AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಮನಸೋತ ಪ್ರೇಕ್ಷಕರು

ಮೊದಲ ಬಹುಮಾನವನ್ನು ಬೆಳಗಾವಿಯ ಅಪ್ಪು ಪೈಲ್ವಾನ್ ಮುಡಿಗೇರಿಸಿಕೊಂಡರು. ದ್ವೀತಿಯ ಬಹಮಾನಕ್ಕೆ ಕಾರ್ತೀಕ್ ಇಂಗಳಗಿ ಹಾಗೂ ಪರಶುರಾಮ ಅವರ ನಡುವೆ ಕುಸ್ತಿ ನಡೆಯಿತು. ಮೂರನೇ ಬಹುಮಾನವನ್ನು ಸುನೀಲ್ ಪೈಲ್ವಾನ್ ಪಡೆದುಕೊಂಡರು.

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಮನಸೋತ ಪ್ರೇಕ್ಷಕರು
ಪೈಲ್ವಾನರ ಜಿದ್ದಾಜಿದ್ದಿ
TV9 Web
| Edited By: |

Updated on: Apr 07, 2022 | 5:07 PM

Share

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆ ಅಂದರೆ ಉತ್ತರ ಕರ್ನಾಟಕ (Uttara Karnataka) ಭಾಗದ ಹೆಸರಾಂತ ಜಾತ್ರೆ. ಈ ಜಾತ್ರೆ ತನ್ನದೇ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಜಾತ್ರೆಗೆ ಕುಸ್ತಿ ಪಟುಗಳು (Wrestlers) ಆಗಮಿಸಿ ತಮ್ಮ ಪ್ರದರ್ಶನ ನೀಡುತ್ತಾರೆ. ಈ ಜಾತ್ರೆ ಸಾಂಸ್ಕೃತಿಕ ಹಾಗೂ ಜಾನಪದ, ಕ್ರೀಡೆಗಳಿಗೆ ಪ್ರೋತ್ಸಾಹವಂತದ್ದು. ಹುಬ್ಬಳ್ಳಿಯ ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯ ಅಂಗವಾಗಿ ನಡೆದ ಬಯಲು ಕುಸ್ತಿ ಸ್ಪರ್ಧೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಪ್ರೇಕ್ಷಕರು ಮನಸೋತರು. ಜಾತ್ರೆ ನಡೆಯುವಾಗ ಪ್ರತಿ ವರ್ಷವೂ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿತ್ತು.

ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಸ್ಪರ್ಧೆಗಳು ನಡೆದಿರಲಿಲ್ಲ. ಆದ್ದರಿಂದ ಈ ಬಾರಿ ನಡೆದ ಜಿದ್ದಾಜಿದ್ದಿಗೆ ಸಾವಿರಾರು ಕುಸ್ತಿ ಪ್ರೇಮಿಗಳು ಸಾಕ್ಷಿಯಾದರು. ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳ ಕುಸ್ತಿಪಟುಗಳು ಹಾಕಿದ ಪಟ್ಟುಗಳು ಗಮನ ಸೆಳೆದವು. ಎಂಟು ವರ್ಷದ ಬಾಲಕರಿಂದ ಹಿಡಿದು ಪುರುಷರ ತನಕ ವಿವಿಧ ವಯೋಮಾನದ ಪೈಲ್ವಾನರಿಗೆ ಸ್ಪರ್ಧೆಗಳು ನಡೆದವು. ಮೊದಲ ನಾಲ್ಕು ಸಂಖ್ಯೆಗಳ ಕುಸ್ತಿಯ ವೇಳೆ ಸ್ಪರ್ಧಿ ಹಾಗೂ ಪ್ರತಿಸ್ಪರ್ಧಿ ಗೆಲುವಿಗಾಗಿ ಹೋರಾಟ ಮಾಡುತ್ತಿದ್ದಾಗ ಜನ ಚಪ್ಪಾಳೆ ಹೊಡೆದು ಸಂಭ್ರಮಿಸಿದರು.

ಇನ್ನು ಉಣಕಲ್ ಗ್ರಾಮದ ಹಿರಿಯ ಪೈಲ್ವಾನರು ಹಾಗೂ ಕುಸ್ತಿ ಪ್ರೇಮಿಗಳು ತಮ್ಮ ಕುಟುಂಬದ ಹಿರಿಯರ ಹೆಸರಿನಲ್ಲಿ ಪಂದ್ಯಗಳನ್ನು ಕಟ್ಟಿದರು. ಇದರಿಂದ ಪ್ರತಿ ಸ್ಪರ್ಧೆಗಳು ರಂಗೇರಿದ್ದವು. ಮೊದಲ ಬಹುಮಾನ 21 ಸಾವಿರ ರೂ., ದ್ವಿತೀಯ 15 ಸಾವಿರ ರೂ., ಮೂರನೇ 10 ಸಾವಿರ ರೂ. ಮತ್ತು ನಾಲ್ಕನೇ ವಿಜೇತರಿಗೆ 5,000 ರೂಪಾಯಿ ನೀಡಲಾಯಿತು.

ಮೊದಲ ಬಹುಮಾನವನ್ನು ಬೆಳಗಾವಿಯ ಅಪ್ಪು ಪೈಲ್ವಾನ್ ಮುಡಿಗೇರಿಸಿಕೊಂಡರು. ದ್ವೀತಿಯ ಬಹಮಾನಕ್ಕೆ ಕಾರ್ತೀಕ್ ಇಂಗಳಗಿ ಹಾಗೂ ಪರಶುರಾಮ ಅವರ ನಡುವೆ ಕುಸ್ತಿ ನಡೆಯಿತು. ಮೂರನೇ ಬಹುಮಾನವನ್ನು ಸುನೀಲ್ ಪೈಲ್ವಾನ್ ಪಡೆದುಕೊಂಡರು. ನಾಲ್ಕನೇ ಬಹುಮಾನದಲ್ಲಿ ಜಟ್ಟಿಗಳಾದ ದೃವ ಕೋಟಿ ಉಣಕಲ್ ಮತ್ತು ಲಿಂಗರಾಜ ಬೊಮ್ಮನಹಳ್ಳಿ ನಡುವೆ ರೋಚಕ ಪಂದ್ಯ ಏರ್ಪಟ್ಟಿತು. ಆದರೆ ಫಲಿತಾಂಶ ಮಾತ್ರ ಸಮವೆಂದು ಹೊರ ಬಿತ್ತು.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ

IPL 2022 PBKS vs GT Live Streaming: ಗುಜರಾತ್- ಪಂಜಾಬ್ ಮುಖಾಮುಖಿ; ಪಂದ್ಯದ ಬಗೆಗಿನ ಪೂರ್ಣ ಮಾಹಿತಿ

ಬೆಳಗಾವಿ ಅಜ್ಜಿ ಬಳ್ಳಾರಿ ಕಾಲೇಜಿಗೆ ದೇಹ ದಾನ ಮಾಡಿ ಸಾರ್ಥಕತೆ ಮೆರೆದರು ! ಇದಕ್ಕೆ ಪ್ರೇರಣೆ ಯಾರು? ಇಲ್ಲಿದೆ ಕ್ರಾಂತಿಕಾರಿ ಸ್ಟೋರಿ!

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್