AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರೆಂಟು ವಿಘ್ನ ಎದುರಿಸಿ ಇಂದು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿ ಕುಳಿತು ಕುಳಿತುಕೊಳ್ಳಲಿರುವ ಗಣೇಶ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ ಗಣೇಶೋತ್ಸವಕ್ಕೆ ಪೊಲೀಸ್​ರೂ ಕೂಡಾ ಸನ್ನದ್ಧರಾಗಿದ್ದಾರೆ.

ಶಿವಕುಮಾರ್ ಪತ್ತಾರ್
| Edited By: |

Updated on:Sep 19, 2023 | 9:15 AM

Share

ಹುಬ್ಬಳ್ಳಿ ಸೆ.19: ವಾಣಿಜ್ಯ ನಗರಿ ಹುಬ್ಬಳ್ಳಿ (Hubballi) ಹೃದಯಭಾಗ ಚೆನ್ನಮ್ಮ ವೃತ್ತದ (Chennamma Circle) ಪಕ್ಕದಲ್ಲಿರುವ ಈದ್ಗಾ (ಚೆನ್ನಮ್ಮ) ಮೈದಾನದಲ್ಲಿ (Idgah Ground) ಗಣೇಶ (Ganesha) ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಹೇರಂಬನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ ಗಣೇಶೋತ್ಸವಕ್ಕೆ ಪೊಲೀಸ್​ರೂ ಕೂಡಾ ಸನ್ನದ್ಧರಾಗಿದ್ದಾರೆ. ಈಗಾಗಲೆ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಳಿಗ್ಗೆ 9.30 ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಗಣೇಶನ ಮೆರವಣಿಗೆ ಆರಂಭವಾಗುತ್ತದೆ.ಮೆರವಣಿಗೆ ಮುಖಾಂತರ ಗಣೇಶ ಮೂರ್ತಿ ಈದ್ಗಾ ಮೈದಾನಕ್ಕೆ ಕರೆತರಲಾಗುತ್ತದೆ. ಸರಿಯಾಗಿ 10.30 ಕ್ಕೆ ಐದು ಅಡಿ ಎತ್ತರದ ಮಣ್ಣಿನ ಗಣೇಶ ಮೂರ್ತಿಯನ್ನು ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ನಂತರ ಹೋಮ, ಹವನ ಜೊತೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರುತ್ತದೆ. ತದನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮೂರು ದಿನಗಳ ಕಾಲ ಇದೆ ರೀತಿಯ ಧಾರ್ಮಿಕ ಕಾರ್ಯಕ್ರಮ ಜರಗುಲಿವೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದ ವಿವಾದದ ಹಿಂದಿನ ಕಥೆ ಏನು? ಇಲ್ಲಿದೆ ಮಾಹಿತಿ

ಇನ್ನೂ ಶಾಂತಿಯುತವಾಗಿ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆ ಸಹ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ಮೈದಾನವನ್ನು ಎರಡು ಭಾಗ ಮಾಡಿ, ನಮಾಝ್ ಮಾಡುವ ಸ್ಥಳ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸ್ಥಳದ ನಡುವೆ ತಗಡಿನ ಸೀಟ್​ಗಳನ್ನು ಹಾಕಿ ಅದರ ಮೇಲೆ ಪರದೆ ಕಟ್ಟಲಾಗಿದೆ‌.

ಮೈದಾನದಲ್ಲಿ ಸುತ್ತಲೂ ಸಿಸಿ ಕ್ಯಾಮರಾಗಳ‌ನ್ನು ಅಳವಡಿಸಲಾಗಿದೆ. ಮೈದಾನದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಆರಂಭಿಸಲಾಗಿದೆ, ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಈದ್ಗಾ ಮೈದಾನಕ್ಕೆ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Tue, 19 September 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ