AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ಬೆಡ್‌ನಲ್ಲಿ ಇಬ್ಬರಿಗೆ ಚಿಕಿತ್ಸೆ

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳಿಗೆ ಆಕ್ಸಿಜನ್ ಸಮೇತ ಚಿಕಿತ್ಸೆ ನೀಡಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದ್ರೆ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ಬೆಡ್‌ನಲ್ಲಿ ಇಬ್ಬರಿಗೆ ಚಿಕಿತ್ಸೆ
ಒಂದೇ ಬೆಡ್ನಲ್ಲಿ ಇಬ್ಬರಿಗೆ ಚಿಕಿತ್ಸೆ
ಆಯೇಷಾ ಬಾನು
|

Updated on:Apr 28, 2021 | 11:33 AM

Share

ಹುಬ್ಬಳ್ಳಿ: ನಗರದ ಕಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳನ್ನ ಒಂದೇ ಬೆಡ್‌ನಲ್ಲಿ ಮಲಗಿಸಿ ಚಿಕಿತ್ಸೆ ನೀಡ್ತಿರುವ ವಿಡಿಯೋ ವೈರಲ್ ಆಗಿದೆ.

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳಿಗೆ ಆಕ್ಸಿಜನ್ ಸಮೇತ ಚಿಕಿತ್ಸೆ ನೀಡಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದ್ರೆ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬೆಡ್ಗಳ ಕೊರತೆ ಇಲ್ಲ. 1200 ಬೆಡ್ಗಳನ್ನ ವ್ಯವಸ್ಥೆ ಮಾಡಲಾಗಿದೆ ಅಂತ ಜಿಲ್ಲಾಡಳಿತ ಹೇಳುತ್ತಿದೆ. ಹಾಗಾದ್ರೆ ಕಿಮ್ಸ್ ಮತ್ತೆ ಬೆಡ್ಗಳ ಕೊರತೆಯನ್ನ ಎದುರಿಸುತ್ತಿದಿಯಾ ಎನ್ನುವ ಆತಂಕ ಹುಟ್ಟಿದೆ.

ಇನ್ನು ಹಳೆ ಬಿಲ್ಡಿಂಗ್ನ ತುರ್ತು ಚಿಕಿತ್ಸಾ ವಿಭಾಗದಲ್ಲಿ ಇಂತಹದೊಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕಿಮ್ಸ್ನದ್ದೇಯೇ ಎಂಬ ಬಗ್ಗೆ ಮಾಹಿತಿ ಇಲ್ಲ. ಕೊರೊನಾ ಸೇರಿದಂತೆ ನಾನ್ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ಗಳಿಲ್ಲದ ಕಾರಣ ಒಂದೇ ಬೆಡ್ನಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಪ್ರಕರಣ ನಮ್ಮಲ್ಲಿ ನಡೆದಿದೆಯೇ ಎಂದು ಪರಿಶೀಲಿಸುತ್ತಿದ್ದೇವೆ. ಅಷ್ಟಕ್ಕೂ ಈ ವಿಡಿಯೋ ನಮ್ಮದೇ ಆಸ್ಪತ್ರೆಯದಾ ಎಂಬ ಬಗ್ಗೆ ನಮಗೆ ಅನುಮಾನವಿದೆ ಎಂದು ಬೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

Published On - 10:37 am, Wed, 28 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ