AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್​ ಜಿಹಾದ್​ದಿಂದ ಹಿಂದೂ ಯುವತಿಯರ ರಕ್ಷಣೆಗಾಗಿ ತೆರೆದಿರುವ ಶ್ರೀರಾಮಸೇನೆ ಸಹಾಯವಾಣಿಗೆ 400 ಕರೆಗಳು

ಲವ್​ ಜಿಹಾದ್​ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಆರಂಭಿಸಿರುವ ಸಹಾಯವಾಣಿ ಕೇಂದ್ರಕ್ಕೆ ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

ಲವ್​ ಜಿಹಾದ್​ದಿಂದ ಹಿಂದೂ ಯುವತಿಯರ ರಕ್ಷಣೆಗಾಗಿ ತೆರೆದಿರುವ ಶ್ರೀರಾಮಸೇನೆ ಸಹಾಯವಾಣಿಗೆ 400 ಕರೆಗಳು
ಶ್ರೀರಾಮ ಸೇನೆ ಮುಖಂಡ, ಸಹಾಯವಾಣಿ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on:Jun 02, 2024 | 10:19 AM

Share

ಹುಬ್ಬಳ್ಳಿ, ಜೂನ್​ 02: ರಾಜ್ಯದಲ್ಲಿ ಲವ್​ ಜಿಹಾದ್​ಗೆ (Love Jihad) ಸಿಲುಕಿದ ಹಿಂದೂ (Hindu) ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ (Sriram Sene) ಸಹಾಯವಾಣಿ (Sri Rama Sena helpline) ಕೇಂದ್ರ ಆರಂಭಿಸಿದೆ. ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

ಲವ್ ಜಿಹಾದ್‌ನಲ್ಲಿ ಸಿಲುಕಿದ ಹಿಂದೂ ಯುವತಿಯರ ರಕ್ಷಣೆಗೆ ಮೇ 29 ರಂದು ಶ್ರೀರಾಮಸೇನೆ ಸಹಾಯವಾಣಿ ಆರಂಭಸಿತ್ತು. ನಾಲ್ಕು ದಿನಗಳಲ್ಲಿ 400ಕ್ಕೂ ಅಧಿಕ ಕರೆಗಳು ಬಂದಿವೆ. 37 ಜನ ತಾಯಂದಿರು, 42 ಪ್ರೋತ್ಸಾಹಕ ಕತೆಗಳು, 52 ಜನ ಲವ್ ಜಿಹಾದ್​ನಲ್ಲಿ ಸಿಲುಕಿರುವ ಸಂತ್ರಸ್ತೆಯರು ಕರೆ ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕ್ಕೆ ಅಭಿನಂದಿಸಿ ಮಹಿಳೆಯರು, ವಕೀಲರು ಮತ್ತು ಕೆಲ ಮಾಧ್ಯಮದವರೂ ಕರೆ ಮಾಡಿ ಒಳ್ಳೆ ಕಾರ್ಯ ಮಾಡುತ್ತಿದ್ದೀರಿ ಎಂದು ಹಾರೈಸುತ್ತಿದ್ದಾರೆ. ಆದರೆ ಈ ಮಧ್ಯೆ 17 ಬೆದರಿಕೆ ಕರೆಗಳು ಕೂಡ ಬಂದಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ

ಅಲ್ಲದೆ, ಸಹಾಯವಾಣಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದನ್ನೂ ಕೂಡ ರಿಪೋರ್ಟ್​ ಮಾಡಿ ಬ್ಲಾಕ್​ ಮಾಡಿಸಿದ್ದಾರೆ. ಹೀಗೆ ಎಲ್ಲರೀತಿಯಿಂದಲೂ ನಮಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ನಮಗೆ ಸ್ಪಷ್ಟವಾಗುತ್ತಿದೆ, ನಮ್ಮ ಸಹಾಯವಾಣಿ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಸಹಾಯವಾಣಿಯಿಂದ ವಿರೋಧಗಳಿಗೆ ಎಚ್ಚರಿಕೆ ಮುಟ್ಟಿದೆ. ಇದರ ನಡುವೆಯೂ ನಮಗೆ ವ್ಯಾಪಕವಾದ ಸ್ಪಂದನೆ ಸಿಗುತ್ತಿದೆ ಎಂದರು.

ಬಾಗಲಕೋಟೆ ಮತ್ತು ಹುಬ್ಬಳ್ಳಿ ಜಿಲ್ಲಾ ಕೇಂದ್ರಗಳಲ್ಲಿ ಮೇ 29 ರಂದು ಶ್ರೀರಾಮ ಸೇನೆಯ ಜಿಲ್ಲಾ ಘಟಕದ ವತಿಯಿಂದ ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ಸಹಾಯವಾಣಿಯನ್ನು ಆರಂಭಿಸಲಾಯಿತು. ಈ ಸಹಾಯವಾಣಿಯು 9090443444 ದಿನದ 24X7 ಕಾರ್ಯ ನಿರ್ವಹಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:25 am, Sun, 2 June 24

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ