಂದನೆ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೊಬೈಲ್ ಕಳೆದುಕೊಂಡ ಜನರು ಇ ಸ್ಪಂದನದ ಮೂಲಕ ದೂರು ಸಲ್ಲಿಸುವಂತೆ ಕರೆ ನೀಡಿದ್ದಾರೆ.  Central Equipment Identity Register -CEIR   ವೆಬ್​ ಸೈಟ್​​ಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಅಥವಾ 02-8277952828 ಈ ಮೊಬೈಲ್​​ ಸಂಖ್ಯೆಗೆ Hi ಎಂದು ವಾಟ್ಸಪ್​ ಸಂದೇಶ ಕಳುಹಿಸಿ ಸಾರ್ವಜನಿಕರು ದೂರ ದಾಖಲಿಸಬಹುದಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Fri, 7 April 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ