AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ: ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು

ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಇರೋ ಜನತಾ ಮಾರುಕಟ್ಟೆ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಯ್ತು. ಆದರೆ ಇನ್ನು‌ ಮಳಿಗೆ ಹಂಚಿಕೆಯಾಗಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಕೆಲಸ ಮುಗಿದರೂ ಅದು ಪಾಲಿಕೆಗೆ ಹಸ್ತಾಂತರವಾಗಿಲ್ಲ.ಇಂದು ಪಾಲಿಕೆ ಅಧಿಕಾರಿಗಳು ಮಾರುಕಟ್ಟೆ ವಿಸಿಟ್ ಗೆ ಬಂದಾಗ ವ್ಯಾಪಾರಿಗಳು ಕೈ ಮುಗಿದು ನಮಗೆ ಮಳಿಗೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ.

2 ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ: ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು
ಮಾರುಕಟ್ಟೆ ಮಳಿಗೆ
ಶಿವಕುಮಾರ್ ಪತ್ತಾರ್
| Edited By: |

Updated on: Oct 20, 2023 | 11:04 PM

Share

ಹುಬ್ಬಳ್ಳಿ, ಅಕ್ಟೋಬರ್​​​ 20: ಸ್ಮಾರ್ಟ್ ಸಿಟಿ ಯೋಜನೆ (Smart City Project) ಯಲ್ಲಿ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಗಿದೆ. ಆದರೆ ಸ್ಮಾರ್ಟ್ ಸಿಟಿ, ಪಾಲಿಕೆ ಹಗ್ಗ ಜಗ್ಗಾಟದ ನಡುವೆ ಮಾರುಕಟ್ಟೆಯ ಮಳಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ಬೀದಿಯೇ ವ್ಯಾಪಾರಿಗಳಿಗೆ ಆಸರೆಯಾಗಿದೆ. ಹಲವಾರು ಬಾರಿ ಮಳಿಗೆ ಕೊಡಿ ಎಂದು ಮನವಿ ಮಾಡಿದರು, ಅಧಿಕಾರಿಗಳು ಮಳಿಗೆ ಕೊಟ್ಟಿಲ್ಲ. ಕೊನೆಗೆ ಪಾಲಿಕೆ ಅಧಿಕಾರಿಗಳು ಮಾರುಕಟ್ಟೆ ವಿಸಿಟ್ ಗೆ ಬಂದಾಗ ವ್ಯಾಪಾರಿಗಳು ಕೈ ಮುಗಿದು ನಮಗೆ ಮಳಿಗೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ.

ಹೌದು ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಇರೋ ಜನತಾ ಮಾರುಕಟ್ಟೆ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಯ್ತು. ಆದರೆ ಇನ್ನು‌ ಮಳಿಗೆ ಹಂಚಿಕೆಯಾಗಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಕೆಲಸ ಮುಗಿದರೂ ಅದು ಪಾಲಿಕೆಗೆ ಹಸ್ತಾಂತರವಾಗಿಲ್ಲ. ಅದಕ್ಕೆ ಪ್ರಮುಖ ಕಾರಣ ಗುಣಮಟ್ಟ ಸರಿ ಇಲ್ಲ ಅನ್ನೋ ಕಾರಣಕ್ಕೆ ಹುಧಾ ಪಾಲಿಕೆ ಕಾಮಗಾರಿಯನ್ನ ತನ್ನ ವ್ಯಾಪ್ತಿಗೆ ತಗೆದುಕೊಂಡಿಲ್ಲ. ಹೀಗಾಗಿ ಮಾರುಕಟ್ಟೆ ನಿರ್ಮಾಣವಾಗಿ ಎರಡು ವರ್ಷ ಆದರೂ ಮಳಿಗೆಗಳು ಖಾಲಿ ಬಿದ್ದಿವೆ.

ಇದನ್ನೂ ಓದಿ: ಅಧ್ಯಾಪಕರ ವಿನಿಮಯ: ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

ಖಾಲಿ ಬಿದ್ದ ಮಳಿಗೆಗಳನ್ನ ವೀಕ್ಷಣೆ ಮಾಡಲು ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಮೇಯರ್ ವೀಣಾ ಭಾರದ್ವಾಡ್ ಸ್ಥಳಕ್ಕೆ ಆಗಮಿಸಿದ್ರು‌. ಈ ವೇಳೆ ವ್ತಾಪಾರಿಗಳು ನಮಗೆ ಮಳಿಗೆ ಕೊಡಿ ಎಂದು ಕೈ ಮುಗಿದು ಭಾವುಕರಾಗಿದ್ದಾರೆ. ನಾವು ಬೀದಿಯಲ್ಲಿ ಸಾಯುತ್ತಿದ್ದೇವೆ ಎಂದು ವ್ಯಾಪಾರಿಗಳು ಆಕ್ರೋಶ ಹೊರಹಾಕಿದರು. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ, ಪಾಲಿಕೆ ನಡುವಿನ ಹಗ್ಗ ಜಗ್ಗಾಟಕ್ಕೆ ಅಮಾಯಕ ವ್ಯಾಪರಿಗಳ ಬದುಕು ಬೀದಿಯಲ್ಲಿದೆ.ಹೀಗಾಗಿ ವ್ಯಾಪಾರಿಗಳು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.

ಇದನ್ನೂ ಓದಿ: ಧಾರವಾಡ: ದೋಷಯುಕ್ತ ಇವಿ ವಾಹನ: ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ

ಹುಬ್ಬಳ್ಳಿ ಜನತಾ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಯ್ತು. ಹುಧಾ ಅವಳಿ ನಗರದಲ್ಲಿ ಹೆಚ್ಚು ಕಡಿಮೆ 63 ಕಾಮಗಾರಿಗಳು ಪಾಲಿಕೆಗೆ ಹಸ್ತಾಂತರವಾಗಿವೆ. ಆದರೆ ಜನತಾ ಮಾರ್ಕೆಟ್ ಇದುವರೆಗೂ ಹಸ್ತಾಂತರ ಆಗಿಲ್ಲ. ಪರಿಣಾಮ ನೂರಾರು ವ್ಯಾಪಾರಿಗಳು ಇಂದಿಗೂ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ.

ನೂರಾರು ಕೋಟಿ ವೆಚ್ಚದಲ್ಲಿ ಜನತಾ ಮಾರ್ಕೆಟ್ ನಿರ್ಮಾಣವಾಗಿದ್ದರು, ಮಾರಾಟಕ್ಕೆ ಮುಕ್ತವಾಗದೆ ಹಾಳಾಗ್ತಿವೆ. ಇದೇ ಕಾರಣಕ್ಕೆ ಪಾಲಿಕೆ ಸರ್ಕಾರದ ಗಮನಕ್ಕೂ ವಿಷಯ ತಂದಿದೆ. ಇದೇ ಕಾರಣಕ್ಕೆ ಪಾಲಿಕೆ ಅಧಿಕಾರಿಗಳು ಜನತಾ ಮಾರುಕಟ್ಟೆಗೆ ಭೆಟಿ ನೀಡಿ ಪರಿಶೀಲನೆ ಮಾಡಿ, ಮುಂಬರುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ಮಾರುಕಟ್ಟೆ ಮುಕ್ತ ಮಾಡುವುದಕ್ಕೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಟ್ಟಿದ ಜನತಾ ಮಾರ್ಕೆಟ್ ಹಳ್ಳ ಹಿಡದಿದೆ. ಮಾರುಕಟ್ಟೆಯ ಮಳಿಗೆ ನಂಬಿದ್ದ ನೂರಾರು ವ್ಯಾಪಾರಿಗಳು ಇಂದಿಗೂ ಬೀದಿಯಲ್ಲಿದ್ದಾರೆ. ಇದೀಗ ಅಧಿಕಾರಿಗಳು ಭೇಟಿ ನೀಡಿದ್ದು,ಇನ್ನಾದರೂ ಮಾರುಕಟ್ಟೆಯ ಮಳಿಗೆ ವ್ಯಾಪಾರಿಗಳಿಗೆ ಮುಕ್ತವಾಗತ್ತಾ ಇಲ್ಲವಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ