AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Human-snake conflict: ಮಾನವ-ಹಾವಿನ ಸಂಘರ್ಷ ಕಡಿಮೆ ಮಾಡಲು ಪಿಐಟಿ ಟ್ಯಾಗ್‌ ಮೊರೆ ಹೋದ ಕರ್ನಾಟಕ ಅರಣ್ಯ ಇಲಾಖೆ

ಮಾನವ-ಹಾವಿನ ಸಂಘರ್ಷ ಕಡಿಮೆ ಮಾಡಲು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮಹತ್ವದ ಅಧ್ಯಯನಕ್ಕೆ ಮುಂದಾಗಿದೆ. ಪ್ರಸ್ತುತ, ನಾಗರಹಾವು, ರಸೆಲ್ಸ್ ವೈಪರ್ ಮತ್ತು ಪಿಟ್ ವೈಪರ್‌ಗಳ ಕುರಿತು ಮೂರು ಖಾಸಗಿ ಕಾರ್ಯಯೋಜನೆಗಳ ಮುಖಾಂತರ ಕರ್ನಾಟಕ ಅರಣ್ಯ ಇಲಾಖೆಯು ಟೆಲಿಮೆಟ್ರಿಕ್ ಅಧ್ಯಯನಗಳನ್ನು ನಡೆಸುತ್ತಿವೆ.

Human-snake conflict: ಮಾನವ-ಹಾವಿನ ಸಂಘರ್ಷ ಕಡಿಮೆ ಮಾಡಲು ಪಿಐಟಿ ಟ್ಯಾಗ್‌ ಮೊರೆ ಹೋದ ಕರ್ನಾಟಕ ಅರಣ್ಯ ಇಲಾಖೆ
ಮಾನವ-ಹಾವಿನ ಸಂಘರ್ಷ ಕಡಿಮೆ ಮಾಡಲು ಪಿಐಟಿ ಟ್ಯಾಗ್‌ ಮೊರೆ
ಸಾಧು ಶ್ರೀನಾಥ್​
|

Updated on: Nov 14, 2023 | 10:26 AM

Share

ಹುಬ್ಬಳ್ಳಿ: ಮಾನವ-ಹಾವಿನ ಸಂಘರ್ಷ ಕಡಿಮೆ ಮಾಡಲು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮಹತ್ವದ ಅಧ್ಯಯನಕ್ಕೆ ಮುಂದಾಗಿದೆ. ಹಾವುಗಳಿಗೆ ನಿಷ್ಕ್ರಿಯ ಇಂಟಿಗ್ರೇಟೆಡ್ ಟ್ರಾನ್ಸ್‌ಪಾಂಡರ್ (ಪಿಐಟಿ) ಟ್ಯಾಗ್‌ಗಳನ್ನು (Passive Integrated Transponder -PIT tags) ಅಳವಡಿಸಲು ಕರ್ನಾಟಕ ಅರಣ್ಯ ಇಲಾಖೆಯು ಸಂಶೋಧನಾ ಮೌಲ್ಯಮಾಪನ ಸಮಿತಿಯಿಂದ ಉತ್ತರ ಕನ್ನಡ ಜಿಲ್ಲೆಯ (Uttara Kannada district) ಕಾಳಿ ಹುಲಿ ಸಂರಕ್ಷಿತ ಪ್ರದೇಶ ಸಂಸ್ಥೆಗೆ (ಕೆಟಿಆರ್ -Kali Tiger Reserve -KTR) ಅನುಮತಿ ನೀಡಿದೆ. ಇದು ಹಾವುಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಮಾನವ-ಹಾವುಗಳ ಘರ್ಷಣೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪ್ರಸ್ತುತ, ಅದು ನಾಗರಹಾವು, ರಸೆಲ್ಸ್ ವೈಪರ್ ಮತ್ತು ಪಿಟ್ ವೈಪರ್‌ಗಳ ಕುರಿತು ಮೂರು ಖಾಸಗಿ ಕಾರ್ಯಯೋಜನೆಗಳ ಮುಖಾಂತರ ಕರ್ನಾಟಕ ಅರಣ್ಯ ಇಲಾಖೆಯು ಟೆಲಿಮೆಟ್ರಿಕ್ ಅಧ್ಯಯನಗಳನ್ನು ನಡೆಸುತ್ತಿವೆ.

ಅರಣ್ಯ ಇಲಾಖೆಯು ಎಲ್ಲಾ ರೀತಿಯ ಹಾವುಗಳನ್ನು ಗಣನೆಗೆ ತೆಗೆದುಕೊಳ್ಳಲಿದೆ. ಕೆಟಿಆರ್‌ ಸಂಸ್ಥೆಯಲ್ಲಿ ತರಬೇತಿ ಪಡೆದ ಸಿಬ್ಬಂದಿ, ಸರೀಸೃಪವು ಮನುಷ್ಯರ ಜೊತೆ ಎಷ್ಟು ಬಾರಿ ಸಂಘರ್ಷಕ್ಕೆ  (human-snake conflict) ಒಳಗಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲಾಗುವುದು. ಸಂಸ್ಥೆಯ ಸಿಬ್ಬಂದಿ ರಕ್ಷಿಸುವ ಪ್ರತಿಯೊಂದು ಹಾವು ವಿಷಕಾರಿ ಅಥವಾ ವಿಷಕಾರಿಯಲ್ಲದಿದ್ದರೂ ಅದರೊಳಗೆ ಮೈಕ್ರೋಚಿಪ್ ಅನ್ನು ಸೇರಿಸುತ್ತಾರೆ. ದತ್ತಾಂಶದ ಆಧಾರದ ಮೇಲೆ ಸಂಘರ್ಷವನ್ನು ತಗ್ಗಿಸುವ ಕ್ರಮಗಳನ್ನು ಯೋಜಿಸಲಾಗುವುದು ಎಂದು deccanherald.com ವರದಿ ಮಾಡಿದೆ.

ಕೆಟಿಆರ್‌ ಸಂಸ್ಥೆಯ ಉಪ ವಲಯ ಅರಣ್ಯಾಧಿಕಾರಿಗಳ ಪ್ರಕಾರ ಬೇಸಿಗೆಯಲ್ಲಿ ದಿನಕ್ಕೆ ಸರಾಸರಿ ಐದರಿಂದ ಎಂಟು ಹಾವುಗಳನ್ನು ರಕ್ಷಿಸಲಾಗುತ್ತದೆ.

ಭಾರತದಲ್ಲಿನ ಮಾನವ-ವನ್ಯಜೀವಿ ಸಂಘರ್ಷಗಳಲ್ಲಿ ಹಾವು ಕಡಿತವು ಅತಿ ಹೆಚ್ಚು ಮಾನವ ಸಾವುನೋವುಗಳಿಗೆ ಕಾರಣವಾಗುತ್ತದೆ ಎಂದು ವರದಿಗಳು ಸೂಚಿಸುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಪ್ರತಿ ವರ್ಷ ಭಾರತವು ಸುಮಾರು 50 ಲಕ್ಷ ಹಾವು ಕಡಿತ ಪ್ರಸಂಗಗಳು ವರದಿಯಾಗುತ್ತವೆ. ಇದರ ಪರಿಣಾಮವಾಗಿ 81,000 ರಿಂದ 1.38 ಲಕ್ಷ ಜನರು ಸಾವನ್ನಪ್ಪುತ್ತಾರೆ ಮತ್ತು ಬಾಧಿತರ ಪೈಕಿ 4 ಲಕ್ಷಕ್ಕೂ ಹೆಚ್ಚು ಜನರಿಗೆ ಅಂಗಚ್ಛೇದನ ಮಾಡಲಾಗುತ್ತದೆ.

ಉತ್ತರ ಕನ್ನಡದ ದಟ್ಟಕಾಡುಗಳೊಳಗೆ, ವಿಶೇಷವಾಗಿ ಕೆಟಿಆರ್ ವ್ಯಾಪ್ತಿಯಲ್ಲಿ ಭಾರೀ ಜನಸಂಖ್ಯೆ ವಾಸಿಸುವುದನ್ನು ಗಮನಿಸಿದರೆ, ಮಾನವ-ಹಾವುಗಳ ಸಂಘರ್ಷದ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಮತ್ತು ಸಹಬಾಳ್ವೆಯ ಕಡೆಗೆ ಪರಿಹಾರವನ್ನು ಕಂಡುಹಿಡಿಯಲು ಹೆಚ್ಚಿನ ಅಧ್ಯಯನವನ್ನು ನಡೆಸುವ ಅಗತ್ಯವಿದೆ.

ಕೆಟಿಆರ್ ಪ್ರದೇಶವು ನಾಗರಹಾವು, ಸ್ಪೆಕ್ಟಕಲ್ಡ್​​​ ನಾಗರಹಾವು, ರಸೆಲ್ಸ್ ವೈಪರ್, ಗರಗಸದ ವೈಪರ್, ಸಾಮಾನ್ಯ ಕ್ರೈಟ್, ವೈನ್ ಹಾವು, ಹಸಿರು ಅಥವಾ ಬಿದಿರು ಪಿಟ್ ವೈಪರ್ (ಎಲ್ಲಾ ವಿಷಕಾರಿ), ಭಾರತೀಯ ರಾಕ್ ಹೆಬ್ಬಾವು ಮತ್ತು ಇಲಿ ಹಾವು ಸೇರಿದಂತೆ 40 ಕ್ಕೂ ಹೆಚ್ಚು ಬಗೆಯ ಹಾವುಗಳಿಗೆ ನೆಲೆಯಾಗಿದೆ.

ಕೆಟಿಆರ್‌ನ ವನ್ಯಜೀವಿ ಸಂಶೋಧನೆ ಮತ್ತು ತರಬೇತಿ ಕೇಂದ್ರವು ಡೇಟಾವನ್ನು ಸಂಗ್ರಹಿಸುತ್ತದೆ, ಅದನ್ನು ವಿಶ್ಲೇಷಿಸುತ್ತದೆ ಮತ್ತು ಸಂಘರ್ಷ ತಗ್ಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ರೂಪಿಸುತ್ತದೆ. ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ್ ರೆಡ್ಡಿ ಮಾತನಾಡಿ, ಈ ಯೋಜನೆಯು ಮಾನವ-ಹಾವುಗಳ ಸಂಘರ್ಷದ ಬಗ್ಗೆ ಹೆಚ್ಚು ಅಗತ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ನೀಡುತ್ತದೆ. ಯೋಜನೆಯು ಮೂರು ಮುಖ್ಯ ಉದ್ದೇಶಗಳನ್ನು ಹೊಂದಿದೆ: ರಕ್ಷಿಸಿದ ಎಲ್ಲಾ ಹಾವುಗಳ ವೈಜ್ಞಾನಿಕ ಡೇಟಾಬೇಸ್ ಅನ್ನು ನಿರ್ವಹಿಸುವುದು, PIT-ಟ್ಯಾಗಿಂಗ್ ಮೂಲಕ ಅವುಗಳ ಮೇಲ್ವಿಚಾರಣೆ ಮಾಡಿ ಮತ್ತು ಪರಿಸರ ವಿಜ್ಞಾನಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ಸಾಮರ್ಥ್ಯ ಮತ್ತು ಇತ್ತೀಚಿನ ಮೇಲ್ವಿಚಾರಣಾ ತಂತ್ರಗಳ ಮೂಲಕ ಹಾವುಗಳ ಸಂರಕ್ಷಣೆಗೆ ಮುಂದಾಗುತ್ತೇವೆ ಎಂದಿದ್ದಾರೆ.

ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ ಇದೇ ರೀತಿಯ ಅಧ್ಯಯನಗಳು ನಾಗರಹಾವಿನ ಬಗ್ಗೆ ಹಲವಾರು ರಹಸ್ಯಗಳನ್ನು ಬಹಿರಂಗಪಡಿಸಿವೆ; ಹುಣಸೂರು ಮೂಲದ ಹರ್ಪಿಟಾಲಜಿಸ್ಟ್ ಗೆರ್ರಿ ಮಾರ್ಟಿನ್ ಅವರು ಹಾವು ಕಡಿತದಿಂದ ರೈತರ ಸಾವು ಸಮಭವಿಸುವುದರ ಹಿಂದೆ ನಾಲ್ಕು ವಿಷಕಾರಿ ಹಾವುಗಳಲ್ಲಿ ಒಂದಾದ ರಸೆಲ್ಸ್ ವೈಪರ್ ಅನ್ನು ಅಧ್ಯಯನ ಮಾಡುತ್ತಿದ್ದಾರೆ; ಆಗುಂಬೆಯ ಮಳೆಕಾಡು ಪರಿಸರ ವಿಜ್ಞಾನದ ಕಳಿಂಗ ಕೇಂದ್ರದ ಸಂಶೋಧಕಿ ಪ್ರಿಯಾಂಕಾ ಸ್ವಾಮಿ ಪಿಟ್ ವೈಪರ್‌ಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ.

ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?