AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ

ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳನ್ನು ಉದ್ಯೋಗದಿಂದ ಬಿಡುಗಡೆ ಮಾಡಲಾಗಿದೆ.

1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ
1 ವರ್ಷದಿಂದ ಕೆಲಸಕ್ಕೆ ಬಾರದ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳು ಕೆಲಸದಿಂದ ಬಿಡುಗಡೆ
TV9 Web
| Edited By: |

Updated on:Sep 27, 2022 | 2:37 PM

Share

ಧಾರವಾಡ: ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ಮೂವರು ಪೊಲೀಸ್​ ಕಾನ್ಸ್​​​ಟೇಬಲ್​ಗಳನ್ನು ಉದ್ಯೋಗದಿಂದ ಬಿಡುಗಡೆ ಮಾಡಲಾಗಿದೆ. ಈ ಮೂವರೂ ಕಾನ್ಸ್​​​ಟೇಬಲ್​ಗಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್​ ಜಗಲಾಸರ ಆದೇಶ ಹೊರಡಿಸಿದ್ದಾರೆ. ಗೈರು ಹಾಜರಿಗೆ ಸಿಬ್ಬಂದಿ ಸೂಕ್ತವಾದ ಕಾರಣ ನೀಡದ ಹಿನ್ನೆಲೆ ಅವರನ್ನು ಸೇವೆಯಿಂದ ಮುಕ್ತಗೊಳಿಸಲಾಗಿದೆ. ಕಲಘಟಗಿ ಠಾಣೆ ಪೊಲೀಸ್ ಕಾನ್ಸ್​​ಟೇಬಲ್​ ಸಂತೋಷ್ ಭಂಗಿ, ಚನ್ನಬಸವ ಅಳ್ನಾವರ, ಮೈಲಾರ ದಾಸನಕೊಪ್ಪ ವಿರುದ್ಧ ಎಸ್​ಪಿ ಲೋಕೇಶ್ ಅವರು ಈ ಅನಿವಾರ್ಯ ಕ್ರಮ ಕೈಗೊಂಡಿದ್ದಾರೆ.

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ ಜೀವ: ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ನೆಲಮಂಗಲ: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ದಿವ್ಯ ನಿರ್ಲಕ್ಷ್ಯದಿಂದ ಭಾನುವಾರ ರಾಜಕಾಲುವೆಗೆ (Rajakaluve) ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಕಂಬಾಳು ಮೂಲದ ವೆಂಕಟೇಶ್ (31) ಮೃತ ದುರ್ದೈವಿ. ದಾಸರಹಳ್ಳಿ ಸಮೀಪದ ರುಕ್ಮಿಣಿನಗರ ಮುಖ್ಯರಸ್ತೆಯಲ್ಲಿ ವೆಂಕಟೇಶ್ ತೆರೆದ ರಾಜಕಾಲುವೆಯಲ್ಲಿ ಕಾಲು ಜಾರಿ ಬಿದ್ದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಟಿ.ದಾಸರಹಳ್ಳಿ ಬಿಬಿಎಂಪಿ ಕಛೇರಿ ಎದುರು ಶವವಿಟ್ಟು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ ಮಾಡುತ್ತಿದ್ದಾರೆ.

3 ತಿಂಗಳ ಹಿಂದೆ ರಾಜಕಾಲುವೆಯಲ್ಲಿನ ಊಳು ತೆಗೆಯುವ ಸಂದರ್ಭದಲ್ಲಿ ರಾಜಕಾಲುವೆಯ ಚಪ್ಪಡಿ ಕಲ್ಲುಗಳನ್ನು ತೆಗೆಯಲಾಗಿತ್ತು. ಕಾಮಗಾರಿ ಮುಗಿದ ಮೇಲೆ ಚಪ್ಪಡಿಗಳನ್ನು ಹಾಕದೇ ಬಿಬಿಎಂಪಿ ನೌಕರರು ಹಾಗೇ ಬಿಟ್ಟು ಹೋಗಿದ್ದರು. ಬಿಬಿಎಂಪಿಯ ಈ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿಯಾಗಿದ್ದಾನೆ.

Published On - 2:30 pm, Tue, 27 September 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ