AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ

ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳನ್ನು ಉದ್ಯೋಗದಿಂದ ಬಿಡುಗಡೆ ಮಾಡಲಾಗಿದೆ.

1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ
1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ
TV9 Web
| Edited By: ಸಾಧು ಶ್ರೀನಾಥ್​|

Updated on:Sep 27, 2022 | 2:37 PM

Share

ಧಾರವಾಡ: ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳನ್ನು ಉದ್ಯೋಗದಿಂದ ಬಿಡುಗಡೆ ಮಾಡಲಾಗಿದೆ. ಈ ಮೂವರೂ ಕಾನ್ಸ್​​​ಟೇಬಲ್​ಗಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್​ ಜಗಲಾಸರ ಆದೇಶ ಹೊರಡಿಸಿದ್ದಾರೆ. ಗೈರು ಹಾಜರಿಗೆ ಸಿಬ್ಬಂದಿ ಸೂಕ್ತವಾದ ಕಾರಣ ನೀಡದ ಹಿನ್ನೆಲೆ ಅವರನ್ನು ಸೇವೆಯಿಂದ ಮುಕ್ತಗೊಳಿಸಲಾಗಿದೆ. ಕಲಘಟಗಿ ಠಾಣೆ ಪೊಲೀಸ್ ಕಾನ್ಸ್​​ಟೇಬಲ್​ ಸಂತೋಷ್ ಭಂಗಿ, ಚನ್ನಬಸವ ಅಳ್ನಾವರ, ಮೈಲಾರ ದಾಸನಕೊಪ್ಪ ವಿರುದ್ಧ ಎಸ್​ಪಿ ಲೋಕೇಶ್ ಅವರು ಈ ಅನಿವಾರ್ಯ ಕ್ರಮ ಕೈಗೊಂಡಿದ್ದಾರೆ.

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ ಜೀವ: ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ನೆಲಮಂಗಲ: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ದಿವ್ಯ ನಿರ್ಲಕ್ಷ್ಯದಿಂದ ಭಾನುವಾರ ರಾಜಕಾಲುವೆಗೆ (Rajakaluve) ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಕಂಬಾಳು ಮೂಲದ ವೆಂಕಟೇಶ್ (31) ಮೃತ ದುರ್ದೈವಿ. ದಾಸರಹಳ್ಳಿ ಸಮೀಪದ ರುಕ್ಮಿಣಿನಗರ ಮುಖ್ಯರಸ್ತೆಯಲ್ಲಿ ವೆಂಕಟೇಶ್ ತೆರೆದ ರಾಜಕಾಲುವೆಯಲ್ಲಿ ಕಾಲು ಜಾರಿ ಬಿದ್ದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಟಿ.ದಾಸರಹಳ್ಳಿ ಬಿಬಿಎಂಪಿ ಕಛೇರಿ ಎದುರು ಶವವಿಟ್ಟು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ ಮಾಡುತ್ತಿದ್ದಾರೆ.

3 ತಿಂಗಳ ಹಿಂದೆ ರಾಜಕಾಲುವೆಯಲ್ಲಿನ ಊಳು ತೆಗೆಯುವ ಸಂದರ್ಭದಲ್ಲಿ ರಾಜಕಾಲುವೆಯ ಚಪ್ಪಡಿ ಕಲ್ಲುಗಳನ್ನು ತೆಗೆಯಲಾಗಿತ್ತು. ಕಾಮಗಾರಿ ಮುಗಿದ ಮೇಲೆ ಚಪ್ಪಡಿಗಳನ್ನು ಹಾಕದೇ ಬಿಬಿಎಂಪಿ ನೌಕರರು ಹಾಗೇ ಬಿಟ್ಟು ಹೋಗಿದ್ದರು. ಬಿಬಿಎಂಪಿಯ ಈ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿಯಾಗಿದ್ದಾನೆ.

Published On - 2:30 pm, Tue, 27 September 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ