AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟದಿಂದ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ. ಅಪ್ರಾಪ್ತ ಚಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಮಕ್ಕಳಿಗೆ ವಾಹನ ನೀಡುವ ಪಾಲಕರು ಕೂಡ ಭಾರಿ ಬೆಲೆ ತೆರಬೇಕಾಗುತ್ತದೆ ಎಂಬುವುದಕ್ಕೆ ಈ ಘಟನೆ ಉದಾಹರಣೆ ಆಗಿದೆ.

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ
ಅರೆಸ್ಟ್​ ಆದ ತಂದೆ, ಅಪಘಾತವಾದ ಕಾರುImage Credit source: tv9 kannada
ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 22, 2026 | 10:30 PM

Share

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ರೀಲ್ಸ್ ತಂದ ಆಪತ್ತು

ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ ಕೈಯಲ್ಲಿ ಮೊಬೈಲ್​​ಗಳಿವೆ. ರೀಲ್ಸ್ ನೋಡೋದು, ರೀಲ್ಸ್ ಮಾಡೋದು ಇಂದಿನ ಗೀಳಾಗಿದೆ. ಅದರಲ್ಲೂ ಬಾಲಕರು, ಹದಿಹರೆಯದ ಯುವಕರು ವಾಹನಗಳನ್ನು ಕ್ರ್ಯಾಶ್ ಮಾಡೋದು ಸೇರಿದಂತೆ ಅನೇಕ ಸ್ಟಂಟ್​ಗಳ ವಿಡಿಯೋ ನೋಡುವುದು, ಅದೇ ರೀತಿ ಮಾಡೋದನ್ನು ಹೆಚ್ಚಾಗಿ ಮಾಡ್ತಿದ್ದಾರೆ. ಇದೇ ರೀತಿ ವಾಹನಗಳ ಕ್ರ್ಯಾಶ್ ಮಾಡೋ‌ ವಿಡಿಯೋ ಮಾಡಲು ಹೋದಾಗ ನಡೆಯಬಾರದ ಘಟನೆಯೊಂದು ಹುಬ್ಬಳ್ಳಿಯಲ್ಲಿ ಮಾರ್ಚ್ 19 ರಂದು ನಡೆದಿತ್ತು.‌

ನಡೆದಿದ್ದೇನು?

ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಲಕ್ಷ್ಮಿ ನಗರದ ನಮೀಷ್ ಸಂಗಳದ ಮೃತ ಬಾಲಕ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಪುತ್ರನಾಗಿದ್ದ ನಮೀಷ್, ಯುಗಾದಿ ಹಬ್ಬದ ದಿನ ಶೇಜವಾಡ್ಕರ್ ಪ್ಲಾಟ್​ನಲ್ಲಿ ಸ್ನೇಹಿತರ ಜೊತೆ ರೀಲ್ಸ್ ಮಾಡಲು ಹೋಗಿದ್ದ. ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಘೋರ ದುರಂತ, ಬಿಜೆಪಿ ಮುಖಂಡನ ಪುತ್ರ ಬಲಿ

ಇನ್ನು ನಮೀಷ್ ಸಂಗಳದ್ ಹಾಗೂ ಕಾರು ಓಡಿಸುತ್ತಿದ್ದ ಬಾಲಕ ಮತ್ತು ಇನ್ನಿಬ್ಬರು ಬಾಲಕರು ಸೇರಿ ಒಟ್ಟು‌ ನಾಲ್ವರು ಬಾಲಕರು ಕ್ರ್ಯಾಶ್ ರೀಲ್ಸ್ ಮಾಡಲು ಹೋಗಿದ್ದರಂತೆ. ನಮೀಷ್ ಸಂಗಳದ ಸ್ಕೂಟಿ ಓಡಿಸಿಕೊಂಡು ಬರ್ತಿದ್ದರೆ ಎದುರಿನಿಂದ ಅಪ್ರಾಪ್ತ ಬಾಲಕ ಕಾರು ಓಡಿಸಿಕೊಂಡು ಬರ್ತಿದ್ದ. ಅವು ಎರಡು ಕ್ರ್ಯಾಶ್ ಆಗುವ ವಿಡಿಯೋವನ್ನು ಇನ್ನಿಬ್ಬರು ಬಾಲಕರು ಮಾಡಲು ಮುಂದಾಗಿದ್ದರಂತೆ. ಆದರೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಕಾರು ಹಾಗೂ ಸ್ಕೂಟಿ ತೀರಾವೇಗವಾಗಿದ್ದರಿಂದ ನಿಯಂತ್ರಣ ತಪ್ಪಿ ಸ್ಕೂಟಿ ಮತ್ತು ಕಾರ್ ನಡುವೆ ಅಪಘಾತವಾಗಿತ್ತು. ಹೀಗಾಗಿ ಸ್ಥಳದಲ್ಲೇ ಬಾಲಕ ಮೃತ ಪಟ್ಟಿದ್ದ.

ಬಾಲಕನ ತಂದೆ ಅರೆಸ್ಟ್​​

ಅಪಘಾತ ಮಾಡಿರುವ 17ನೇ ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಿ ಬಾಲಕರ ಬಾಲ ಮಂದಿರಕ್ಕೆ ಕಳುಹಿಸಿದರೆ, ಅಪ್ರಾಪ್ತ ಮಗನಿಗೆ ಕಾರು ನೀಡಿದ್ದ ಬಾಲಕನ ತಂದೆ ನಾಗರಾಜ್ ರಾಯ್ಕರ್​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರೀಲ್ಸ್ ಹುಚ್ಚಾಟವಾಡಬಾರದು. ಹೆತ್ತವರು ಮಕ್ಕಳಿಗೆ ತಮ್ಮ ವಾಹನ ನೀಡಬಾರದು ಅಂತ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸೇತುವೆ ಮೇಲೆ ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ವ್ಯಾನ್ ಡಿಕ್ಕಿ: ಮೂವರು ದಾರುಣ ಸಾವು

ಮಕ್ಕಳ ರೀಲ್ಸ್ ಹುಚ್ಚಾಟಕ್ಕೆ ಓರ್ವ ತಂದೆ ತನ್ನ ಮಗನನ್ನು ಕಳೆದುಕೊಂಡರೆ ಅಪಘಾತ ಮಾಡಿದ ಬಾಲಕ ಮತ್ತು ಆತನ ತಂದೆಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆತ್ತವರು ತಮ್ಮ ಮಕ್ಕಳ ಆಟೋಟೋಪಕ್ಕೆ ಬ್ರೇಕ್ ಹಾಕುವ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಜೊತೆಗೆ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಹೆತ್ತವರು ಕಂಬಿ ಹಿಂದೆ‌ ಹೋಗಬೇಕಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:27 pm, Sun, 22 March 26

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!